ಬ್ರೇಕಿಂಗ್ ನ್ಯೂಸ್
05-04-22 02:04 pm Source: Vijayakarnataka ಸಿನಿಮಾ
'ದಳಪತಿ' ವಿಜಯ್ ಮತ್ತು ಪೂಜಾ ಹೆಗ್ಡೆ ಅಭಿನಯದ 'ಬೀಸ್ಟ್' ಸಿನಿಮಾ ಏಪ್ರಿಲ್ 13ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಒಂದು ವರ್ಷದ ನಂತರ ವಿಜಯ್ ಸಿನಿಮಾವೊಂದು ತೆರೆಗೆ ಬರುತ್ತಿರುವುದರಿಂದ ಫ್ಯಾನ್ಸ್ ಕುತೂಹಲದಿಂದ ಕಾಯುತ್ತಿದ್ದಾರೆ. ಈಚೆಗಷ್ಟೇ ರಿಲೀಸ್ ಆಗಿರುವ ಸಿನಿಮಾದ ಟ್ರೇಲರ್ ಎಲ್ಲರ ಗಮನಸೆಳೆಯುತ್ತಿದೆ. ತಮಿಳು ಜೊತೆಗೆ ಹಿಂದಿ, ತೆಲುಗು, ಕನ್ನಡದಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ ಒಂದು ಬ್ಯಾಡ್ ನ್ಯೂಸ್ ವಿಜಯ್ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ಅದೇನೆಂದರೆ, ಈ ಬಹುನಿರೀಕ್ಷಿತ 'ಬೀಸ್ಟ್' ಸಿನಿಮಾವನ್ನು ಕುವೈತ್ನಲ್ಲಿ ನೋಡುವಂತಿಲ್ಲ. ಅಲ್ಲಿ ಪ್ರದರ್ಶನ ಮಾಡದಂತೆ ಸಿನಿಮಾವನ್ನು ಬ್ಯಾನ್ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ! ಇದು ಸಿನಿಮಾ ತಂಡಕ್ಕೆ ದೊಡ್ಡ ಶಾಕ್ ನೀಡಿದೆ. ಅಷ್ಟಕ್ಕೂ ಇಂಥದ್ದೊಂದು ಖಡಕ್ ನಿರ್ಧಾರಕ್ಕೆ ಕಾರಣವೇನು?
ಮುಸ್ಲಿಮರನ್ನು ಟೆರರಿಸ್ಟ್ ರೀತಿ ತೋರಿಸುವ ಹಾಗಿಲ್ಲ!

ಕುವೈತ್ ಸರ್ಕಾರ ಒಂದು ನಿಯಮ ರೂಪಿಸಿದೆ. ಅದೇನೆಂದರೆ, ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ತೋರಿಸುವ ಹಾಗಿಲ್ಲ. ಹಾಗೇ ತೋರಿಸಿದರೆ, ಅಂಥ ಸಿನಿಮಾಗಳನ್ನು ಕುವೈತ್ನಲ್ಲಿ ಪ್ರದರ್ಶನ ಮಾಡುವುದಕ್ಕೆ ಅನುಮತಿ ನೀಡುವುದಿಲ್ಲ. ಇದೀಗ ಆ ನಿಯಮ 'ಬೀಸ್ಟ್'ಗೂ ಅನ್ವಯಿಸಲಿದೆ. ಅಷ್ಟಕ್ಕೂ ಸಿನಿಮಾದಲ್ಲಿ ಏನಿದೆ? ಚೆನ್ನೈನ ಪ್ರಸಿದ್ಧ ಮಾಲ್ ಮೇಲೆ ಟೆರರಿಸ್ಟ್ಗಳು ದಾಳಿ ಮಾಡಿ, ಮಾಲ್ನಲ್ಲಿ ಇರುವವರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುತ್ತಾರೆ. ಸಿನಿಮಾದಲ್ಲಿ ಸಾಕಷ್ಟು ಭಯೋತ್ಪಾದಕರ ಜೊತೆಗೆ ಹೀರೋ ಹೋರಾಡುತ್ತಾನೆ. ಅಲ್ಲದೆ, ಹಾಗೆ ಸಿನಿಮಾದಲ್ಲಿ ಬರುವ ಟೆರರಿಸ್ಟ್ ಪಾತ್ರಗಳು ಮುಸ್ಲಿಮರನ್ನು ಹೋಲುತ್ತವೆ. ಆ ಕಾರಣಕ್ಕಾಗಿ ಕುವೈತ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಇದೇ ಮೊದಲ ಬಾರಿ ಏನಲ್ಲ!

ಈ ರೀತಿ ಭಾರತದ ಸಿನಿಮಾಗಳನ್ನು ಕುವೈತ್ ಸರ್ಕಾರ ಬ್ಯಾನ್ ಮಾಡಿರುವುದು ಇದೇ ಮೊದಲ ಬಾರಿ ಏನಲ್ಲ. ಈಚೆಗೆ ತೆರೆಕಂಡ ಮಲಯಾಳಂ ಕುರುಪ್ ಮತ್ತು ತಮಿಳಿನ ಎಫ್ಐಆರ್ ಸಿನಿಮಾಗಳನ್ನು ಕೂಡ ಕುವೈತ್ ಸರ್ಕಾರ ಬ್ಯಾನ್ ಮಾಡಿತ್ತು. ಅದಕ್ಕೂ ಕೂಡ ಇದೇ ಅಂಶವೇ ಕಾರಣವಾಗಿತ್ತು. ಈ ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದು ಕುವೈತ್ ಸರ್ಕಾರದ ನೀತಿಗೆ ವಿರುದ್ಧವಾಗಿತ್ತು. ಇದೀಗ ವಿಜಯ್ ಅವರ 'ಬೀಸ್ಟ್' ರಿಲೀಸ್ಗೆ ತಡೆಯೊಡ್ಡಿರುವುದು ಅಲ್ಲಿರುವ ದಳಪತಿ ಫ್ಯಾನ್ಸ್ಗೆ ಬೇಸರ ಉಂಟು ಮಾಡಿದೆ. ಅವರೀಗ ಸಿನಿಮಾ ವೀಕ್ಷಿಸಲು ಬೇರೆಡೆಗೆ ಹೋಗಬೇಕಿದೆ.
Kuwait Government Bans Thalapathy Vijay Pooja Hegdes Beast Movie.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm