ಬ್ರೇಕಿಂಗ್ ನ್ಯೂಸ್
05-04-22 02:04 pm Source: Vijayakarnataka ಸಿನಿಮಾ
'ದಳಪತಿ' ವಿಜಯ್ ಮತ್ತು ಪೂಜಾ ಹೆಗ್ಡೆ ಅಭಿನಯದ 'ಬೀಸ್ಟ್' ಸಿನಿಮಾ ಏಪ್ರಿಲ್ 13ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಒಂದು ವರ್ಷದ ನಂತರ ವಿಜಯ್ ಸಿನಿಮಾವೊಂದು ತೆರೆಗೆ ಬರುತ್ತಿರುವುದರಿಂದ ಫ್ಯಾನ್ಸ್ ಕುತೂಹಲದಿಂದ ಕಾಯುತ್ತಿದ್ದಾರೆ. ಈಚೆಗಷ್ಟೇ ರಿಲೀಸ್ ಆಗಿರುವ ಸಿನಿಮಾದ ಟ್ರೇಲರ್ ಎಲ್ಲರ ಗಮನಸೆಳೆಯುತ್ತಿದೆ. ತಮಿಳು ಜೊತೆಗೆ ಹಿಂದಿ, ತೆಲುಗು, ಕನ್ನಡದಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ ಒಂದು ಬ್ಯಾಡ್ ನ್ಯೂಸ್ ವಿಜಯ್ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ಅದೇನೆಂದರೆ, ಈ ಬಹುನಿರೀಕ್ಷಿತ 'ಬೀಸ್ಟ್' ಸಿನಿಮಾವನ್ನು ಕುವೈತ್ನಲ್ಲಿ ನೋಡುವಂತಿಲ್ಲ. ಅಲ್ಲಿ ಪ್ರದರ್ಶನ ಮಾಡದಂತೆ ಸಿನಿಮಾವನ್ನು ಬ್ಯಾನ್ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ! ಇದು ಸಿನಿಮಾ ತಂಡಕ್ಕೆ ದೊಡ್ಡ ಶಾಕ್ ನೀಡಿದೆ. ಅಷ್ಟಕ್ಕೂ ಇಂಥದ್ದೊಂದು ಖಡಕ್ ನಿರ್ಧಾರಕ್ಕೆ ಕಾರಣವೇನು?
ಮುಸ್ಲಿಮರನ್ನು ಟೆರರಿಸ್ಟ್ ರೀತಿ ತೋರಿಸುವ ಹಾಗಿಲ್ಲ!

ಕುವೈತ್ ಸರ್ಕಾರ ಒಂದು ನಿಯಮ ರೂಪಿಸಿದೆ. ಅದೇನೆಂದರೆ, ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ತೋರಿಸುವ ಹಾಗಿಲ್ಲ. ಹಾಗೇ ತೋರಿಸಿದರೆ, ಅಂಥ ಸಿನಿಮಾಗಳನ್ನು ಕುವೈತ್ನಲ್ಲಿ ಪ್ರದರ್ಶನ ಮಾಡುವುದಕ್ಕೆ ಅನುಮತಿ ನೀಡುವುದಿಲ್ಲ. ಇದೀಗ ಆ ನಿಯಮ 'ಬೀಸ್ಟ್'ಗೂ ಅನ್ವಯಿಸಲಿದೆ. ಅಷ್ಟಕ್ಕೂ ಸಿನಿಮಾದಲ್ಲಿ ಏನಿದೆ? ಚೆನ್ನೈನ ಪ್ರಸಿದ್ಧ ಮಾಲ್ ಮೇಲೆ ಟೆರರಿಸ್ಟ್ಗಳು ದಾಳಿ ಮಾಡಿ, ಮಾಲ್ನಲ್ಲಿ ಇರುವವರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುತ್ತಾರೆ. ಸಿನಿಮಾದಲ್ಲಿ ಸಾಕಷ್ಟು ಭಯೋತ್ಪಾದಕರ ಜೊತೆಗೆ ಹೀರೋ ಹೋರಾಡುತ್ತಾನೆ. ಅಲ್ಲದೆ, ಹಾಗೆ ಸಿನಿಮಾದಲ್ಲಿ ಬರುವ ಟೆರರಿಸ್ಟ್ ಪಾತ್ರಗಳು ಮುಸ್ಲಿಮರನ್ನು ಹೋಲುತ್ತವೆ. ಆ ಕಾರಣಕ್ಕಾಗಿ ಕುವೈತ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಇದೇ ಮೊದಲ ಬಾರಿ ಏನಲ್ಲ!

ಈ ರೀತಿ ಭಾರತದ ಸಿನಿಮಾಗಳನ್ನು ಕುವೈತ್ ಸರ್ಕಾರ ಬ್ಯಾನ್ ಮಾಡಿರುವುದು ಇದೇ ಮೊದಲ ಬಾರಿ ಏನಲ್ಲ. ಈಚೆಗೆ ತೆರೆಕಂಡ ಮಲಯಾಳಂ ಕುರುಪ್ ಮತ್ತು ತಮಿಳಿನ ಎಫ್ಐಆರ್ ಸಿನಿಮಾಗಳನ್ನು ಕೂಡ ಕುವೈತ್ ಸರ್ಕಾರ ಬ್ಯಾನ್ ಮಾಡಿತ್ತು. ಅದಕ್ಕೂ ಕೂಡ ಇದೇ ಅಂಶವೇ ಕಾರಣವಾಗಿತ್ತು. ಈ ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದು ಕುವೈತ್ ಸರ್ಕಾರದ ನೀತಿಗೆ ವಿರುದ್ಧವಾಗಿತ್ತು. ಇದೀಗ ವಿಜಯ್ ಅವರ 'ಬೀಸ್ಟ್' ರಿಲೀಸ್ಗೆ ತಡೆಯೊಡ್ಡಿರುವುದು ಅಲ್ಲಿರುವ ದಳಪತಿ ಫ್ಯಾನ್ಸ್ಗೆ ಬೇಸರ ಉಂಟು ಮಾಡಿದೆ. ಅವರೀಗ ಸಿನಿಮಾ ವೀಕ್ಷಿಸಲು ಬೇರೆಡೆಗೆ ಹೋಗಬೇಕಿದೆ.
Kuwait Government Bans Thalapathy Vijay Pooja Hegdes Beast Movie.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm