ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm