ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm