ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm