ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ
ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.
ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.
ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 09:12 pm
Mangalore Correspondent
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm