ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm