ಬ್ರೇಕಿಂಗ್ ನ್ಯೂಸ್
27-05-22 08:48 pm Source: Vijayakarnataka ಡಾಕ್ಟರ್ಸ್ ನೋಟ್
ಎಣ್ಣೆಯುಕ್ತ ಆಹಾರಗಳು ಅಥವಾ ಎಣ್ಣೆಯಲ್ಲಿ ಕರಿದ ಆಹಾರಗಳನ್ನು ಸೇವಿಸಲು ಹೆಚ್ಚಿನರು ಇಷ್ಟಪಡುತ್ತಾರೆ. ಅದು ನಾಲಗೆಗೆ ಒಂಥರಾ ರುಚಿಯನ್ನು ನೀಡುತ್ತದೆ. ಇನ್ನೂ ಕೆಲವರಿಗೆ ಪ್ರತಿನಿತ್ಯ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು ತಿನ್ನುವ ಅಭ್ಯಾಸವಿದೆ. ಇಂತಹ ಆಹಾರವನ್ನು ಆತ್ಮ-ತೃಪ್ತಿಕರ ಆಹಾರಗಳು ಎಂದು ಕರೆಯಲಾಗುತ್ತದೆ. ಆದರೆ ಅದನ್ನುತಿಂದ ನಂತರ ಅಜೀರ್ಣ, ಹೊಟ್ಟೆಭಾರ ಮತ್ತು ಹೊಟ್ಟೆಯಲ್ಲಿ ಸುಡುವ ಸಂವೇದನೆ ಉಂಟಾಗುತ್ತದೆ. ಇವೆಲ್ಲಾ ಅತಿಯಾದ ಎಣ್ಣೆ ಮತ್ತು ಮಸಾಲೆಗಳಿಂದ ಉಂಟಾಗುತ್ತದೆ.
ಎಣ್ಣೆಯುಕ್ತ ಆಹಾರ ಸೇವಿಸಲೂ ಬೇಕು ಹಾಗೆಯೇ ಅದರಿಂದಾಗುವ ಸಮಸ್ಯೆಗಳಿಂದ ಪಾರಾಗಲೂ ಬೇಕೆಂದರೆ ಇಲ್ಲಿ ಕೆಲವು ಟಿಪ್ಸ್ನ್ನು ನೀಡಲಾಗಿದೆ. ಎಣ್ಣೆಯುಕ್ತ ಆಹಾರ ಸೇವಿಸಿದ ನಂತರ ನೀವು ಹೀಗೆ ಮಾಡಿದರೆ ಆರಾಮವಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಬಹುದು.
ಮೊಸರು
ಆಯುರ್ವೇದದ ಪ್ರಕಾರ, ಹುರಿದ ಜೀರಿಗೆಯೊಂದಿಗೆ ಮೊಸರು ಊಟದ ನಂತರ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪ್ರೋಬಯಾಟಿಕ್ಸ್ ಲ್ಯಾಕ್ಟೋಬಾಸಿಲಸ್ ಬ್ಯಾಕ್ಟೀರಿಯಾ ಆಮ್ಲೀಯತೆಯನ್ನು ತಡೆಗಟ್ಟಲು ಮತ್ತು ಸರಿಯಾದ ಕರುಳಿನ ಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಫೈಬರ್ ಭರಿತ ಆಹಾರ
![]()
ಮುಂದಿನ ಊಟದಲ್ಲಿ ಫೈಬರ್ ಭರಿತ ಓಟ್ಸ್ ಅಥವಾ ಗೋಧಿನುಚ್ಚನ್ನು ಸೇವಿಸುವುದರಿಂದ ಹಾನಿಯನ್ನು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ, ಏಕೆಂದರೆ ಫೈಬರ್ ಅಂಶವು ಕರುಳನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. ಫೈಬರ್ ಭರಿತ ಆಹಾರಗಳು ದೀರ್ಘಕಾಲದವರೆಗೆ ನಿಮ್ಮ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಮತ್ತು ದೀರ್ಘಕಾಲದವರೆಗೆ ಸಕ್ರಿಯವಾಗಿರಲು ಸಹಾಯ ಮಾಡುತ್ತದೆ.
ಗ್ರೀನ್ ಟೀ

ನೀರಿನ ಬದಲಾಗಿ ನೀವು ಆಯ್ಕೆ ಮಾಡಬಹುದಾದ ಮತ್ತೊಂದು ಪಾನೀಯವೆಂದರೆ ಗ್ರೀನ್ ಟೀ. ಇದು ಫ್ಲೇವನಾಯ್ಡ್ನಲ್ಲಿ ಸಮೃದ್ಧವಾಗಿದ್ದು ಉತ್ಕರ್ಷಣ ನಿರೋಧಕಗಳನ್ನು ಸೇರಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಮೇಲಿನ ಆಕ್ಸಿಡೇಟಿವ್ ಲೋಡ್ ಅನ್ನು ಸಮತೋಲನಗೊಳಿಸಲು ಇದು ಸಹಾಯ ಮಾಡುತ್ತದೆ.
ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ
![]()
ಎಣ್ಣೆಯುಕ್ತ ಆಹಾರ ಸೇವಿಸಿದ ನಂತರ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಮತ್ತು ಜಿಡ್ಡಿನ ಆಹಾರವನ್ನು ಸಣ್ಣ ಮತ್ತು ಮೃದುವಾದ ರೂಪಗಳಾಗಿ ವಿಭಜಿಸಲು ಜೀರ್ಣಾಂಗ ವ್ಯವಸ್ಥೆಗೆ ಸುಲಭವಾಗುತ್ತದೆ. ಭಾರೀ ಊಟದ ನಂತರ ನೀವು ನೀರನ್ನುಕುಡಿಯದಿದ್ದರೆ ನಿಮ್ಮ ಕರುಳು ಆಹಾರದಿಂದ ನೀರನ್ನು ಹೀರಿಕೊಳ್ಳುತ್ತದೆ ಮತ್ತು ಮಲಬದ್ಧತೆಗೆ ಕಾರಣವಾಗಬಹುದು. ನೀವು ಉಗುರುಬೆಚ್ಚಗಿನ ನೀರಿನೊಂದಿಗೆ ಒಂದು ಟೀಚಮಚ ಅಜ್ವೈನ್ ಅನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ.
ಐಸ್ಕ್ರೀಮ್ ತಿನ್ನಬಾರದು
![]()
ಐಸ್ ಕ್ರೀಮ್ ಅಥವಾ ತಣ್ಣನೆಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ನಾಲಗೆಗೆ ರುಚಿಸಿಗಬಹುದು. ಆದರೆ ಅವು ಕರುಳಿಗೆ ಒಳ್ಳೆಯದಲ್ಲ. ಜಿಡ್ಡಿನ ಆಹಾರವನ್ನು ಸೇವಿಸಿದ ತಕ್ಷಣ ತಣ್ಣನೆಯ ಆಹಾರವನ್ನು ಸೇವಿಸುವುದರಿಂದ ಕರುಳು, ಹೊಟ್ಟೆ ಮತ್ತು ಯಕೃತ್ತಿನ ಒತ್ತಡವನ್ನು ಹೆಚ್ಚಿಸುತ್ತದೆ ಮತ್ತು ಜಿಡ್ಡಿನ ಆಹಾರವನ್ನು ಸರಾಗವಾಗಿ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ.
ವಾಕಿಂಗ್

ನೀವು ಜಿಡ್ಡಿನ ಆಹಾರವನ್ನು ತಿನ್ನುತ್ತೀರೋ ಇಲ್ಲವೋ, ಪ್ರತಿ ಊಟದ ನಂತರ 1000 ಹೆಜ್ಜೆ ನಡಿಗೆಯು ಯಾವಾಗಲೂ ಒಳ್ಳೆಯದು ಮತ್ತು ಇದು ನಿಮ್ಮ ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ ಮತ್ತು ಚಯಾಪಚಯವನ್ನು ಉತ್ತೇಜಿಸುತ್ತದೆ.
Best Tips To Digest Oily Food.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm