ಬ್ರೇಕಿಂಗ್ ನ್ಯೂಸ್
25-06-22 08:40 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲವಿರಲಿ, ಬೇಸಿಗೆ ಇರಲಿ ಇಲ್ಲಾಂದ್ರೆ ಮಳೆಗಾಲವೇ ಇರಲಿ ಆದರೆ ಎಲ್ಲಾ ಕಾಲದಲ್ಲೂ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳೆಂದರೆ ಒಂದು ಬಾಳೆಹಣ್ಣು ಇನ್ನೊಂದು ಪರಂಗಿ ಹಣ್ಣು ಅಥವಾ ಪಪ್ಪಾಯಿ ಹಣ್ಣು ಎಂದು ಹೇಳಬಹುದು. ಅದರಲ್ಲೂ ಮಾರ್ಕೆಟ್ ನಲ್ಲಿ ಹಣ್ಣು-ಹಣ್ಣಾದ ಪರಂಗಿ ಹಣ್ಣುಗಳನ್ನು ಕಂಡಾಗ ಬಾಯಲ್ಲಿ ನೀರೂರುತ್ತದೆ!
ಏಕೆಂದರೆ ಅದರ ರುಚಿ ಅಷ್ಟರ ಮಟ್ಟಿಗೆ ನಮಗೆ ಹಿಡಿಸಿರುತ್ತದೆ. ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ಕೂಡ, ಈ ಹಣ್ಣನ್ನು ಇಷ್ಟಪಟ್ಟು ತಿನ್ನುತ್ತಾರೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು, ಎಂದು ವೈದ್ಯರು ಕೂಡ ಹೇಳುತ್ತಾರೆ. ಉದಾಹರಣೆಗೆ ನೋಡುವುದಾದರೆ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ದೂರ ಮಾಡುವುದು, ಕ್ಯಾನ್ಸರ್ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುವುದು, ರಕ್ತದೊತ್ತಡ ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಕಣ್ಣುಗಳ ದೃಷ್ಟಿ ಸಮಸ್ಯೆ ನಿವಾರಣೆ ಮಾಡುವುದು ಮುಂತಾದವುಗಳು.
ಇನ್ನೂ ಮುಖ್ಯವಾದ ಸಂಗತಿ ಏನೆಂದರೆ ಕೇವಲ ಈ ಹಣ್ಣು ಮಾತ್ರವಲ್ಲ, ಇದರ ಕಾಯಿ, ಪರಂಗಿ ಮರದ ಎಲೆಗಳು ಕೂಡ ಅಷ್ಟೇ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಮುಖ್ಯವಾಗಿ ಡೆಂಗ್ಯೂ ಜ್ವರದ ವಿರುದ್ಧ ಹೋರಾಡಿ ದೇಹದಲ್ಲಿ ಪ್ಲೇಟ್ಲೆಟ್ ಸಂಖ್ಯೆಯನ್ನು ಹೆಚ್ಚು ಮಾಡುತ್ತವೆ. ಒಟ್ಟಾರೆಯಾಗಿ ಹೇಳುವುದಾದರೆ, ನಮ್ಮ ದೇಹದ ಹಲವಾರು ಆರೋಗ್ಯ ಸಮಸ್ಯೆಗಳಿಗೆ, ಈ ಪರಂಗಿ ಹಣ್ಣು ಸೇವನೆ ಮಾಡುವುದರಿಂದ, ಪರಿಹಾರ ಕಾಣಬಹುದಾಗಿದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಈ ಹಣ್ಣನ್ನು, ಕೆಲವು ಜನರ ಮಾತ್ರ ಸೇವಿಸುವ ಹಾಗಿಲ್ಲ! ಹಾಗಾದರೆ ಯಾರವರು? ಯಾಕೆ ಈ ಹಣ್ಣಿನಿಂದ ಅವರು ದೂರ ಉಳಿಯಬೇಕು? ನೋಡೋಣ ಬನ್ನಿ...
ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು
ಗರ್ಭಿಣಿಯರು ಈ ಹಣ್ಣಿನಿಂದ ದೂರವಿರಬೇಕು
ಗರ್ಭಪಾತಕ್ಕೆ ಕಾರಣವಾಗಬಹುದು!
ಅಲರ್ಜಿ ಸಮಸ್ಯೆಗೆ ಕಾರಣವಾಗಬಹುದು!
ಪರಂಗಿ ಹಣ್ಣಿನ ಸಿಪ್ಪೆ ತೆಗೆಯುವಾದ, ಅದರಿಂದ ಬರುವ ಸುಣೆ ಅಥವಾ ಒಂದು ರೀತಿ ಹಾಲಿನ ರೀತಿಯ ದ್ರಾವಣವು, ಕೆಲವರಿಗೆ ಅಲರ್ಜಿಯ ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಸೂಕ್ಷ್ಮ ಆರೋಗ್ಯ ಸಮಸ್ಯೆ ಇರುವವರು, ಈ ಹಣ್ಣನ್ನು ಸೇವಿಸುವ ಮುಂಚೆ ವೈದ್ಯರನ್ನು ಕೇಳಿ ಮಾಹಿತಿ ತಿಳಿದುಕೊಳ್ಳುವುದು ಒಳ್ಳೆಯದು. ಇನ್ನು ಕೆಲವರಿಗೆ, ಈ ಹಣ್ಣು ಸೇವನೆ ಮಾಡುವುದರಿಂದಾಗಿ, ಚರ್ಮಕ್ಕೆ ಸಂಬಂಧಿಸಿದ ಕೆಲವೊಂದು ಸಮಸ್ಯೆಗಳು ಬರುವ ಅಪಾಯ ಹೆಚ್ಚಿರುತ್ತದೆ.
ಸಕ್ಕರೆ ಕಾಯಿಲೆ ಇದ್ದವರು...
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ ನಿಯಂತ್ರಣಕ್ಕೆ ಸಿಗದೇ ಹೋಗಿದ್ದರೆ ಅಂತಹವರು ಈ ಹಣ್ಣಿನಿಂದ ದೂರವಿದ್ದರೆ ಒಳ್ಳೆಯದು. ಇನ್ನು ಕೆಲವೊಮ್ಮೆ ಹೆಚ್ಚಿನ ಪ್ರಮಾಣದ ಪರಂಗಿ ಹಣ್ಣು ಸೇವನೆ ಮಾಡುವ ಜನರಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟ ಅತ್ಯಂತ ವೇಗವಾಗಿ ತಗ್ಗಿ, ಆರೋಗ್ಯದಲ್ಲಿ ಏರು ಪೇರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಮಧುಮೇಹ ಸಮಸ್ಯೆ ಇರುವವರು ಜನರು ಈ ಹಣ್ಣಿನ ಸೇವನೆ ಯಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು.
ಹೈಬಿಪಿ, ಹೃದಯದ ಸಮಸ್ಯೆಯ ಇದ್ದವರು...
ಒಂದು ವೇಳೆ ನೀವು ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರೆ, ಅಥವಾ ಹೀಗಾ ಗಲೇ ನಿಮಗೆ ಹೈಬಿಪಿ ಸಮಸ್ಯೆ ಇದ್ದರೆ, ಈ ಹಣ್ಣಿನಿಂದ ದೂರವಿದ್ದರೆ ಒಳ್ಳೆಯದು. ಯಾಕೆಂದರೆ ಇದರಿಂ ದಾಗಿ ಹೃದಯ ಬಡಿತದಲ್ಲಿ ಮತ್ತಷ್ಟು ಏರುಪೇರು ಆಗುವ ಸಾಧ್ಯತೆ ಹೆಚ್ಚಿರುತ್ತದೆಯಂತೆ
People Who Suffering Kidney Stone, Uncontrolled Diabetes Patient Must Avoid Papaya .
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm