ಬ್ರೇಕಿಂಗ್ ನ್ಯೂಸ್
15-07-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಉಪ್ಪಿಗಿಂತ ಬೇರೆ ರುಚಿಯಿಲ್ಲ ಎನ್ನುತ್ತಾರೆ. ಆದರೆ ಉಪ್ಪಿನ ಸೇವನೆಯು ಅಧಿಕವಾದರೆ ಅಕಾಲಿಕ ಸಾವನ್ನಪ್ಪಬೇಕಾಗುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಕೆಲವರು ತಾವು ಸೇವಿಸುವ ಆಹಾರದಲ್ಲಿ ಪ್ರತಿನಿತ್ಯ ಉಪ್ಪು ಅಧಿಕ ಹಾಕುತ್ತಾರೆ. ನೀವೂ ಕೂಡಾ ಅಧಿಕ ಪ್ರಮಾಣದಲ್ಲಿ ಉಪ್ಪಿನ ಆಹಾರ ಸೇವಿಸುತ್ತಿದ್ದೀರೆಂದಾದರೆ ತಕ್ಷಣ ನಿಮ್ಮ ಅಭ್ಯಾಸವನ್ನು ಬದಲಾಯಿಸಬೇಕು.
ಅಧಿಕ ಉಪ್ಪಿನ ಸೇವನೆಯಿಂದ ಸಾವು

ಉಪ್ಪಿನ ಅಧಿಕ ಸೇವನೆಯು ಸಾವಿಗೆ ಕಾರಣವಾಗುತ್ತದೆ. ತಮ್ಮ ಆಹಾರದಲ್ಲಿ ಯಾವಾಗಲೂ ಅಧಿಕ ಉಪ್ಪನ್ನು ಸೇರಿಸುವ ಜನರು ಕಡಿಮೆ ಉಪ್ಪನ್ನು ಸೇವಿಸುವ ಜನರಿಗೆ ಹೋಲಿಸಿದರೆ ಅಕಾಲಿಕವಾಗಿ ಸಾಯುವ ಅಪಾಯವು ಶೇಕಡಾ 28 ರಷ್ಟು ಹೆಚ್ಚಾಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.
40 ರಿಂದ 69 ವರ್ಷ ವಯಸ್ಸಿನವರು
![]()
ಯುರೋಪಿಯನ್ ಹಾರ್ಟ್ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ಪ್ರಕಾರ, ಸಾಮಾನ್ಯ ಜನಸಂಖ್ಯೆಯಲ್ಲಿ 40 ರಿಂದ 69 ವರ್ಷ ವಯಸ್ಸಿನ ಪ್ರತಿ ನೂರರಲ್ಲಿ ಮೂರು ಜನರು ಅಕಾಲಿಕವಾಗಿ ಸಾಯುತ್ತಾರೆ. ಅದರಲ್ಲಿ ಒಬ್ಬರು ಆಹಾರಕ್ಕೆ ಅಧಿಕ ಉಪ್ಪು ಸೇರಿಸುವುದರಿಂದ ಅಕಾಲಿಕವಾಗಿ ಸಾಯುತ್ತಾರೆ ಎಂದು ಕಂಡುಹಿಡಿದಿದೆ.
ಆಯಸ್ಸು ಕಡಿಮೆಯಾಗುತ್ತದೆ

ಊಟಕ್ಕೆ ಹೆಚ್ಚುವರಿ ಉಪ್ಪನ್ನು ಸೇರಿಸುವುದರಿಂದ 50 ವರ್ಷ ವಯಸ್ಸಿನ ಪುರುಷರು ಮತ್ತು ಮಹಿಳೆಯರಿಗೆ ಕ್ರಮವಾಗಿ ಎರಡು ವರ್ಷಗಳ ಮತ್ತು 1.5 ವರ್ಷಗಳ ಜೀವಿತಾವಧಿ ಕಡಿಮೆಯಾಗುತ್ತವೆ ಎಂದು ಸಂಶೋಧನೆಗಳು ಬಹಿರಂಗಪಡಿಸಿವೆ. ಹಾಗಾಗಿ ಜನರು ತಮ್ಮ ಆಹಾರದಲ್ಲಿ ಹೆಚ್ಚು ಮಸಾಲೆ ಹಾಕುವುದನ್ನು ತಪ್ಪಿಸಲು ಶಿಫಾರಾಸ್ಸು ಮಾಡಲಾಗುವುದು.
ಸೇವಿಸಬೇಕಾದ ಉಪ್ಪಿನ ಪ್ರಮಾಣ ಎಷ್ಟು?

ಹೆಚ್ಚಿನ ಜನರು ದಿನಕ್ಕೆ ಸರಾಸರಿ 9 ರಿಂದ 12 ಗ್ರಾಂ ಉಪ್ಪನ್ನು ಸೇವಿಸುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇದು ಶಿಫಾರಸು ಮಾಡಲಾದ ಗರಿಷ್ಠ ಸೇವನೆಯ ಎರಡು ಪಟ್ಟು ಹೆಚ್ಚು.
ರಕ್ತದೊತ್ತಡದ ಮಟ್ಟಗಳು ಮತ್ತು ಪಾರ್ಶ್ವವಾಯು, ಪರಿಧಮನಿಯ ಹೃದಯಾಘಾತ ಸೇರಿದಂತೆ ಹೃದಯರಕ್ತನಾಳದ ಕಾಯಿಲೆಯ ಅಪಾಯಗಳನ್ನು ಕಡಿಮೆ ಮಾಡಲು ವಯಸ್ಕರು ದಿನಕ್ಕೆ 5 ಗ್ರಾಂಗಿಂತ ಕಡಿಮೆ ಉಪ್ಪನ್ನು ಸೇವಿಸಬೇಕೆಂದು WHO ಶಿಫಾರಸು ಮಾಡುತ್ತದೆ.
ಸಾವಿನ ಸಂಖ್ಯೆ ಕಡಿಮೆ ಮಾಡಬಹುದು
![]()
ಜಾಗತಿಕ ಉಪ್ಪಿನ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಅಂದರೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಾಸು ಮಾಡಿದಂತೆ ಐದು ಗ್ರಾಂಗೆ ಇಳಿಸಿದರೆ ಪ್ರತಿ ವರ್ಷ ಸುಮಾರು 2.5 ಮಿಲಿಯನ್ ಸಾವುಗಳನ್ನು ತಡೆಯಬಹುದು ಎನ್ನುತ್ತದೆ ಸಂಶೋಧನೆ.
Eating More Salty Food Daily Can Lead To Premature Death.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm