ಬ್ರೇಕಿಂಗ್ ನ್ಯೂಸ್
15-07-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಉಪ್ಪಿಗಿಂತ ಬೇರೆ ರುಚಿಯಿಲ್ಲ ಎನ್ನುತ್ತಾರೆ. ಆದರೆ ಉಪ್ಪಿನ ಸೇವನೆಯು ಅಧಿಕವಾದರೆ ಅಕಾಲಿಕ ಸಾವನ್ನಪ್ಪಬೇಕಾಗುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಕೆಲವರು ತಾವು ಸೇವಿಸುವ ಆಹಾರದಲ್ಲಿ ಪ್ರತಿನಿತ್ಯ ಉಪ್ಪು ಅಧಿಕ ಹಾಕುತ್ತಾರೆ. ನೀವೂ ಕೂಡಾ ಅಧಿಕ ಪ್ರಮಾಣದಲ್ಲಿ ಉಪ್ಪಿನ ಆಹಾರ ಸೇವಿಸುತ್ತಿದ್ದೀರೆಂದಾದರೆ ತಕ್ಷಣ ನಿಮ್ಮ ಅಭ್ಯಾಸವನ್ನು ಬದಲಾಯಿಸಬೇಕು.
ಅಧಿಕ ಉಪ್ಪಿನ ಸೇವನೆಯಿಂದ ಸಾವು

ಉಪ್ಪಿನ ಅಧಿಕ ಸೇವನೆಯು ಸಾವಿಗೆ ಕಾರಣವಾಗುತ್ತದೆ. ತಮ್ಮ ಆಹಾರದಲ್ಲಿ ಯಾವಾಗಲೂ ಅಧಿಕ ಉಪ್ಪನ್ನು ಸೇರಿಸುವ ಜನರು ಕಡಿಮೆ ಉಪ್ಪನ್ನು ಸೇವಿಸುವ ಜನರಿಗೆ ಹೋಲಿಸಿದರೆ ಅಕಾಲಿಕವಾಗಿ ಸಾಯುವ ಅಪಾಯವು ಶೇಕಡಾ 28 ರಷ್ಟು ಹೆಚ್ಚಾಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.
40 ರಿಂದ 69 ವರ್ಷ ವಯಸ್ಸಿನವರು
![]()
ಯುರೋಪಿಯನ್ ಹಾರ್ಟ್ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ಪ್ರಕಾರ, ಸಾಮಾನ್ಯ ಜನಸಂಖ್ಯೆಯಲ್ಲಿ 40 ರಿಂದ 69 ವರ್ಷ ವಯಸ್ಸಿನ ಪ್ರತಿ ನೂರರಲ್ಲಿ ಮೂರು ಜನರು ಅಕಾಲಿಕವಾಗಿ ಸಾಯುತ್ತಾರೆ. ಅದರಲ್ಲಿ ಒಬ್ಬರು ಆಹಾರಕ್ಕೆ ಅಧಿಕ ಉಪ್ಪು ಸೇರಿಸುವುದರಿಂದ ಅಕಾಲಿಕವಾಗಿ ಸಾಯುತ್ತಾರೆ ಎಂದು ಕಂಡುಹಿಡಿದಿದೆ.
ಆಯಸ್ಸು ಕಡಿಮೆಯಾಗುತ್ತದೆ

ಊಟಕ್ಕೆ ಹೆಚ್ಚುವರಿ ಉಪ್ಪನ್ನು ಸೇರಿಸುವುದರಿಂದ 50 ವರ್ಷ ವಯಸ್ಸಿನ ಪುರುಷರು ಮತ್ತು ಮಹಿಳೆಯರಿಗೆ ಕ್ರಮವಾಗಿ ಎರಡು ವರ್ಷಗಳ ಮತ್ತು 1.5 ವರ್ಷಗಳ ಜೀವಿತಾವಧಿ ಕಡಿಮೆಯಾಗುತ್ತವೆ ಎಂದು ಸಂಶೋಧನೆಗಳು ಬಹಿರಂಗಪಡಿಸಿವೆ. ಹಾಗಾಗಿ ಜನರು ತಮ್ಮ ಆಹಾರದಲ್ಲಿ ಹೆಚ್ಚು ಮಸಾಲೆ ಹಾಕುವುದನ್ನು ತಪ್ಪಿಸಲು ಶಿಫಾರಾಸ್ಸು ಮಾಡಲಾಗುವುದು.
ಸೇವಿಸಬೇಕಾದ ಉಪ್ಪಿನ ಪ್ರಮಾಣ ಎಷ್ಟು?

ಹೆಚ್ಚಿನ ಜನರು ದಿನಕ್ಕೆ ಸರಾಸರಿ 9 ರಿಂದ 12 ಗ್ರಾಂ ಉಪ್ಪನ್ನು ಸೇವಿಸುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇದು ಶಿಫಾರಸು ಮಾಡಲಾದ ಗರಿಷ್ಠ ಸೇವನೆಯ ಎರಡು ಪಟ್ಟು ಹೆಚ್ಚು.
ರಕ್ತದೊತ್ತಡದ ಮಟ್ಟಗಳು ಮತ್ತು ಪಾರ್ಶ್ವವಾಯು, ಪರಿಧಮನಿಯ ಹೃದಯಾಘಾತ ಸೇರಿದಂತೆ ಹೃದಯರಕ್ತನಾಳದ ಕಾಯಿಲೆಯ ಅಪಾಯಗಳನ್ನು ಕಡಿಮೆ ಮಾಡಲು ವಯಸ್ಕರು ದಿನಕ್ಕೆ 5 ಗ್ರಾಂಗಿಂತ ಕಡಿಮೆ ಉಪ್ಪನ್ನು ಸೇವಿಸಬೇಕೆಂದು WHO ಶಿಫಾರಸು ಮಾಡುತ್ತದೆ.
ಸಾವಿನ ಸಂಖ್ಯೆ ಕಡಿಮೆ ಮಾಡಬಹುದು
![]()
ಜಾಗತಿಕ ಉಪ್ಪಿನ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಅಂದರೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಾಸು ಮಾಡಿದಂತೆ ಐದು ಗ್ರಾಂಗೆ ಇಳಿಸಿದರೆ ಪ್ರತಿ ವರ್ಷ ಸುಮಾರು 2.5 ಮಿಲಿಯನ್ ಸಾವುಗಳನ್ನು ತಡೆಯಬಹುದು ಎನ್ನುತ್ತದೆ ಸಂಶೋಧನೆ.
Eating More Salty Food Daily Can Lead To Premature Death.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am