ಬ್ರೇಕಿಂಗ್ ನ್ಯೂಸ್
11-08-22 10:08 pm Source: Vijaykarnataka ಡಾಕ್ಟರ್ಸ್ ನೋಟ್
ಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹಕ್ಕೆ ಬೇಕಾದ ವಿಟಮಿನ್, ಮಿನರಲ್ಸ್ ಎಲ್ಲವನ್ನೂ ನೀಡುತ್ತವೆ. ದೇಹದ ಎಲ್ಲಾ ಚಟುವಟಿಕೆಗಳನ್ನು ಸುಸೂತ್ರವಾಗಿ ನಡೆಯುವಂತೆ ಮಾಡಲು ವಿವಿಧ ರೀತಿಯ ಹಣ್ಣುಗಳು ಸಹಾಯ ಮಾಡುತ್ತವೆ. ಉದಾಹರಣೆಗೆ ಸೇಬು, ಮೂಸಂಬಿ, ಬಾಳೆಹಣ್ಣು, ಕಿವಿ, ಕಿತ್ತಳೆ ಇತ್ಯಾದಿ. ಅದೇ ರೀತಿ ಕೆಲವು ಹಣ್ಣುಗಳ ಬೀಜಗಳೂ ಸಹ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತವೆ. ಅವುಗಳಲ್ಲಿ ಕಲ್ಲಂಗಡಿ ಹಣ್ಣಿನ ಬೀಜ ಬೆಸ್ಟ್ ಉದಾಹರಣೆಯಾಗಿದೆ.
ಆದರೆ ಕೆಲವು ಹಣ್ಣುಗಳ ಬೀಜಗಳು ದೇಹಕ್ಕೆ ವಿಷವಾಗಿ ಪರಿಣಮಿಸುತ್ತವೆ. ಅವುಗಳಲ್ಲಿ ಸೇಬು ಹಣ್ಣಿನ ಬೀಜಗಳು ಕೂಡ ಒಂದು. ಅರೇ ಸೇಬು ಹಣ್ಣಿನಿಂದ ಆರೋಗ್ಯಕ್ಕೆ ಅಷ್ಟೆಲ್ಲಾ ಉಪಯೋಗವಿದ್ದರೂ ಅವುಗಳ ಬೀಜವೇಕೆ ವಿಷ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಸೇಬು ಹಣ್ಣು

ಪ್ರತಿದಿನ ಒಂದು ಸೇಬುವನ್ನು ತಿನ್ನುವುದರಿಂದ ಆಸ್ಪತ್ರೆಯಿಂದ ದೂರವಿರಬಹುದು ಎನ್ನುತ್ತಾರೆ. ದೇಹದ ತೂಕ ಇಳಿಕೆಗೆ, ಹೃದಯದ ಆರೋಗ್ಯಕ್ಕೆ, ಮಧುಮೇಹಿಗಳಿಗೆ ಅಷ್ಟೇ ಯಾಕೆ ಕ್ಯಾನ್ಸರ್ ರೋಗಿಗಳಿಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸೇಬು ಹಣ್ಣು ಸಹಾಯ ಮಾಡುತ್ತದೆ.
ಸೇಬುವಿನಲ್ಲಿ ವಿಟಮಿನ್ ಸಿ, ಕ್ಯಾಲೋರಿ, ಕಾರ್ಬೋಹೈಡ್ರೇಟ್ಸ್, ವಿಟಮಿನ್ ಕೆ, ಪೊಟ್ಯಾಷಿಯಂ ಸೇರಿದಂತೆ ಅನೇಕ ಜೀವಸತ್ವಗಳು ಅಡಕವಾಗಿವೆ.
ಸೇಬು ಬೀಜ ವಿಷಕಾರಿ

ಸೇಬು ಹಣ್ಣಿನಿಂದ ಎಷ್ಟು ಪ್ರಯೋಜನಗಳಿದೆಯೋ ಅಷ್ಟೇ ವಿಷಕಾರಿ ಅದರ ಬೀಜಗಳು., ಸೇಬು ಬೀಜಗಳು ಅಮಿಗ್ಡಾಲಿನ್ ಎಂಬ ಸಸ್ಯ ಸಂಯುಕ್ತವನ್ನು ಹೊಂದಿರುತ್ತವೆ, ಇದು ಸೈನೈಡ್ ಮತ್ತು ಸಕ್ಕರೆಯನ್ನು ಹೊಂದಿರುತ್ತದೆ, ಇದು ದೇಹದಿಂದ ಸೇವಿಸಿದಾಗ ಹೈಡ್ರೋಜನ್ ಸೈನೈಡ್ (HCN) ಆಗಿ ಬದಲಾಗುತ್ತದೆ. ಇದು ವಿಷಕಾರಿ ಪರಿಣಾಮವನ್ನು ಬೀರುತ್ತದೆ.
ಅಮಿಗ್ಡಾಲಿನ್ ಬೀಜಗಳ ರಾಸಾಯನಿಕ ರಕ್ಷಣೆಯ ಒಂದು ಭಾಗವಾಗಿದೆ. ಹೀಗಾಗಿ ಸೇಬು ಬೀಜದ ಸೇವನೆ ಆರೋಗ್ಯಕ್ಕೆ ಹಾನಿಯನ್ನು ಉಂಟು ಮಾಡುತ್ತದೆ.
ಸೇಬು ಬೀಜ ಸೇವನೆಯಿಂದ ಆರೋಗ್ಯದ ಮೇಲೆ ಪರಿಣಾಮ

ಯಾವ ಪ್ರಮಾಣದಲ್ಲಿ ತಿಂದರೆ ಸೇಬು ಬೀಜ ಅಪಾಯಕಾರಿ
ಪ್ರತಿ ಲೀಟರ್ ರಕ್ತಕ್ಕೆ 0.5 ರಿಂದ 3.0 ಮಿಲಿಗ್ರಾಂಗಳ ನಡುವಿನ ಯಾವುದೇ ಪ್ರಮಾಣದ ಸೈನೈಡ್ ಮಾನವ ದೇಹಕ್ಕೆ ಹಾನಿಕಾರಕವಾಗಿದೆ ಎನ್ನುತ್ತದೆ ಅಧ್ಯಯನ. ಇದರರ್ಥ ನೀವು ಅವುಗಳ ಬೀಜಗಳಲ್ಲಿನ ಸೈನೈಡ್ನಿಂದ ಕೆಟ್ಟ ಪರಿಣಾಮ ಬೀರಲು ಸುಮಾರು 40 ಬೀಜಗಳು ಬೇಕಾಗುತ್ತವೆ. ಹೀಗಾಗಿ ಆಕಸ್ಮಾತ್ ಸೇಬು ಬೀಜ ತಿಂದರೆ ಏನಾಗುವುದೋ ಎನ್ನುವ ಭಯ ಬೇಡ.
ಇವೆಲ್ಲಾ ದೇಹದಲ್ಲಿ ವಿಷಕಾರಿ ಅಂಶ ಸೇರಿದೆ ಎನ್ನುವ ಲಕ್ಷಣಗಳು
![]()
ತಜ್ಞ ವೈದ್ಯರು ಹೇಳುವ ಪ್ರಕಾರ ಅತಿಯಾದ ಪ್ರಮಾಣದಲ್ಲಿ ಸೈನೈಡ್ ಅಂಶವನ್ನು ಸೇವನೆ ಮಾಡಿದರೆ ಸಾವು ಸಂಭವಿಸಬಹುದು. ಹೀಗಾಗಿ ಯಾವುದೇ ರೀತಿಯ ಸೈನೈಡ್ ಅಂಶವನ್ನು ಸೇವನೆ ಮಾಡಿದರೂ ಕೂಡ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
Do You Know Apple Seeds Are Toxic.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm