ಬ್ರೇಕಿಂಗ್ ನ್ಯೂಸ್
17-08-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ಖರ್ಜೂರವು ಸಾಕಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ತೂಕ ನಷ್ಟಕ್ಕೆ ಸಹಕಾರಿಯಾಗುವುದರ ಜೊತೆಗೆ ಮೆದುಳಿನ ಆರೋಗ್ಯಕ್ಕೂ ಒಳ್ಳೆಯದು. ಇದು ಇನ್ನೇನೆಲ್ಲಾ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ ಅನ್ನೋದನ್ನು ತಿಳಿಯೋಣ.
ಖರ್ಜೂರದ ಪೋಷಣೆ
ಖರ್ಜೂರವು ಕಬ್ಬಿಣ ಮತ್ತು ನಾರಿನ ಜೊತೆಗೆ ಇತರ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಖರ್ಜೂರದಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಪೊಟ್ಯಾಶಿಯಂ ಇದೆ. ಇದರ ಜೊತೆಗೆ, ಕಾರ್ಬೋಹೈಡ್ರೇಟ್ಗಳು, ಸಕ್ಕರೆ, ವಿಟಮಿನ್ ಬಿ 6 ಸಹ ಖರ್ಜೂರದಲ್ಲಿ ಕಂಡುಬರುತ್ತವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ, ದೇಹವು ಈ ಎಲ್ಲಾ ಅಗತ್ಯ ಪೋಷಕಾಂಶಗಳನ್ನು ಉತ್ತಮ ಪ್ರಮಾಣದಲ್ಲಿ ಪಡೆಯುತ್ತದೆ.
ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
ಖರ್ಜೂರವು ನೈಸರ್ಗಿಕ ಜೀವಸತ್ವಗಳು, ಅಗತ್ಯ ಅಮೈನೋ ಆಮ್ಲಗಳು ಮತ್ತು ಖನಿಜಗಳಿಂದ ತುಂಬಿರುತ್ತವೆ. ಇದು ನಿಮ್ಮ ಮೆದುಳಿನ ಕೋಶಗಳ ಆರೋಗ್ಯವನ್ನು ಉತ್ತೇಜಿಸಲು ಮತ್ತು ನಿರ್ವಹಿಸಲು ಸಹಾಯ ಮಾಡುತ್ತದೆ. ಖರ್ಜೂರದಲ್ಲಿರುವ ಪೊಟ್ಯಾಸಿಯಮ್ ಅಂಶಗಳು ನಿಮ್ಮ ನರಮಂಡಲವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಮೆದುಳಿನ ಕಾರ್ಯವನ್ನು ಉತ್ತಮವಾಗಿಸುತ್ತದೆ.
ಖರ್ಜೂರಗಳು ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುತ್ತವೆ
ರಕ್ತಹೀನತೆಯ ಸಮಸ್ಯೆ ಬಹುತೇಕ ಮಹಿಳೆಯರಲ್ಲಿ ಕಂಡುಬರುತ್ತದೆ. ರಕ್ತಹೀನತೆ ಎಂದರೆ ದೇಹದಲ್ಲಿ ರಕ್ತದ ಕೊರತೆ ಇರುವುದು. ಖರ್ಜೂರವು ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುವ ಮೂಲಕ ರಕ್ತಹೀನತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಖರ್ಜೂರದಲ್ಲಿ ಕಬ್ಬಿಣಾಂಶವು ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತದೆ.
ಇದು ದೇಹದಲ್ಲಿ ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುತ್ತದೆ. ದೇಹಕ್ಕೆ ರಕ್ತವನ್ನು ಪೂರೈಸುತ್ತದೆ. ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ.
ತೂಕ ನಷ್ಟಕ್ಕೆ ಸಹಕಾರಿ
ತೂಕವನ್ನು ಕಡಿಮೆ ಮಾಡಲು ಬಯಸುವವರಿಗೆ ಖರ್ಜೂರಗಳು ತುಂಬಾ ಪರಿಣಾಮಕಾರಿಯಾಗಿದೆ. ಖರ್ಜೂರದಲ್ಲಿ ಫೈಬರ್ ಸಮೃದ್ಧವಾಗಿದೆ, ಇದು ಹಸಿವನ್ನು ಕಡಿಮೆ ಮಾಡುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರಿಂದ ನಿಮ್ಮ ತೂಕ ನಿಯಂತ್ರಣದಲ್ಲಿರುತ್ತದೆ.
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ
ಸಂಶೋಧನೆಯ ಪ್ರಕಾರ, ಒತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಖರ್ಜೂರಗಳು ಉಪಯುಕ್ತವಾಗಿವೆ. ಖರ್ಜೂರದಲ್ಲಿ ಕೊಲೆಸ್ಟ್ರಾಲ್ನ ಯಾವುದೇ ಅಂಶಗಳಿಲ್ಲದ ಕಾರಣ ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೀವು ಬಯಸಿದರೆ, ನಿಮ್ಮ ಆಹಾರದಲ್ಲಿ ಖರ್ಜೂರವನ್ನು ಸೇರಿಸಿಕೊಳ್ಳಬಹುದು.
ಸಕ್ಕರೆ ಕಡುಬಯಕೆಯನ್ನು ಕಡಿಮೆ ಮಾಡುತ್ತದೆ
ಕೆಲವರಿಗೆ ಆಗಾಗ ಸಿಹಿಯಾದ ಆಹಾರಗಳನ್ನು ತಿನ್ನಬೇಕೆಂಬ ಆಸೆ ಆಗುತ್ತದೆ. ಖರ್ಜೂರವು ನೈಸರ್ಗಿಕ ಸಕ್ಕರೆಯನ್ನು ಹೊಂದಿರುತ್ತದೆ, ಇದು ಆರೋಗ್ಯಕ್ಕೆ ಹಾನಿ ಮಾಡುವುದಿಲ್ಲ. ಆದ್ದರಿಂದ ಖರ್ಜೂರವನ್ನು ತಿನ್ನುವುದು ಪ್ರಯೋಜನಕಾರಿಯಾಗಿದೆ. ಖರ್ಜೂರಗಳು ಸಿಹಿ ಆಹಾರದ ಬಯಕೆಯನ್ನು ಕಡಿಮೆ ಮಾಡುತ್ತದೆ. ಅದಕ್ಕಾಗಿಯೇ ನೀವು ನಿಮ್ಮ ಆಹಾರದಲ್ಲಿ ಖರ್ಜೂರವನ್ನು ಸೇರಿಸಿಕೊಳ್ಳಬೇಕು.
ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ
ಅನಾರೋಗ್ಯಕರ ಆಹಾರ ಪದ್ಧತಿ, ನಿಷ್ಕ್ರಿಯ ಜೀವನಶೈಲಿ ಮತ್ತು ಒತ್ತಡವು ಮಲಬದ್ಧತೆಗೆ ಮುಖ್ಯ ಕಾರಣಗಳಾಗಿವೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ ಮಲಬದ್ಧತೆ ಸಮಸ್ಯೆಯೂ ನಿವಾರಣೆಯಾಗುತ್ತದೆ. ಖರ್ಜೂರದಲ್ಲಿ ಫೈಬರ್ ಸಮೃದ್ಧವಾಗಿದ್ದು ಇದು ಕರುಳಿನ ಚಲನೆಯ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ.
Health Benefits Of Dates Eating In Empty Stomach.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm