ಬ್ರೇಕಿಂಗ್ ನ್ಯೂಸ್
29-08-22 07:30 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದ ಒತ್ತಡ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ದೀರ್ಘಕಾಲ ಕಾಡುವ ಆರೋಗ್ಯ ಸಮಸ್ಯೆ ಆಗಿದೆ. ಇವುಗಳು ಒಮ್ಮೆ ಬಂದರೆ ಮತ್ತೆ ಹೋಗುವುದಿಲ್ಲ. ಬಂದ ಮೇಲೆ ಇವುಗಳ ನಿರ್ವಹಣೆ ತುಂಬ ಜಾಗರೂಕತೆಯಿಂದ ಕೂಡಿರಬೇಕು. ವೈದ್ಯರು ಕೊಡುವ ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಒಳ್ಳೆಯ ಬದಲಾವಣೆಯನ್ನು ತಂದುಕೊಳ್ಳಬೇಕು.
ಡ್ರೈ ಫ್ರೂಟ್ಸ್ ಅಥವಾ ಒಣ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ನಾರಿನ ಅಂಶ ಇರುತ್ತದೆ. ಇದು ರಕ್ತದ ಒತ್ತಡವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಚೆನ್ನಾಗಿ ಕೆಲಸ ಮಾಡುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ರಕ್ತದ ಒತ್ತಡ ಉಂಟಾಗಿದ್ದರೆ ಅದನ್ನು ಸಹದ ಮಟ್ಟಕ್ಕೆ ತೆಗೆದುಕೊಂಡು ಹೋಗುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದ ಒತ್ತಡ ಹೆಚ್ಚಾಗಿ ಇರುವ ಜನರಿಗೆ ಅನುಕೂಲವಾಗುವಂತೆ ಯಾವ ನಾಲ್ಕು ಒಣ ಬೀಜಗಳನ್ನು ಸೇವನೆ ಮಾಡಬಹುದು ಎಂಬುದರ ಬಗ್ಗೆ ಎಲ್ಲಿ ತಿಳಿಸಿಕೊಡಲಾಗಿದೆ.
ಗೋಡಂಬಿ ಬೀಜಗಳು

ರಕ್ತದೊತ್ತಡ ನಿಯಂತ್ರಣಕ್ಕೆ ಇವು ನೈಸರ್ಗಿಕವಾದ ಒಂದು ಪರಿಹಾರ ಎಂದು ಹೇಳಬಹುದು. ಇವುಗಳಲ್ಲಿ ಸೋಡಿಯಂ ಪ್ರಮಾಣ ಕಡಿಮೆ ಇರುತ್ತದೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಪೊಟ್ಯಾಶಿಯಂ ಅಂಶ ಇರುತ್ತದೆ. ಇದರಿಂದ ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡಿಕೊಳ್ಳಬಹುದು.
ಪಿಸ್ತಾ ಬೀಜಗಳು

ಇವುಗಳಲ್ಲಿ ಸಹ ಕಡಿಮೆ ಕ್ಯಾಲೋರಿಗಳು ಇರಲಿದ್ದು ಮತ್ತು ಹೆಚ್ಚಿನ ನಾರಿನ ಪ್ರಮಾಣ ಇರುತ್ತದೆ. ಇದಕ್ಕಿಂತ ಪ್ರಮುಖವಾಗಿ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಹೆಚ್ಚಾಗಿರುವುದರಿಂದ ದೇಹದಲ್ಲಿ ಫ್ರೀ ರಾಡಿಕಲ್ ಗಳು ಅಷ್ಟಾಗಿ ತೊಂದರೆ ನೀಡುವುದಿಲ್ಲ. ರಕ್ತದ ಒತ್ತಡ ಹೆಚ್ಚಾದ ಸಂದರ್ಭದಲ್ಲಿ ನೀವು ಇವುಗಳನ್ನು ಸೇವನೆ ಮಾಡಬಹುದು.
ಬಾದಾಮಿ ಬೀಜಗಳು
![]()
ರಕ್ತದ ಒತ್ತಡವನ್ನು ನಿರ್ವಹಣೆ ಮಾಡಿಕೊಳ್ಳಲು ಅನುಕೂಲಕರವಾಗಿ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ alpha tocopherolಇದರಲ್ಲಿರುತ್ತದೆ. ನಿಯಮಿತವಾಗಿ ಆಗಾಗ ಬಾದಾಮಿ ಬೀಜಗಳನ್ನು ತಿನ್ನುವುದರಿಂದ ರಕ್ತದ ಒತ್ತಡ ನಿರ್ವಹಣೆಯಲ್ಲಿ ಸಾಕಷ್ಟು ಸಹಾಯ ಆಗುತ್ತದೆ. ವಿಶೇಷವಾಗಿ 30 ರಿಂದ 70 ವರ್ಷ ವಯಸ್ಸಾಗಿರುವ ಪುರುಷರಿಗೆ ಹೆಚ್ಚು ಅನುಕೂಲ ಸಿಗುತ್ತದೆ.
Prunes (ಕಪ್ಪು ಒಣದ್ರಾಕ್ಷಿ ಹಾಗೆ ಇರುವ ಒಣಫಲ)

ಇದರಲ್ಲಿ ಕೂಡ ಹೆಚ್ಚಿನ ಪ್ರಮಾಣದ ಪೊಟ್ಯಾಷಿಯಂ ಅಂಶ ಇರುತ್ತದೆ. ರಕ್ತದ ಒತ್ತಡ ಹೆಚ್ಚಾದ ಸಂದರ್ಭದಲ್ಲಿ ಇವುಗಳನ್ನು ಸೇವನೆ ಮಾಡುವುದರಿಂದ ಬಿಪಿ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿ ನೆನೆ ಹಾಕಿದ Prunes ಅಧಿಕ ರಕ್ತದ ಒತ್ತಡ ಇರುವ ಜನರಿಗೆ ತುಂಬಾ ಒಳ್ಳೆಯದು.
High Blood Pressure Patients Can Consume Dry Fruits.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm