ಬ್ರೇಕಿಂಗ್ ನ್ಯೂಸ್
29-08-22 07:30 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದ ಒತ್ತಡ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ದೀರ್ಘಕಾಲ ಕಾಡುವ ಆರೋಗ್ಯ ಸಮಸ್ಯೆ ಆಗಿದೆ. ಇವುಗಳು ಒಮ್ಮೆ ಬಂದರೆ ಮತ್ತೆ ಹೋಗುವುದಿಲ್ಲ. ಬಂದ ಮೇಲೆ ಇವುಗಳ ನಿರ್ವಹಣೆ ತುಂಬ ಜಾಗರೂಕತೆಯಿಂದ ಕೂಡಿರಬೇಕು. ವೈದ್ಯರು ಕೊಡುವ ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಒಳ್ಳೆಯ ಬದಲಾವಣೆಯನ್ನು ತಂದುಕೊಳ್ಳಬೇಕು.
ಡ್ರೈ ಫ್ರೂಟ್ಸ್ ಅಥವಾ ಒಣ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ನಾರಿನ ಅಂಶ ಇರುತ್ತದೆ. ಇದು ರಕ್ತದ ಒತ್ತಡವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಚೆನ್ನಾಗಿ ಕೆಲಸ ಮಾಡುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ರಕ್ತದ ಒತ್ತಡ ಉಂಟಾಗಿದ್ದರೆ ಅದನ್ನು ಸಹದ ಮಟ್ಟಕ್ಕೆ ತೆಗೆದುಕೊಂಡು ಹೋಗುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದ ಒತ್ತಡ ಹೆಚ್ಚಾಗಿ ಇರುವ ಜನರಿಗೆ ಅನುಕೂಲವಾಗುವಂತೆ ಯಾವ ನಾಲ್ಕು ಒಣ ಬೀಜಗಳನ್ನು ಸೇವನೆ ಮಾಡಬಹುದು ಎಂಬುದರ ಬಗ್ಗೆ ಎಲ್ಲಿ ತಿಳಿಸಿಕೊಡಲಾಗಿದೆ.
ಗೋಡಂಬಿ ಬೀಜಗಳು
ರಕ್ತದೊತ್ತಡ ನಿಯಂತ್ರಣಕ್ಕೆ ಇವು ನೈಸರ್ಗಿಕವಾದ ಒಂದು ಪರಿಹಾರ ಎಂದು ಹೇಳಬಹುದು. ಇವುಗಳಲ್ಲಿ ಸೋಡಿಯಂ ಪ್ರಮಾಣ ಕಡಿಮೆ ಇರುತ್ತದೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಪೊಟ್ಯಾಶಿಯಂ ಅಂಶ ಇರುತ್ತದೆ. ಇದರಿಂದ ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡಿಕೊಳ್ಳಬಹುದು.
ಪಿಸ್ತಾ ಬೀಜಗಳು
ಇವುಗಳಲ್ಲಿ ಸಹ ಕಡಿಮೆ ಕ್ಯಾಲೋರಿಗಳು ಇರಲಿದ್ದು ಮತ್ತು ಹೆಚ್ಚಿನ ನಾರಿನ ಪ್ರಮಾಣ ಇರುತ್ತದೆ. ಇದಕ್ಕಿಂತ ಪ್ರಮುಖವಾಗಿ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಹೆಚ್ಚಾಗಿರುವುದರಿಂದ ದೇಹದಲ್ಲಿ ಫ್ರೀ ರಾಡಿಕಲ್ ಗಳು ಅಷ್ಟಾಗಿ ತೊಂದರೆ ನೀಡುವುದಿಲ್ಲ. ರಕ್ತದ ಒತ್ತಡ ಹೆಚ್ಚಾದ ಸಂದರ್ಭದಲ್ಲಿ ನೀವು ಇವುಗಳನ್ನು ಸೇವನೆ ಮಾಡಬಹುದು.
ಬಾದಾಮಿ ಬೀಜಗಳು
ರಕ್ತದ ಒತ್ತಡವನ್ನು ನಿರ್ವಹಣೆ ಮಾಡಿಕೊಳ್ಳಲು ಅನುಕೂಲಕರವಾಗಿ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ alpha tocopherolಇದರಲ್ಲಿರುತ್ತದೆ. ನಿಯಮಿತವಾಗಿ ಆಗಾಗ ಬಾದಾಮಿ ಬೀಜಗಳನ್ನು ತಿನ್ನುವುದರಿಂದ ರಕ್ತದ ಒತ್ತಡ ನಿರ್ವಹಣೆಯಲ್ಲಿ ಸಾಕಷ್ಟು ಸಹಾಯ ಆಗುತ್ತದೆ. ವಿಶೇಷವಾಗಿ 30 ರಿಂದ 70 ವರ್ಷ ವಯಸ್ಸಾಗಿರುವ ಪುರುಷರಿಗೆ ಹೆಚ್ಚು ಅನುಕೂಲ ಸಿಗುತ್ತದೆ.
Prunes (ಕಪ್ಪು ಒಣದ್ರಾಕ್ಷಿ ಹಾಗೆ ಇರುವ ಒಣಫಲ)
ಇದರಲ್ಲಿ ಕೂಡ ಹೆಚ್ಚಿನ ಪ್ರಮಾಣದ ಪೊಟ್ಯಾಷಿಯಂ ಅಂಶ ಇರುತ್ತದೆ. ರಕ್ತದ ಒತ್ತಡ ಹೆಚ್ಚಾದ ಸಂದರ್ಭದಲ್ಲಿ ಇವುಗಳನ್ನು ಸೇವನೆ ಮಾಡುವುದರಿಂದ ಬಿಪಿ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿ ನೆನೆ ಹಾಕಿದ Prunes ಅಧಿಕ ರಕ್ತದ ಒತ್ತಡ ಇರುವ ಜನರಿಗೆ ತುಂಬಾ ಒಳ್ಳೆಯದು.
High Blood Pressure Patients Can Consume Dry Fruits.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm