ಬ್ರೇಕಿಂಗ್ ನ್ಯೂಸ್
19-10-22 07:55 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಕಾಯಿಲೆ ವ್ಯಕ್ತಿಯಲ್ಲಿಕಾಣಿಸಿಕೊಂಡ ಮೇಲೆ, ಆತನ ಸಂಪೂರ್ಣ ಜೀವನಶೈಲಿಯೇ ಬದಲಾಗಿ ಬಿಡುತ್ತದೆ ಎಂದು ಹೇಳಲಾಗುತ್ತದೆ. ಇದು ನಿಜ ಕೂಡ ಈ ಕಾಯಿಲೆ ಇದೆ ಎಂದು ಖಚಿತವಾದ ಬಳಿಕ, ಕಣ್ಣಿಗೆ ಕಾಣುವ ಹಾಗೂ ಮನಸ್ಸು ಬಯಸುವ ಆಹಾರ ಪದಾರ್ಥಗಳನ್ನು ತಿನ್ನಲು ಸಾಧ್ಯವಾಗುವುದಿಲ್ಲ. ಎಲ್ಲಾ ವಿಷ್ಯದಲ್ಲೂ ನೀತಿನಿಯಮ ಗಳನ್ನು ಅನುಸರಿಸಬೇಕಾಗುತ್ತದೆ.
ಹಾಗಾಗಿ ಜೀವನದಲ್ಲಿ ಇಂತಹ ಸಮಸ್ಯೆಗಳು ಬರಬಾರದೆಂದರೆ, ಈಗಿನಿಂದಲೇ ಅನಾರೋಗ್ಯಕಾರಿ ಜೀವನಶೈಲಿಯನ್ನು ಬಿಟ್ಟು ಆರೋಗ್ಯಕಾರಿ ಆಹಾರಗಳನ್ನು ಸೇವನೆ ಮಾಡುತ್ತಾ ಹೋದರೆ ಇಂತಹ ಸೈಲೆಂಟ್ ಕಿಲ್ಲರ್ ಕಾಯಿಲೆಯಿಂದ ದೂರವಿರಬಹುದು. ಬನ್ನಿ ಇಂದಿನ ಲೇಖನದಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೆಚ್ಚಿರುವ, ಸೇಬು ಹಣ್ಣು ಹಾಗೂ ಬಾಳೆಹಣ್ಣನ್ನು ಸಕ್ಕರೆ ಕಾಯಿಲೆ ಇದ್ದವರು ಸೇವನೆ ಮಾಡಬಹುದಾ ಎನ್ನುವುದನ್ನು ನೋಡೋಣ ಬನ್ನಿ....
ಸೇಬು ಹಣ್ಣು ಹಾಗೂ ಸಕ್ಕರೆಕಾಯಿಲೆ

ಸೇಬು ಹಣ್ಣಿನಲ್ಲಿ ಕಂಡು ಬರುವ ನೈಸರ್ಗಿಕ ಸಕ್ಕರೆ ಅಂಶ..

ಪ್ರಮುಖವಾಗಿ ಈ ಹಣ್ಣಿನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಇದನ್ನೇ ಫ್ರಕ್ಟೋಸ್ ಎಂದು ಕರೆಯಲಾಗುತ್ತದೆ. ಹೀಗಾಗಿ ಮಧುಮೇಹಿ ರೋಗಿಗಳು ಈ ಹಣ್ಣನ್ನು ಅತಿಯಾಗಿ ಸೇವನೆ ಮಾಡಿದರೆ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಮೇಲೆ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆಯಂತೆ! ಹೀಗಾಗಿ ದಿನಕ್ಕೆ ಅರ್ಧ ತುಂಡು ಸೇಬು ಹಣ್ಣು ತಿನ್ನುವುದರಲ್ಲಿ ಅಡ್ಡಿಯಿಲ್ಲ!
ಗ್ಲೈಸೆಮಿಕ್ ಸೂಚ್ಯಂಕ

ತಜ್ಞರು ಹೇಳುವ ಪ್ರಕಾರ ರಕ್ತದಲ್ಲಿನ ಸಕ್ಕರೆ ಮಟ್ಟ ಅಚ್ಚುಕಟ್ಟಾಗಿ ನಿರ್ವಹಣೆ ಆಗಬೇಕೆಂದರೆ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಇರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸೇಬು ಹಣ್ಣು! ಹೀಗಾಗಿ ಸಕ್ಕರೆಕಾಯಿಲೆ ಇರುವವರು ಮಿತವಾಗಿ ಸೇವನೆ ಮಾಡುವು ದರಲ್ಲಿ ಅಡ್ಡಿಯಿಲ್ಲ
ಬಾಳೆಹಣ್ಣು ಹಾಗೂ ಮಧುಮೇಹ
ಬಾಳೆಹಣ್ಣು ತಿನ್ನುವ ಮೊದಲು ವೈದ್ಯರಿಂದ ಸಲಹೆಗಳನ್ನು ಪಡೆದುಕೊಳ್ಳಿ

ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹಾಗೂ ಗ್ಲೈಸೆಮಿಕ್ ಸೂಚ್ಯಾಂಕ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಮಧುಮೇಹ ಕಾಯಿಲೆ ಇರುವವರು, ಈ ಹಣ್ಣನ್ನು ತಿನ್ನುವ ಮೊದಲು ವೈದ್ಯರ ಸಲಹೆಗಳನ್ನು ಪಡೆದುಕೊಂಡರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ, ಮಧು ಮೇಹಿಗಳು, ಬಾಳೆಹಣ್ಣನ್ನು ಮಿತವಾಗಿ ಸೇವನೆ ಮಾಡಿದರೆ ಒಳ್ಳೆಯದು.
Can Diabetics Eat Bananas And Apple Does Its Effect Blood Sugar Levels.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm