ಬ್ರೇಕಿಂಗ್ ನ್ಯೂಸ್
25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
As Per The Health Experts Turmeric Has Broad Benefits For Your Throat Pain.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm