ಬ್ರೇಕಿಂಗ್ ನ್ಯೂಸ್
25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
As Per The Health Experts Turmeric Has Broad Benefits For Your Throat Pain.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm