ಬ್ರೇಕಿಂಗ್ ನ್ಯೂಸ್
25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
As Per The Health Experts Turmeric Has Broad Benefits For Your Throat Pain.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am