ಬ್ರೇಕಿಂಗ್ ನ್ಯೂಸ್
14-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಹಿತ್ತಲ ಗಿಡ ಅನೇಕ ರೋಗ ರುಜನಗಳಿಗೆ ಮದ್ದು ಎಂಬ ಮಾತು ಕೇಳಿದ್ದೇವೆ. ಅದು ಸಾಮಾನ್ಯವಾಗಿ ಕರಿಬೇವಿನ ವಿಚಾರದಲ್ಲಿ ನಿಜವಾಗುತ್ತದೆ ಎನಿಸುತ್ತದೆ. ಏಕೆಂದರೆ ಮನುಷ್ಯನ ಆರೋಗ್ಯದ ವಿಚಾರ ಎಂದು ಬಂದಾಗ ಅದರಲ್ಲಿ ಕರಿಬೇವಿನ ಸೊಪ್ಪಿನ ಪಾತ್ರ ಸಾಕಷ್ಟಿರುತ್ತದೆ. ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಪರಿಹಾರ.
ಅದರಂತೆ ಮನುಷ್ಯನ ಬುದ್ಧಿವಂತಿಕೆ ಹೆಚ್ಚಿಸುವಲ್ಲಿ ಕೂಡ ಕರಿಬೇವಿನ ಸೊಪ್ಪು ನಿರ್ಣಾಯಕ ಪಾತ್ರ ಹೊಂದಿದೆ. ಹೆಚ್ಚು ಚುರುಕುತನ ಮತ್ತು ಒಳ್ಳೆಯ ನೆನಪಿನ ಶಕ್ತಿ ಬೇಕು ಎನ್ನುವವರು ಕರಿಬೇವಿನ ಸೊಪ್ಪಿನ ಚಹಾ ಮಾಡಿ ಕುಡಿಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಬಿಪಿ ಇರುವವರು ಸ್ವಲ್ಪ ಆಲೋಚನೆ ಮಾಡಬೇಕು.
ನೆನಪಿನ ಶಕ್ತಿಗೆ ಸಂಬಂಧಪಟ್ಟ ಸಂಶೋಧನೆ
![]()
ನಮ್ಮೆಲ್ಲರಿಗೂ ನೆನಪಿನ ಶಕ್ತಿ ಒಂದು ವರದಾನ. ಆದರೆ ಎಲ್ಲರಿಗೂ ಒಂದೇ ರೀತಿಯ ನೆನಪಿನ ಶಕ್ತಿ ಇರುವುದಿಲ್ಲ. ಕೆಲವರು ಧೀರ್ಘ ಕಾಲದಿಂದ ತುಂಬಾ ಹಳೆಯದ್ದನ್ನು ಎಷ್ಟು ವರ್ಷಗಳ ಕಾಲ ಬೇಕಾದರೂ ನೆನಪಿಟ್ಟುಕೊಳ್ಳುತ್ತಾರೆ. ಕೆಲವರು ನೆನ್ನೆ ಮೊನ್ನೆ ನಡೆದದ್ದನ್ನು ಮರೆತು ಹೋಗುತ್ತಾರೆ. ಹಾಗಾದರೆ ಏಕೆ ಹೀಗೆ?
ಮನುಷ್ಯರಾದ ಮೇಲೆ ನಾವೆಲ್ಲರೂ ಒಂದೇ ತಾನೇ ಎಂದು ನಮ್ಮಲ್ಲಿ ಗೊಂದಲ ಮೂಡುವುದು ಸಹಜ. ಆದರೆ ಇದಕ್ಕೆಲ್ಲ ಅನುವಂಶಿಯತೆ ಸೇರಿದಂತೆ ಬೇರೆ ಬೇರೆ ಕಾರಣಗಳು ಇರುತ್ತವೆ. ಇಂತಹ ಒಂದು ನೆನಪಿನ ಶಕ್ತಿಯ ಕೊರತೆಯನ್ನು ಹೇಗೆ ಸರಿ ಹೊಂದಿಸಬೇಕು ಎನ್ನುವುದನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ.
ಸಂಶೋಧನೆಯಲ್ಲಿ ಹೇಳಿರುವ ಪ್ರಕಾರ...
ಇದಕ್ಕಾಗಿ ಒಂದು ಸಂಶೋಧನೆ ಸಹ ನಡೆದಿದೆ. ಅದು ಕೂಡ ಕರಿಬೇವಿನ ಸೊಪ್ಪಿನ ಬಳಕೆಯಿಂದ ನಿಜವಾಗಲೂ ಮನುಷ್ಯನ ಬುದ್ಧಿ ಚುರುಕಾಗುತ್ತದೆಯೇ ಎಂಬ ಬಗ್ಗೆ. ಮೊದಲು ಇಲಿಗಳ ಮೇಲೆ ಈ ಸಂಶೋಧನೆ ನಡೆದಿತ್ತು ಮತ್ತು ಅದನ್ನು ಫೈಟೋಥೆರಪಿ ರಿಸರ್ಚ್ ನಲ್ಲಿ ವರದಿ ಪ್ರಕಟ ಮಾಡಲಾಗಿತ್ತು.
ಅಲ್ಲಿ ತಿಳಿದು ಬಂದ ಒಂದು ಅಚ್ಚರಿಯ ವಿಷಯ ಏನೆಂದರೆ ಇಲಿಗಳಲ್ಲಿ ನೆನಪಿನ ಶಕ್ತಿ ಕುಂದುವ ಹಾಗೆ ಔಷಧಿ ನೀಡಿ ಮತ್ತೆ ಅವುಗಳ ಆಹಾರ ಪದ್ಧತಿಯಲ್ಲಿ ಕರಿಬೇವಿನ ಸೊಪ್ಪನ್ನು ಸೇರಿಸಿ ಮೆದುಳಿನಲ್ಲಿ ನಿಜವಾಗಲೂ ಆಗುವ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲು ಅಲ್ಲಿನ ಸಂಶೋಧಕರು ಮುಂದಾದರು.
ಕೊನೆಯ ಫಲಿತಾಂಶದಲ್ಲಿ ತಿಳಿದುಬಂದ ವಿಚಾರ

ಸಂಶೋಧನೆಯ ಕೊನೆಯ ಹಂತದಲ್ಲಿ ಅವರು ಕಂಡುಕೊಂಡ ವಿಚಾರ ಎಂದರೆ ಕರಿಬೇವಿನ ಸೊಪ್ಪು ಸೇವನೆ ಮಾಡಿದ ಇಲಿಗಳಲ್ಲಿ ಆಮ್ನೇಶಿಯ ಕಡಿಮೆಯಾಗಿತ್ತು. ಅದೇ ರೀತಿ ದೇಹದಲ್ಲಿ ಕೊಲೆಸ್ಟ್ರಾಲ್ ಅಂಶ ಕೂಡ ಸಾಕಷ್ಟು ಕಡಿಮೆಯಾದ ಬಗ್ಗೆ ಮಾಹಿತಿ ಸಿಕ್ಕಿತು.
ಇದರಿಂದ ಅಧ್ಯಯನಕಾರರು ಒಂದು ವಿಷಯವನ್ನು ಸ್ಪಷ್ಟಪಡಿಸಿದರು. ಅದೇನೆಂದರೆ ಮುಂದಿನ ದಿನಗಳಲ್ಲಿ ಕರಿಬೇವಿನ ಸೊಪ್ಪನ್ನು ಜನರು ತಮ್ಮ ಬುದ್ಧಿಯ ಚುರುಕುತನಕ್ಕಾಗಿ ಬಳಸಬಹುದು ಎಂದು ಹೇಳಿದರು.
ವಯಸ್ಸಾದಂತೆ ಕಾಡುವ ನೆನಪಿನ ಶಕ್ತಿಯ ಸಮಸ್ಯೆ...

ವಯಸ್ಸಾದಂತೆ ಮನುಷ್ಯನಿಗೆ ಎದುರಾಗುವ ನೆನಪಿನ ಶಕ್ತಿಯ ಕೊರತೆ ಮತ್ತು ಹಾಳಾಗುವ ಮೆದುಳಿನ ಜೀವಕೋಶಗಳನ್ನು ಸರಿಪಡಿಸುವ ಜೊತೆಗೆ ಅಲ್ಜಿಮರ್ ಕಾಯಿಲೆ ಮತ್ತು ಡೆಮನ್ಶಿಯಾ ರೋಗಗಳನ್ನು ಸಹ ನಿಯಂತ್ರಣ ಮಾಡುವ ಶಕ್ತಿ ಕರಿಬೇವಿನ ಸೊಪ್ಪಿಗೆ ಇದೆ ಎಂದು ತಿಳಿದು ಬಂದಿದೆ.
ಹೀಗಾಗಿ ಜನರು ಬೆಳಗ್ಗೆ ಎದ್ದು ಬೆಡ್ ಕಾಫಿ ಕುಡಿಯುವ ಬದಲು ಮೆದುಳಿಗೆ ಸಹಕಾರಿಯಾದ ಕರಿಬೇವಿನ ಚಹಾ ಮಾಡಿ ಕುಡಿಯುವುದು ಒಳ್ಳೆಯದು.
ಕರಿಬೇವಿನ ಚಹಾ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ
![]()
ಕೊನೆಯ ಮಾತು...

ಕೆಲವರಿಗೆ ಬೆಲ್ಲ ಇಷ್ಟವಾಗುವುದಿಲ್ಲ. ಇನ್ನು ಕೆಲವರು ಶುಂಠಿ ಮತ್ತು ಜೀರಿಗೆ ಇಷ್ಟಪಡುವುದಿಲ್ಲ. ಅಂತಹವರು ಇವುಗಳನ್ನು ಸೇರಿಸದೆ ಕೇವಲ ಕರಿಬೇವಿನ ಸೊಪ್ಪಿನಿಂದ ಚಹಾ ತಯಾರು ಮಾಡಿ ಕುಡಿಯಬಹುದು.
Curry Leaves Are Best To Boost Brain Functions.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm