ಬ್ರೇಕಿಂಗ್ ನ್ಯೂಸ್
14-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಹಿತ್ತಲ ಗಿಡ ಅನೇಕ ರೋಗ ರುಜನಗಳಿಗೆ ಮದ್ದು ಎಂಬ ಮಾತು ಕೇಳಿದ್ದೇವೆ. ಅದು ಸಾಮಾನ್ಯವಾಗಿ ಕರಿಬೇವಿನ ವಿಚಾರದಲ್ಲಿ ನಿಜವಾಗುತ್ತದೆ ಎನಿಸುತ್ತದೆ. ಏಕೆಂದರೆ ಮನುಷ್ಯನ ಆರೋಗ್ಯದ ವಿಚಾರ ಎಂದು ಬಂದಾಗ ಅದರಲ್ಲಿ ಕರಿಬೇವಿನ ಸೊಪ್ಪಿನ ಪಾತ್ರ ಸಾಕಷ್ಟಿರುತ್ತದೆ. ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಪರಿಹಾರ.
ಅದರಂತೆ ಮನುಷ್ಯನ ಬುದ್ಧಿವಂತಿಕೆ ಹೆಚ್ಚಿಸುವಲ್ಲಿ ಕೂಡ ಕರಿಬೇವಿನ ಸೊಪ್ಪು ನಿರ್ಣಾಯಕ ಪಾತ್ರ ಹೊಂದಿದೆ. ಹೆಚ್ಚು ಚುರುಕುತನ ಮತ್ತು ಒಳ್ಳೆಯ ನೆನಪಿನ ಶಕ್ತಿ ಬೇಕು ಎನ್ನುವವರು ಕರಿಬೇವಿನ ಸೊಪ್ಪಿನ ಚಹಾ ಮಾಡಿ ಕುಡಿಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಬಿಪಿ ಇರುವವರು ಸ್ವಲ್ಪ ಆಲೋಚನೆ ಮಾಡಬೇಕು.
ನೆನಪಿನ ಶಕ್ತಿಗೆ ಸಂಬಂಧಪಟ್ಟ ಸಂಶೋಧನೆ
![]()
ನಮ್ಮೆಲ್ಲರಿಗೂ ನೆನಪಿನ ಶಕ್ತಿ ಒಂದು ವರದಾನ. ಆದರೆ ಎಲ್ಲರಿಗೂ ಒಂದೇ ರೀತಿಯ ನೆನಪಿನ ಶಕ್ತಿ ಇರುವುದಿಲ್ಲ. ಕೆಲವರು ಧೀರ್ಘ ಕಾಲದಿಂದ ತುಂಬಾ ಹಳೆಯದ್ದನ್ನು ಎಷ್ಟು ವರ್ಷಗಳ ಕಾಲ ಬೇಕಾದರೂ ನೆನಪಿಟ್ಟುಕೊಳ್ಳುತ್ತಾರೆ. ಕೆಲವರು ನೆನ್ನೆ ಮೊನ್ನೆ ನಡೆದದ್ದನ್ನು ಮರೆತು ಹೋಗುತ್ತಾರೆ. ಹಾಗಾದರೆ ಏಕೆ ಹೀಗೆ?
ಮನುಷ್ಯರಾದ ಮೇಲೆ ನಾವೆಲ್ಲರೂ ಒಂದೇ ತಾನೇ ಎಂದು ನಮ್ಮಲ್ಲಿ ಗೊಂದಲ ಮೂಡುವುದು ಸಹಜ. ಆದರೆ ಇದಕ್ಕೆಲ್ಲ ಅನುವಂಶಿಯತೆ ಸೇರಿದಂತೆ ಬೇರೆ ಬೇರೆ ಕಾರಣಗಳು ಇರುತ್ತವೆ. ಇಂತಹ ಒಂದು ನೆನಪಿನ ಶಕ್ತಿಯ ಕೊರತೆಯನ್ನು ಹೇಗೆ ಸರಿ ಹೊಂದಿಸಬೇಕು ಎನ್ನುವುದನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ.
ಸಂಶೋಧನೆಯಲ್ಲಿ ಹೇಳಿರುವ ಪ್ರಕಾರ...
ಇದಕ್ಕಾಗಿ ಒಂದು ಸಂಶೋಧನೆ ಸಹ ನಡೆದಿದೆ. ಅದು ಕೂಡ ಕರಿಬೇವಿನ ಸೊಪ್ಪಿನ ಬಳಕೆಯಿಂದ ನಿಜವಾಗಲೂ ಮನುಷ್ಯನ ಬುದ್ಧಿ ಚುರುಕಾಗುತ್ತದೆಯೇ ಎಂಬ ಬಗ್ಗೆ. ಮೊದಲು ಇಲಿಗಳ ಮೇಲೆ ಈ ಸಂಶೋಧನೆ ನಡೆದಿತ್ತು ಮತ್ತು ಅದನ್ನು ಫೈಟೋಥೆರಪಿ ರಿಸರ್ಚ್ ನಲ್ಲಿ ವರದಿ ಪ್ರಕಟ ಮಾಡಲಾಗಿತ್ತು.
ಅಲ್ಲಿ ತಿಳಿದು ಬಂದ ಒಂದು ಅಚ್ಚರಿಯ ವಿಷಯ ಏನೆಂದರೆ ಇಲಿಗಳಲ್ಲಿ ನೆನಪಿನ ಶಕ್ತಿ ಕುಂದುವ ಹಾಗೆ ಔಷಧಿ ನೀಡಿ ಮತ್ತೆ ಅವುಗಳ ಆಹಾರ ಪದ್ಧತಿಯಲ್ಲಿ ಕರಿಬೇವಿನ ಸೊಪ್ಪನ್ನು ಸೇರಿಸಿ ಮೆದುಳಿನಲ್ಲಿ ನಿಜವಾಗಲೂ ಆಗುವ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲು ಅಲ್ಲಿನ ಸಂಶೋಧಕರು ಮುಂದಾದರು.
ಕೊನೆಯ ಫಲಿತಾಂಶದಲ್ಲಿ ತಿಳಿದುಬಂದ ವಿಚಾರ

ಸಂಶೋಧನೆಯ ಕೊನೆಯ ಹಂತದಲ್ಲಿ ಅವರು ಕಂಡುಕೊಂಡ ವಿಚಾರ ಎಂದರೆ ಕರಿಬೇವಿನ ಸೊಪ್ಪು ಸೇವನೆ ಮಾಡಿದ ಇಲಿಗಳಲ್ಲಿ ಆಮ್ನೇಶಿಯ ಕಡಿಮೆಯಾಗಿತ್ತು. ಅದೇ ರೀತಿ ದೇಹದಲ್ಲಿ ಕೊಲೆಸ್ಟ್ರಾಲ್ ಅಂಶ ಕೂಡ ಸಾಕಷ್ಟು ಕಡಿಮೆಯಾದ ಬಗ್ಗೆ ಮಾಹಿತಿ ಸಿಕ್ಕಿತು.
ಇದರಿಂದ ಅಧ್ಯಯನಕಾರರು ಒಂದು ವಿಷಯವನ್ನು ಸ್ಪಷ್ಟಪಡಿಸಿದರು. ಅದೇನೆಂದರೆ ಮುಂದಿನ ದಿನಗಳಲ್ಲಿ ಕರಿಬೇವಿನ ಸೊಪ್ಪನ್ನು ಜನರು ತಮ್ಮ ಬುದ್ಧಿಯ ಚುರುಕುತನಕ್ಕಾಗಿ ಬಳಸಬಹುದು ಎಂದು ಹೇಳಿದರು.
ವಯಸ್ಸಾದಂತೆ ಕಾಡುವ ನೆನಪಿನ ಶಕ್ತಿಯ ಸಮಸ್ಯೆ...

ವಯಸ್ಸಾದಂತೆ ಮನುಷ್ಯನಿಗೆ ಎದುರಾಗುವ ನೆನಪಿನ ಶಕ್ತಿಯ ಕೊರತೆ ಮತ್ತು ಹಾಳಾಗುವ ಮೆದುಳಿನ ಜೀವಕೋಶಗಳನ್ನು ಸರಿಪಡಿಸುವ ಜೊತೆಗೆ ಅಲ್ಜಿಮರ್ ಕಾಯಿಲೆ ಮತ್ತು ಡೆಮನ್ಶಿಯಾ ರೋಗಗಳನ್ನು ಸಹ ನಿಯಂತ್ರಣ ಮಾಡುವ ಶಕ್ತಿ ಕರಿಬೇವಿನ ಸೊಪ್ಪಿಗೆ ಇದೆ ಎಂದು ತಿಳಿದು ಬಂದಿದೆ.
ಹೀಗಾಗಿ ಜನರು ಬೆಳಗ್ಗೆ ಎದ್ದು ಬೆಡ್ ಕಾಫಿ ಕುಡಿಯುವ ಬದಲು ಮೆದುಳಿಗೆ ಸಹಕಾರಿಯಾದ ಕರಿಬೇವಿನ ಚಹಾ ಮಾಡಿ ಕುಡಿಯುವುದು ಒಳ್ಳೆಯದು.
ಕರಿಬೇವಿನ ಚಹಾ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ
![]()
ಕೊನೆಯ ಮಾತು...

ಕೆಲವರಿಗೆ ಬೆಲ್ಲ ಇಷ್ಟವಾಗುವುದಿಲ್ಲ. ಇನ್ನು ಕೆಲವರು ಶುಂಠಿ ಮತ್ತು ಜೀರಿಗೆ ಇಷ್ಟಪಡುವುದಿಲ್ಲ. ಅಂತಹವರು ಇವುಗಳನ್ನು ಸೇರಿಸದೆ ಕೇವಲ ಕರಿಬೇವಿನ ಸೊಪ್ಪಿನಿಂದ ಚಹಾ ತಯಾರು ಮಾಡಿ ಕುಡಿಯಬಹುದು.
Curry Leaves Are Best To Boost Brain Functions.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am