ಬ್ರೇಕಿಂಗ್ ನ್ಯೂಸ್
29-11-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಒಳಗಿರುವ ಪ್ರತಿಯೊಂದು ಅಂಗಾಂಗಗಳ ಬಗ್ಗೆ ನಾವು ಕಾಳಜಿ ಹೊಂದಬೇಕು. ಏಕೆಂದರೆ ಅವುಗಳು ನಮ್ಮ ಕಣ್ಣಿಗೆ ಕಾಣುವುದಿಲ್ಲ ಮತ್ತು ನಿರಂತರವಾಗಿ ಕಾರ್ಯ ಚಟು ವಟಿಕೆ ನಡೆಸುತ್ತಿರುತ್ತವೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಅವುಗಳಿಗೆ ನಮ್ಮ ಆಹಾರ ಪದ್ಧತಿಯಿಂದ ಅಥವಾ ನಮ್ಮಿಂದಲೇ ತೊಂದರೆ ಎದುರಾಗಬಹುದು.
ಮುಖ್ಯವಾಗಿ ನಮ್ಮ ದೇಹದಲ್ಲಿ ವಿಷಕಾರಿ ಅಂಶಗಳು ದೇಹದಿಂದ ಹೊರಹೋಗದೆ ದೇಹದಲ್ಲಿ ಹಾಗೆ ಶೇಖರಣೆ ಆದರೆ ನಮ್ಮ ದೇಹದ ಪ್ರಮುಖ ಅಂಗಾಂಗಗಳಾದ ಲಿವರ್ ಮತ್ತು ಕರುಳು ತೊಂದರೆಗೆ ಒಳಗಾಗುವ ಸಾಧ್ಯತೆ ಇರುತ್ತದೆ.
ಆರೋಗ್ಯಕಾರಿ ಆಹಾರ ಪದ್ಧತಿ ಅತ್ಯಗತ್ಯ

ಸಾಧ್ಯವಾದಷ್ಟು ಒಳ್ಳೆಯ ಆಹಾರ ಸೇವನೆ ಮತ್ತು ದೇಹಕ್ಕೆ ವ್ಯಾಯಾಮ ನೀಡುವುದರ ಕಡೆಗೆ ಗಮನ ಕೊಡಬೇಕು. ಈಗ ಲಿವರ್ ಬಗ್ಗೆ ಮಾತನಾಡುವುದಾದರೆ ಇದು ನಮ್ಮ ದೇಹದಲ್ಲಿ ಅನೇಕ ಕೆಲಸಗಳನ್ನು ನಮಗೆ ಗೊತ್ತಿಲ್ಲದೆ ಮಾಡುತ್ತದೆ.
ಉದಾಹರಣೆಗೆ ನಾವು ತಿಂದ ಆಹಾರ ಜೀರ್ಣವಾಗಲು ಅಗತ್ಯವಾಗಿ ಬೇಕಾದ ಜೀರ್ಣ ವ್ಯವಸ್ಥೆಯ ನಿರ್ವಹಣೆ, ಬೈಲ್ ಜ್ಯೂಸ್ ಉತ್ಪತ್ತಿ, ಪ್ರೋಟೀನ್ ಸಂಸ್ಕರಣೆ, ಮೆಟಬಾಲಿಸಂ, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಗೆ ಹಾಕುವುದು ಇವೆಲ್ಲವನ್ನೂ ಲಿವರ್ ಮಾಡುತ್ತದೆ.
ಆಯುರ್ವೇದ ಶಾಸ್ತ್ರದ ಪ್ರಕಾರ
-1557309616-1565595256.png)
ಆಯುರ್ವೇದ ಶಾಸ್ತ್ರದ ಪ್ರಕಾರ ಲಿವರ್ ಉಷ್ಣ ಪ್ರಭಾವದ ಮೇಲೆ ಕೆಲಸ ಮಾಡುವ ಅಂಗವಾಗಿದ್ದು, ಅದನ್ನು ದೀರ್ಘಕಾಲ ಚೆನ್ನಾಗಿ ನೋಡಿಕೊಳ್ಳಲು ತಂಪಾದ ಪ್ರಭಾವ ಹೊಂದಿರುವ ಆಹಾರಗಳ ಸೇವನೆ ಮಾಡಬೇಕು ಎಂದು ಆಯುರ್ವೇದ ತಜ್ಞರಾದ ಡಾ. ಪ್ರತಾಪ್ ಚೌಹಾನ್ ಹೇಳುತ್ತಾರೆ.
ಅವರ ಪ್ರಕಾರ ಕಹಿ ಇರುವ ಆಹಾರ ಪದಾರ್ಥಗಳು ಮತ್ತು ದೇಹಕ್ಕೆ ತಂಪು ಪ್ರಭಾವ ಬೀರುವ ಗಿಡಮೂಲಿಕೆಗಳು ಲಿವರ್ ಗೆ ಒಳ್ಳೆಯದು.
ಉದಾಹರಣೆಗೆ ಹೇಳುವುದಾದರೆ....

ಉದಾಹರಣೆಗೆ ಅಲೋವೆರಾ, ಬೇವು, ಹಾಗಲಕಾಯಿ, ಅರಿಶಿನ, ಬೆಟ್ಟದ ನೆಲ್ಲಿಕಾಯಿ ಇವು ಗಳನ್ನು ಆಗಾಗ ತಿನ್ನುತ್ತಿದ್ದರೆ ಲಿವರ್ ಆರೋಗ್ಯಕರವಾಗಿ ಕೂಡಿರುತ್ತದೆ. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು, ಬೀಟ್ರೂಟ್, ಕ್ಯಾರೆಟ್, ಸೇಬು ಹಣ್ಣು ಇವುಗಳು ಕೂಡ ಲಿವರ್ ಆರೋಗ್ಯವನ್ನು ಕಾಪಾಡುತ್ತವೆ.
ಚಹಾ ತಯಾರು ಮಾಡಿ ಕುಡಿಯಬಹುದು
ಆದರೆ ಕೆಲವರಿಗೆ ಇವುಗಳೆಲ್ಲವನ್ನು ತಂದು ಆಹಾರ ಪದಾರ್ಥಗಳನ್ನು ತಯಾರಿಸಿ ತಿನ್ನಲು ಸಮಯವಿರುವುದಿಲ್ಲ. ಅಂತಹವರು ಸುಲಭವಾಗಿ ನಮ್ಮ ದೇಹಕ್ಕೆ ಆರೋಗ್ಯವನ್ನು ಒದಗಿಸುವ ಮತ್ತು ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ದೂರ ಮಾಡಿ ಲಿವರ್ ಮತ್ತು ಕರುಳಿನ ಭಾಗವನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿ ಇರಿಸುವ ಚಹಾ ತಯಾರು ಮಾಡಿ ಕುಡಿಯಬಹುದು.
ಇದಕ್ಕಾಗಿ ನೀವು ಮಾಡಬೇಕಾದ್ದು ಇಷ್ಟೇ

ಒಂದು ಚಿಟಿಕೆ ಅರಿಶಿನ ತೆಗೆದುಕೊಂಡು ಅದನ್ನು ಒಂದು ಕಪ್ ನೀರಿನಲ್ಲಿ ಹಾಕಿ ಕೆಲವು ನಿಮಿಷಗಳ ಕಾಲ ಚೆನ್ನಾಗಿ ಕುದಿಸಬೇಕು. ನೀರು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಅಥವಾ ಉಗುರು ಬೆಚ್ಚಗಿನ ತಾಪಮಾನಕ್ಕೆ ಬಂದಾಗ ಅದಕ್ಕೆ ಸ್ವಲ್ಪ ನಿಂಬೆಹಣ್ಣಿನ ರಸ ಸೇರಿಸಿ ಕುಡಿಯಬೇಕು.
ಇದಕ್ಕೆ ಒಂದು ಟೀ ಚಮಚ ಜೇನುತುಪ್ಪ ಬೇಕಾದರೂ ಸೇರಿಸಬಹುದು. ಆದರೆ ಯಾವುದೇ ಕಾರಣಕ್ಕೂ ಸಕ್ಕರೆ ಹಾಕಬೇಡಿ. ಇಲ್ಲಿ ನೀವು ಬಳಸುವ ಅರಿಶಿನ ವಾಸಿ ಮಾಡುವ ಗುಣಲಕ್ಷಣಗಳನ್ನು ಹೊಂದಿದ್ದು ಲಿವರ್ ಭಾಗವನ್ನು ಸ್ವಚ್ಛಪಡಿಸುತ್ತದೆ.
Liver And Gut Can Be Cleaned By This Fantastic Herbal Tea.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am