ಬ್ರೇಕಿಂಗ್ ನ್ಯೂಸ್
08-12-22 07:30 pm Source: Vijayakarnataka ಡಾಕ್ಟರ್ಸ್ ನೋಟ್
ಆಯುರ್ವೇದವು ಹಲವಾರು ನೈಸರ್ಗಿಕ ಚಿಕಿತ್ಸೆಗಳು ಮತ್ತು ಪರಿಹಾರಗಳನ್ನು ಒಳಗೊಂಡಿದೆ. ಅದು ನಮಗೆ ವಿವಿಧ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಅಂತಹ ಒಂದು ಪರಿಹಾರವೆಂದರೆ ಹಾಲಿನಲ್ಲಿ ತುಪ್ಪ ಮತ್ತು ಅರಿಶಿನದ ಸಂಯೋಜನೆ.
ತುಪ್ಪ ಮತ್ತು ಅರಿಶಿನ ಹಾಲು

ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ಹಾಲನ್ನು ಕುಡಿಯುವುದನ್ನು ಆಯುರ್ವೇದವು ಹೆಚ್ಚಾಗಿ ಶಿಫಾರಸು ಮಾಡುತ್ತದೆ ಆದರೆ ನೀವು ಅದಕ್ಕೆ ತುಪ್ಪ ಮತ್ತು ಅರಿಶಿನವನ್ನು ಸೇರಿಸಿದರೆ ಇದರ ಸಂಯೋಜನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ನಿಮ್ಮ ದೈನಂದಿನ ಜೀವನಶೈಲಿಯಲ್ಲಿ ಈ ಆರೋಗ್ಯಕರ ಅಭ್ಯಾಸವನ್ನು ಏಕೆ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಯಲು ಮುಂದೆ ಓದಿ.
ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ
![]()
ಸಾಮಾನ್ಯವಾಗಿ ಹೊಟ್ಟೆಯ ಸಮಸ್ಯೆಗಳನ್ನು ಎದುರಿಸುತ್ತಿರುವವರು ಹಾಲಿನೊಂದಿಗೆ ತುಪ್ಪ ಮತ್ತು ಅರಿಶಿನದ ಸಂಯೋಜನೆಯಿಂದ ಹೆಚ್ಚು ಪ್ರಯೋಜನ ಪಡೆಯಬಹುದು. ಜೀರ್ಣಕ್ರಿಯೆಗೆ ಸಹಾಯ ಮಾಡುವುದರಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಇದು ಸಹಕಾರಿಯಾಗಿದೆ.
ಮಲಬದ್ಧತೆಗೆ ಚಿಕಿತ್ಸೆ ನೀಡುವುದಲ್ಲದೆ, ಜೀರ್ಣಕ್ರಿಯೆಯನ್ನೂ ಹೆಚ್ಚಿಸುತ್ತದೆ. ತುಪ್ಪ-ಅರಿಶಿನ-ಹಾಲಿನ ಸಂಯೋಜನೆಯು ಪ್ರಯೋಜನಗಳನ್ನು ನೀಡುತ್ತದೆ.
ಹೊಳೆಯುವ ಚರ್ಮ
ತುಪ್ಪ ಮತ್ತು ಹಾಲಿನ ಸಂಯೋಜನೆಯು ಚರ್ಮಕ್ಕೆ ನೈಸರ್ಗಿಕ ಮತ್ತು ಆಳವಾದ ಆರ್ಧ್ರಕವನ್ನು ಒದಗಿಸುತ್ತದೆ. ಒಣ ತ್ವಚೆ ಇರುವವರಿಗೆ ವಿಶೇಷವಾಗಿ ಚಳಿಗಾಲದಲ್ಲಿ ಈ ಸಂಯೋಜನೆಯು ತುಂಬಾ ಪ್ರಯೋಜನಕಾರಿಯಾಗಿದೆ.
ತುಪ್ಪ ಮತ್ತು ಹಾಲಿನ ನಿಯಮಿತ ಸೇವನೆಯು ನಿಮ್ಮ ಚರ್ಮವನ್ನು ಒಳಗಿನಿಂದ ಹೊಳೆಯುವಂತೆ ಮಾಡುವುದಲ್ಲದೆ ಕಲೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಶೀತ ಮತ್ತು ಕೆಮ್ಮನ್ನು ನಿವಾರಿಸುತ್ತದೆ

ಬೇಸಿಗೆಯಿಂದ ಚಳಿಗಾಲದ ಋತುವಿನ ಬದಲಾವಣೆಯು ಸಾಮಾನ್ಯ ಶೀತ ಮತ್ತು ಕೆಮ್ಮನ್ನು ಉಂಟುಮಾಡುತ್ತದೆ. ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ತುಪ್ಪ-ಅರಿಶಿನ ಮಿಶ್ರಿತ ಹಾಲು ಕುಡಿಯುವುದರಿಂದ ಶೀತ ಮತ್ತು ಕೆಮ್ಮಿನಿಂದ ತ್ವರಿತ ಪರಿಹಾರ ಪಡೆಯಬಹುದು.
ಇದು ಅಸ್ವಸ್ಥತೆಯ ಭಾವನೆಯನ್ನು ಕಡಿಮೆ ಮಾಡುತ್ತದೆ, ಗಂಟಲು ನೋವನ್ನು ಶಮನಗೊಳಿಸುತ್ತದೆ ಮತ್ತು ಕೆಮ್ಮಿನ ತೀವ್ರತೆಯನ್ನು ಕಡಿಮೆ ಮಾಡುತ್ತದೆ.
ಕೀಲು ನೋವನ್ನು ಕಡಿಮೆ ಮಾಡುತ್ತದೆ
![]()
ಹಾಲಿನಲ್ಲಿರುವ ಕ್ಯಾಲ್ಸಿಯಂ ಅಂಶವು ದುರ್ಬಲ ಮೂಳೆಗಳನ್ನು ಬಲಪಡಿಸಲು ನೈಸರ್ಗಿಕವಾಗಿ ಸಹಾಯ ಮಾಡುತ್ತದೆ, ತುಪ್ಪವು ಕೀಲುಗಳ ನಯಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ತುಪ್ಪವು ವಿಟಮಿನ್ ಕೆ 2 ಅನ್ನು ಸಹ ಹೊಂದಿದೆ. ಹಾಲು ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುವ ಪ್ರಮುಖ ಅಂಶವಾಗಿದೆ.
Health Benefits Of Drinking Turmeric Milk With Ghee.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am