ಬ್ರೇಕಿಂಗ್ ನ್ಯೂಸ್
21-12-22 07:00 pm Source: Vijayakarnataka ಡಾಕ್ಟರ್ಸ್ ನೋಟ್
ಹಾಗಲಕಾಯಿ ಹಲವಾರು ವರ್ಷಗಳಿಂದ ತನ್ನ ಔಷಧೀಯ ಗುಣಗಳಿಗೆ ಪ್ರಸಿದ್ಧವಾಗಿದೆ. ಹಾಗಾಗಿ ಇದನ್ನು ಆಯುರ್ವೇದ ಪ್ರಕಾರದಲ್ಲಿ ಒಂದು ನೈಸರ್ಗಿಕವಾದ ಔಷಧಿಯಾಗಿ ಬಳಸಿಕೊಂಡು ಬರಲಾಗಿದೆ. ಸಕ್ಕರೆ ಕಾಯಿಲೆಗೆ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಮಧುಮೇಹ ಇರುವವರು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಇದರಿಂದ ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಇದು ತಡೆಯುತ್ತದೆ. ಇದರ ಜೊತೆಗೆ ಹೃದಯದ ತೊಂದರೆ, ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್, ದೇಹದ ತೂಕ ಹೆಚ್ಚಾಗುವುದು, ರಕ್ತದ ಒತ್ತಡ ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಹಾಗಲಕಾಯಿ ಜ್ಯೂಸ್

ಹಾಗಲಕಾಯಿ ಜ್ಯೂಸ್ ತನ್ನಲ್ಲಿ ಮೆಗ್ನೀಷಿಯಂ, ಪೊಟಾಸಿಯಂ, ಕಬ್ಬಿಣ ಮತ್ತು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದೆ.
ಇದು ಅಪಾರ ಪ್ರಮಾಣದ ನಾರಿನ ಅಂಶವನ್ನು ಹೊಂದಿದ್ದು, ದುಪ್ಪಟ್ಟು ಪ್ರಮಾಣದಲ್ಲಿ ಕ್ಯಾಲ್ಸಿಯಂ ಮತ್ತು ಬೀಟಾ ಕ್ಯಾರೋಟಿನ್ ಅಂಶವನ್ನು ಒಳಗೊಂಡಿದೆ. ಮಧುಮೇಹ ವಿರೋಧಿ ಗುಣಲಕ್ಷಣಗಳು ಹಾಗಲಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ.
ಹಾಗಲಕಾಯಿ ಜ್ಯೂಸ್ ತಯಾರಿಸುವುದು ಹೇಗೆ?

ಈಗ ತಯಾರಿಸುವ ವಿಧಾನವನ್ನು ನೋಡೋಣ

ಮೊದಲಿಗೆ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಮೇಲಿನ ಸಿಪ್ಪೆಯನ್ನು ತೆಗೆದುಹಾಕಿ. ಈಗ ಹಾಗಲಕಾಯಿಯನ್ನು ಹೋಳುಗಳನ್ನಾಗಿ ಹೆಚ್ಚಿ ಅವುಗಳಲ್ಲಿರುವ ಬೀಜಗಳನ್ನು ತೆಗೆದು ಹಾಕಿ.
ಈಗ ಒಂದು ಪಾತ್ರೆಯಲ್ಲಿ ನೀರು ತೆಗೆದುಕೊಂಡು ಅದಕ್ಕೆ ಅರ್ಧ ಟೀ ಚಮಚ ಉಪ್ಪು ಹಾಕಿ. ಇದಕ್ಕೆ ಹಾಗಲಕಾಯಿ ಚೂರುಗಳನ್ನು ಸೇರಿಸಿ 10 ನಿಮಿಷಗಳ ಕಾಲ ನೆನೆ ಹಾಕಿ.
ಇದಾದ ನಂತರದಲ್ಲಿ ನಿಮ್ಮ ಹಾಗಲಕಾಯಿ ಚೂರುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿ ರಸ ತೆಗೆದುಕೊಳ್ಳಿ.
ಕೊನೆಯ ಮಾತು...

ಈಗ ಒಂದು ಗ್ಲಾಸ್ ನಲ್ಲಿ ಹಾಗಲಕಾಯಿ ರಸವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಮತ್ತು ನಿಂಬೆ ಹಣ್ಣಿನ ರಸ ಸೇರಿಸಿ ಜೊತೆಗೆ ಅರಿಶಿನ ಹಾಕಿ ಚೆನ್ನಾಗಿ ತಿರುವಿ.
ಹಾಗಲಕಾಯಿ ಕಹಿಯನ್ನು ಹೋಗಲಾಡಿಸಲು ಬೇಕಾದರೆ ನೀವು ಸ್ವಲ್ಪ ಕಪ್ಪು ಕಾಳುಮೆಣಸು ಮತ್ತು ಶುಂಠಿಯನ್ನು ಸೇರಿಸಿ.
Bitter Gourd Is Better For Diabetics And Help To Loss Weight Naturally.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am