ಬ್ರೇಕಿಂಗ್ ನ್ಯೂಸ್
28-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ಕೆಲವರಿಗೆ ಪ್ರತಿದಿನ ಆಯಾಸ, ದೌರ್ಬಲ್ಯ ಅಥವಾ ತಲೆನೋವಿನಂತಹ ಸಮಸ್ಯೆಗಳು ಕಾಡುತ್ತವೆ. ಈ ಸಮಸ್ಯೆಗಳಿದ್ದರೆ ನಿಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಕೊರತೆಯಿದೆ ಎಂದು ಅರ್ಥ. ಹಿಮೋಗ್ಲೋಬಿನ್ ಎಂದರೆ ಇದು ಕೆಂಪು ರಕ್ತ ಕಣಗಳಲ್ಲಿ ಕಂಡುಬರುವ ಪ್ರೋಟೀನ್ ಆಗಿದೆ. ರಕ್ತ ಕಣಗಳ ಕಾರ್ಯವು ದೇಹದಾದ್ಯಂತ ಆಮ್ಲಜನಕವನ್ನು ಸಾಗಿಸುವುದು.
ಪ್ರತಿಯೊಬ್ಬರಲ್ಲೂ ನಿಯಮಿತ ಪ್ರಮಾಣದಲ್ಲಿ ಹಿಮೋಗ್ಲೋಬಿನ್ ಇರುವುದು ಬಹಳ ಅವಶ್ಯಕ. ಕೆಲವೊಮ್ಮೆ ಹೀಮೋಗ್ಲೋಬಿನ್ನ ಮಟ್ಟವನ್ನು ಹೆಚ್ಚಿಸಲು ಕಬ್ಬಿಣಾಂಶದಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸಲು ಸೂಚಿಸಲಾಗುತ್ತದೆ.
ಹಿಮೋಗ್ಲೋಬಿನ್ ಕಡಿಮೆಯಾದಾಗ ಏನಾಗುತ್ತದೆ?
ಕಡಿಮೆ ಮಟ್ಟದ ಹಿಮೋಗ್ಲೋಬಿನ್ ದೇಹದ ಕಾರ್ಯನಿರ್ವಹಣೆಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಇದರ ಕಡಿಮೆ ಮಟ್ಟವು ನೀವು ರಕ್ತಹೀನತೆಯಿಂದ ಬಳಲುತ್ತಿರುವಿರಿ ಅಥವಾ ಯಾವುದೇ ಯಕೃತ್ತು ಅಥವಾ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವಿರಿ ಎಂದು ಸೂಚಿಸುತ್ತದೆ.
ಹಿಮೋಗ್ಲೋಬಿನ್ ಕೊರತೆಯಿಂದಾಗಿ ನೀವು ಆಯಾಸ-ದೌರ್ಬಲ್ಯ, ಕಾಮಾಲೆ ಅಥವಾ ಆಗಾಗ್ಗೆ ತಲೆನೋವು ಮುಂತಾದ ಲಕ್ಷಣಗಳನ್ನು ಅನುಭವಿಸಬಹುದು.
ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುವುದು ಹೇಗೆ ?
ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು, ನೀವು ಕಬ್ಬಿಣದಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆಗೆ ಕಬ್ಬಿಣವು ಕೆಂಪು ರಕ್ತ ಕಣಗಳನ್ನು ತಯಾರಿಸಲು ಸಹಾಯ ಮಾಡುತ್ತದೆ.
ಹಿಮೋಗ್ಲೋಬಿನ್ನ ಸಾಮಾನ್ಯ ವ್ಯಾಪ್ತಿಯು ಪುರುಷರಿಗೆ ಪ್ರತಿ ಡೆಸಿಲಿಟರ್ಗೆ 13.2 ರಿಂದ 16.6 ಗ್ರಾಂ ಮತ್ತು ಮಹಿಳೆಯರಿಗೆ 11.6 ರಿಂದ 15 ಗ್ರಾಂ ಇರಬೇಕು.
ಕಡಿಮೆ ಹಿಮೋಗ್ಲೋಬಿನ್ ಕಾರಣಗಳು ಮತ್ತು ಲಕ್ಷಣಗಳು ಯಾವುವು?
ಕಡಿಮೆ ಹಿಮೋಗ್ಲೋಬಿನ್ಗೆ ಹಲವು ಕಾರಣಗಳಿವೆ. ಮುಖ್ಯವಾಗಿ ಆಹಾರದಲ್ಲಿ ಕಬ್ಬಿಣ ಮತ್ತು ವಿಟಮಿನ್ ಬಿ-12 ಕೊರತೆ, ರಕ್ತದ ಕ್ಯಾನ್ಸರ್, ಮೂತ್ರಪಿಂಡ ಅಥವಾ ಯಕೃತ್ತಿನ ಕಾಯಿಲೆ, ಥೈರಾಯ್ಡ್, ಥಲಸ್ಸೆಮಿಯಾ ಮತ್ತು ಯಾವುದೇ ಶ್ವಾಸಕೋಶದ ಕಾಯಿಲೆಗಳು. ಇದು ಸಂಭವಿಸಿದಾಗ, ನೀವು ಈ ಕೆಳಗಿನ ರೋಗಲಕ್ಷಣಗಳನ್ನು ಅನುಭವಿಸಬಹುದು.
ಚರ್ಮದ ಹಳದಿ ಮತ್ತು ವಸಡುಗಳಲ್ಲಿ ರಕ್ತಸ್ರಾವ
ಯಾವಾಗಲೂ ದಣಿದ ಅನುಭವ ಮತ್ತು ದುರ್ಬಲ ಭಾವನೆ
ಸ್ನಾಯು ದೌರ್ಬಲ್ಯ
ಆಯಾಸದೊಂದಿಗೆ ನಿರಂತರ ತಲೆನೋವು
ಉಸಿರಾಟದ ತೊಂದರೆ
ವಿಟಮಿನ್-ಸಿ ಸಮೃದ್ಧವಾಗಿರುವ ಆಹಾರಗಳು
ದೇಹವು ಕಬ್ಬಿಣವನ್ನು ಸಂಪೂರ್ಣವಾಗಿ ಹೀರಿಕೊಳ್ಳುವುದಿಲ್ಲ, ಅದಕ್ಕಾಗಿಯೇ ನೀವು ಅದನ್ನು ಹೀರಿಕೊಳ್ಳಲು ವಿಟಮಿನ್ ಸಿ ಅಗತ್ಯವಿದೆ. ನಿಮ್ಮ ಆಹಾರದಲ್ಲಿ ಕಿತ್ತಳೆ, ನಿಂಬೆಹಣ್ಣು, ಕ್ಯಾಪ್ಸಿಕಂ, ಟೊಮ್ಯಾಟೊ, ದ್ರಾಕ್ಷಿ, ಹಣ್ಣುಗಳು ಮುಂತಾದ ವಿಟಮಿನ್-ಸಿ ಸಮೃದ್ಧವಾಗಿರುವ ವಸ್ತುಗಳನ್ನು ನೀವು ಸೇರಿಸಿಕೊಳ್ಳಬೇಕು.
ಬೀಟ್ರೂಟ್
ಬೀಟ್ರೂಟ್ ಕಬ್ಬಿಣ, ಮೆಗ್ನೀಸಿಯಮ್, ತಾಮ್ರ, ರಂಜಕ ಮತ್ತು ವಿಟಮಿನ್ ಬಿ 1, ಬಿ 2, ಬಿ 6, ಬಿ 12 ಮತ್ತು ಸಿ ಯಲ್ಲಿ ಸಮೃದ್ಧವಾಗಿದೆ. ಬೀಟ್ರೂಟ್ ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೀವು ಇದನ್ನು ಸಲಾಡ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು.
ದಾಳಿಂಬೆ
ದಾಳಿಂಬೆ ಪ್ರೋಟೀನ್, ಕಾರ್ಬೋಹೈಡ್ರೇಟ್ ಮತ್ತು ಫೈಬರ್ ಜೊತೆಗೆ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅತ್ಯುತ್ತಮ ಮೂಲವಾಗಿದೆ. ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುವುದರ ಜೊತೆಗೆ, ಇದರಲ್ಲಿ ಕಂಡುಬರುವ ಪೋಷಕಾಂಶಗಳು ಆರೋಗ್ಯವನ್ನು ಕಾಪಾಡುತ್ತವೆ. ಕಬ್ಬಿಣ ಮತ್ತು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ದಾಳಿಂಬೆ ರಸವನ್ನು ಪ್ರತಿದಿನ ಕುಡಿಯಿರಿ.
ನುಗ್ಗೆ ಸೊಪ್ಪು
ನುಗ್ಗೆ ಸೊಪ್ಪು , ಸತು, ಕಬ್ಬಿಣ, ತಾಮ್ರ, ಮೆಗ್ನೀಸಿಯಮ್, ವಿಟಮಿನ್ ಎ, ಬಿ ಮತ್ತು ಸಿ ನಂತಹ ಖನಿಜಗಳಿಂದ ತುಂಬಿವೆ. ಕಬ್ಬಿಣ, ಹಿಮೋಗ್ಲೋಬಿನ್ ಮತ್ತು ಕೆಂಪು ರಕ್ತ ಕಣಗಳಿಗೆ ಈ ಎಲ್ಲಾ ಅಂಶಗಳು ಅವಶ್ಯಕ.
ಈ ಎಲೆಗಳನ್ನು ಬೆಲ್ಲದೊಂದಿಗೆ ಸೇವಿಸುವುದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು. ಇದಲ್ಲದೆ, ವೈದ್ಯರ ಸಲಹೆಯ ಮೇರೆಗೆ ನೀವು ಅದರ ರಸವನ್ನು ಕುಡಿಯಬಹುದು ಅಥವಾ ಪಲ್ಯದ ರೂಪದಲ್ಲಿ ಸೇವಿಸಬಹುದು.
ಹಸಿರು ಎಲೆಗಳ ತರಕಾರಿಗಳು
ಹಸಿರು ತರಕಾರಿಗಳಾದ ಪಾಲಕ್, ಸಾಸಿವೆ ಸೊಪ್ಪು, ಸೆಲರಿ ಮತ್ತು ಬ್ರೊಕೊಲಿಗಳು ಕಬ್ಬಿಣದ ಉತ್ತಮ ಮೂಲಗಳಾಗಿವೆ. ಹಸಿ ಎಲೆಗಳಲ್ಲಿ ಆಕ್ಸಾಲಿಕ್ ಆಮ್ಲವಿರುವುದರಿಂದ ಪಾಲಕ್ ಸೊಪ್ಪನ್ನು ಬೇಯಿಸಿ ತಿನ್ನಲು ಸೂಚಿಸಲಾಗುತ್ತದೆ.
ಇದು ದೇಹದಲ್ಲಿ ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ತಡೆಯುತ್ತದೆ. ವಿಟಮಿನ್ ಬಿ 12, ಫೋಲಿಕ್ ಆಮ್ಲ ಮತ್ತು ಇತರ ಪೋಷಕಾಂಶಗಳು ಹಿಮೋಗ್ಲೋಬಿನ್ ಅನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ.
ಖರ್ಜೂರ ಮತ್ತು ಕುಂಬಳಕಾಯಿ ಬೀಜಗಳು
ಖರ್ಜೂರವು ಕಬ್ಬಿಣದ ಉತ್ತಮ ಮೂಲವಾಗಿದೆ, ಇದು ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹ ರೋಗಿಗಳು ಹೆಚ್ಚು ಖರ್ಜೂರವನ್ನು ತಿನ್ನುವುದನ್ನು ತಪ್ಪಿಸಬೇಕು. ಕುಂಬಳಕಾಯಿ ಬೀಜಗಳು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದ ಉತ್ತಮ ಮೂಲವಾಗಿದೆ.
ಬ್ರೊಕೊಲಿ
ಎಲೆಕೋಸು ಕುಟುಂಬಕ್ಕೆ ಸೇರಿರುವ ಈ ತರಕಾರಿ ಕಬ್ಬಿಣ ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್ ಫೋಲಿಕ್ ಆಮ್ಲದ ಉತ್ತಮ ಮೂಲವಾಗಿದೆ ಮತ್ತು ಮೆಗ್ನೀಸಿಯಮ್, ವಿಟಮಿನ್ ಎ ಮತ್ತು ಸಿ ನಂತಹ ಇತರ ಅಗತ್ಯ ಪೋಷಕಾಂಶಗಳನ್ನು ಸಹ ಒಳಗೊಂಡಿದೆ. ಕಬ್ಬಿಣ ಮತ್ತು ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸಲು, ನೀವು ಅದನ್ನು ಕುದಿಸಿ ಅಥವಾ ಸಲಾಡ್ ರೂಪದಲ್ಲಿ ತಿನ್ನಬಹುದು.
you must eat these foods to increase hemoglobin.
04-05-24 10:13 pm
HK News Desk
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
Covishield vaccine, Dinesh Gundurao: ಕೋವಿಶೀಲ್...
04-05-24 04:04 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 01:26 pm
Mangalore Correspondent
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm