ಬ್ರೇಕಿಂಗ್ ನ್ಯೂಸ್
15-08-20 03:45 pm Headline Karnataka News Network ಡಾಕ್ಟರ್ಸ್ ನೋಟ್
ನಿದ್ರಾಹೀನತೆ ಮತ್ತು ಪದೇ ಪದೇ ನಿದ್ರೆಯಿಂದ ಎಚ್ಚರವಾಗುವಂತಹ ಸಮಸ್ಯೆಯು ಜನರನ್ನು ಕಾಡುತ್ತಲಿರುವುದು. ನಿದ್ರಾಹೀನತೆ ಎಂದರೆ ರಾತ್ರಿಯಿಡಿ ಸರಿಯಾಗಿ ನಿದ್ರೆ ಬರದೇ ಇರುವುದು ಮತ್ತು ನಿದ್ರೆಯಲ್ಲಿ ಮಧ್ಯೆ ಮಧ್ಯೆ ಎಚ್ಚರವಾದರೆ ಅದಕ್ಕೆ ಕೂಡ ಕಾರಣಗಳು ಇರುವುದು.
ರಾತ್ರಿ ಮೂರು ಗಂಟೆಗೆ ನಿಮಗೆ ಹಠಾತ್ ಆಗಿ ಎಚ್ಚರವಾದರೆ ಆಗ ಇದಕ್ಕೆ ಕಾರಣವೇನು ಎಂದು ನೀವು ಭಾವಿಸುತ್ತಿರಬಹುದು. ಮಾನಸಿಕವಾಗಿಯೂ ಇದಕ್ಕೆ ಉತ್ತರವನ್ನು ಹುಡುಕಲು ಜನರು ಪ್ರಯತ್ನಿಸುತ್ತಿರಬಹುದು.
ರಾತ್ರಿ ಮೂರು ಗಂಟೆಗೆ ಪ್ರತಿನಿತ್ಯವೂ ಎಚ್ಚರವಾದರೆ ಅದು ತುಂಬಾ ಕೆಟ್ಟದು ಎಂದು ಹೆಚ್ಚಿನವರು ಭಾವಿಸುವರು. ಯಾಕೆಂದರೆ ಈ ಸಮಯದಲ್ಲಿ ಭೂತಗಳ ಬಾಧೆಯು ಹೆಚ್ಚಾಗಿರುವುದು. ಇದಕ್ಕೆ ಸ್ಪಷ್ಟವಾದ ಕಾರಣಗಳು ತಿಳಿದಲ್ಲವಾದರೂ ಜನರಲ್ಲಿ ನಿದ್ರೆ ಮತ್ತು ನಿದ್ರಾಹೀನತೆಗೆ ವಿವಿಧ ಹವ್ಯಾಸಗಳು ಇವೆ.
ಕೆಲವು ಜನರು ರಾತ್ರಿ ಬೇಗ ಮಲಗುವುದನ್ನು ಅಭ್ಯಾಸ ಮಾಡಿಕೊಂಡಿರುವರು ಮತ್ತು ಇನ್ನು ಕೆಲವು ಜನರು ತಡರಾತ್ರಿ ತನಕ ನಿದ್ರೆ ಮಾಡುವುದೇ ಇಲ್ಲ. ಇದರ ಹೊರತಾಗಿ ಕೆಲವು ಜನರಿಗೆ ರಾತ್ರಿ ವೇಳ ಹಠಾತ್ ಆಗಿ ಎಚ್ಚರವಾಗುವುದು.
ಮುಂಜಾನೆ 3 ಗಂಟೆಯಿಂದ 5 ಗಂಟೆ ತನಕ ಕೆಲವರಿಗೆ ನಿದ್ರೆಯಿಂದ ಎಚ್ಚರವಾಗುವುದು. ಕೆಲವರಿಗೆ ಇದು ತುಂಬಾ ವಿಚಿತ್ರವೆಂದು ಅನಿಸಿದರೂ ಅವರಿಗೆ ಪ್ರತಿನಿತ್ಯವೂ ಎಚ್ಚರವಾಗುವುದು. ಇದಕ್ಕೆ ಯಾವುದೇ ಅಲರಾಂ ಕೂಡ ಬೇಕಾಗಿಲ್ಲ. ನಿದ್ರಾಹೀನತೆಯ ಸಮಸ್ಯೆಯಾಗಿರುವ ಈ ಬಗ್ಗೆ ಗಮನಹರಿಸಬೇಕಾಗಿದೆ.
ರಾತ್ರಿ 9ರಿಂದ 11ರ ತನಕ ನಿದ್ರೆ ಬರದೇ ಇರುವುದು
ರಾತ್ರಿ ನೀವು 9 ಗಂಟೆಗೆ ಮಲಗಿ ನಿದ್ರೆ ಬರಬೇಕೆಂದು ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಬರುತ್ತಿಲ್ಲವೇ? ಹಾಗಾದರೆ ನೀವು ಯಾವುದೇ ವಿಚಾರವಾಗಿ ಅತಿಯಾಗಿ ಚಿಂತಿಸುತ್ತಿದ್ದೀರಿ ಅಥವಾ ಯಾವುದೋ ವಿಷಯದ ಬಗ್ಗೆ ಚಿಂತೆಗೆ ಒಳಗಾಗಿದ್ದೀರಿ ಎಂದು ಹೇಳಬಹುದು.
ಇಂತಹ ಸಮಸ್ಯೆಯು ನಿಮಗೆ ಕಾಡುತ್ತಲಿದ್ದರೆ ಆಗ ನಿಮಗೆ ಆಧ್ಯಾತ್ಮಿಕ ಆಲೋಚನೆ ಬೇಕಾಗಿದೆ. ಹೀಗೆ ಆಗುತ್ತಲಿದ್ದರೆ ಆಗ ನೀವು ಧ್ಯಾನ ಮತ್ತು ಧನಾತ್ಮಕವಾದ ಮಂತ್ರಗಳನ್ನು ಪಠಿಸಬೇಕು. ಇದರಿಂದ ಒತ್ತಡವು ಕಡಿಮೆ ಆಗುವುದು ಮತ್ತು ಒಳ್ಳೆಯ ನಿದ್ರೆ ಬರುವುದು.
ರಾತ್ರಿ 11 ರಿಂದ 1 ಗಂಟೆ ತನಕ ನಿದ್ರಾಹೀನತೆ
ರಾತ್ರಿ 11 ಗಂಟೆಯಿಂದ 1 ಗಂಟೆ ತನಕ ನೀವು ಹಠಾತ್ ಆಗಿ ಎಚ್ಚರವಾದರೆ ಆಗ ನೀವು ಯಾವುದೋ ರೀತಿಯ ಭಾವನಾತ್ಮಕವಾದ ವಿಷಯದ ಕುರಿತು ಚಿಂತೆ ಮಾಡುತ್ತಲಿದ್ದೀರಿ ಎಂದು ಹೇಳಬಹುದು.
ಇದರ ಹೊರತಾಗಿ ನಿಮ್ಮ ಮನಸ್ಸು ಚಂಚಲವಾಗಿದ್ದರೆ ಆಗ ಇದು ಪಿತ್ತಕೋಶದ ಸಮಸ್ಯೆಗೆ ಕಾರಣವಾಗಬಹುದು. ಇಂತಹ ಸಮಸ್ಯೆಯು ಇದ್ದರೆ ಆಗ ನೀವು ಧನಾತ್ಮಕವಾಗಿ ಆಲೋಚನೆ ಮಾಡಬೇಕು ಮತ್ತು ಒಳ್ಳೆಯ ಆಲೋಚನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ರಾತ್ರಿ 1ರಿಂದ 3 ಗಂಟೆ ತನಕ ನಿದ್ರಾಹೀನತೆ
ಮುಂಜಾನೆ 3 ಗಂಟೆಯಿಂದ 5 ಗಂಟೆ ತನಕ ಎಚ್ಚರವಾದರೆ.
ನಿಮಗೆ ಮುಂಜಾನೆ 3 ಗಂಟೆಯಿಂದ 5 ಗಂಟೆ ತನಕ ಎಚ್ಚರವಾದರೆ ಆಗ ನೀವು ಆಧ್ಯಾತ್ಮಿಕ ಶಕ್ತಿಗೆ ಸಂಪರ್ಕದಲ್ಲಿದ್ದೀರಿ ಎಂದು ಹೇಳಬಹುದು.
ನಿಮ್ಮ ಆತ್ಮವು ದೈವಿ ಶಕ್ತಿ ಪಡೆಯುವುದು ಮತ್ತು ನಿಮ್ಮಲ್ಲಿ ಕೆಲವು ಅಸಾಮಾನ್ಯ ಬದಲಾವಣೆಗಳು ಆಗುವುದು. ಈ ಸಮಯದಲ್ಲಿ ನಿದ್ರೆಯಿಂದ ಎಚ್ಚರವಾದರೆ ಆಗ ಕುಂಡಲಿನಿ ಚಕ್ರವು ಜಾಗ್ರತವಾಗುತ್ತದೆ ಎಂದು ಕೆಲವರು ಹೇಳುವರು.
ಮುಂಜಾನೆ 5 ರಿಂದ 7ರ ಮಧ್ಯೆ ನಿಮಗೆ ಎಚ್ಚರವಾದರೆ
ನಿಮಗೆ ಮುಂಜಾನೆ 5ರಿಂದ 7 ಗಂಟೆ ಮಧ್ಯೆ ನಿದ್ರೆಯಿಂದ ಎಚ್ಚರವಾದರೆ ಆಗ ನಿಮ್ಮನ್ನು ಭಾವನಾತ್ಮಕವಾಗಿ ಏನೋ ತಡೆಯುತ್ತಲಿದೆ ಎಂದು ಹೇಳಬಹುದು.
ನಿಮ್ಮ ದೇಹದಲ್ಲಿನ ಶಕ್ತಿಯ ಹರಿವಿಗೆ ಇದು ಪರಿಣಾಮ ಬೀರಬಹುದು ಮತ್ತು ಸರಿಯಾಗಿ ನಿದ್ರೆ ಮಾಡಲು ತೊಂದರೆ ಆಗಬಹುದು. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ದೇಹದ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ನೀವು ಅರಿಯಬೇಕು. ಇದಕ್ಕಾಗಿ ನೀವು ಧ್ಯಾನ ಮಾಡುತ್ತಲಿರಬೇಕು.
20-03-26 10:03 am
HK News Staffer
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm