ಬ್ರೇಕಿಂಗ್ ನ್ಯೂಸ್
06-03-21 12:26 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾ ಎಂಬ ಮಹಾಮಾರಿಯನ್ನು ಮುಗಿಸಲು ಭಾರತ ಹಂತ-ಹಂತವಾವಾಗಿ ಸಜ್ಜಾಗುತ್ತಿದೆ. ನಮ್ಮಲ್ಲೇ ತಯಾರಾದ ಕೊರೊನಾ ಲಸಿಕೆ ಕೊರೊನಾ ತಡೆಗಟ್ಟಲು ಸಮರ್ಥವಾಗಿದೆ ಎಂದು ಸಂಶೋಧನೆಗಳಿಂದ ದೃಢಪಟ್ಟಿದ್ದು ಮೊದಲ ಹಂತದಲ್ಲಿ ಎಲ್ಲಾ ಕೊರೊನಾ ವಾರಿಯರ್ಸ್ಗೆ ಈ ಔಷಧಿ ನೀಡಲಾಯಿತು.
ಇದೀಗ ಎರಡನೇ ಹಂತದಲ್ಲಿ ಹಿರಿಯ ನಾಗರಿಕರಿಗೆ ನೀಡಲು ಮುಂದಾಗಿದೆ. ಇನ್ನೇನು ಕೆಲವೇ ತಿಂಗಳಿನಲ್ಲಿ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ ಲಭಿಸಲಿದೆ. ಕೊರೊನಾ ಲಸಿಕೆ ನೀಡಲು ಪ್ರಾರಂಭಿಸಿ ತಿಂಗಳು ಕಳೆದರೂ ಜನರಿಗೆ ಇದರ ಕುರಿತು ಇನ್ನೂ ಅನೇಕ ಪ್ರಶ್ನೆಗಳಿವೆ.
ಕೊರೊನಾ ಲಸಿಕೆ ತೆಗೆದುಕೊಳ್ಳುವವರು ಅನುಸರಿಸಬೇಕಾದ ಅನುಸರಿಸಬೇಕಾದ ಅಗ್ಯತ ಮಾರ್ಗಸೂಚಿಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ:
ಭಾರತದಲ್ಲಿ ಲಭ್ಯವಿರುವ ಎರಡೂ ಲಸಿಕೆಗಳು ಸುರಕ್ಷಿತ
ಭಾರತದಲ್ಲಿ ಕೊವಾಕ್ಸಿನ್ ಹಾಗೂ ಕೋವಿಡ್ ಶೀಲ್ಡ್ ಎಂಬ ಎರಡು ಲಸಿಕೆಗಳನ್ನು ನೀಡುತ್ತಿದ್ದು ಈ ಎರಡೂ ಲಸಿಕೆಗಳು ಸುರಕ್ಷಿತವಾಗಿದೆ ಎಂಬುವುದು ಸಂಶೋಧನೆಯಿಂದ ದೃಢಪಟ್ಟಿರುವ ಅಂಶವಾಗಿದೆ. ಪುನೆಯ ಸೆರಂ ಇನ್ಸಿಟ್ಯೂಟ್ ಆಫ್ ಇಂಡಿಯಾ ಕೋವಿಡ್ ಶೀಲ್ಡ್ ತಯಾರಿಸಿದೆ.
ಭಾರತ್ ಬಯೋಟೆಕ್ ಸಂಸ್ಥೆಯು ಕೊವಾಕ್ಸಿನ್ ಲಸಿಕೆಯನ್ನು ಸಿದ್ಧ ಪಡಿಸಿದೆ. ಈ ಲಸಿಕೆಗಳಲ್ಲಿ ಯಾವುದಾದರು ಒಂದು ಬಗೆಯ ಲಸಿಕೆಯನ್ನು ಎರಡು ಡೋಸ್ನಲ್ಲಿ ಅಂದ್ರೆ ಒಮ್ಮೆ ಪಡೆದ ಬಳಿಕ 14 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕು.
ಕೊರೊನಾ ಲಸಿಕೆ ಪಡೆಯುವ ಮುಂಚೆ ಏನು ಮಾಡಬೇಕೆಂದು ನೀಡಿರುವ ಮಾರ್ಗಸೂಚಿ
* ಮೆಡಿಸಿನ್ ಅಥವಾ ಡ್ರಗ್(ಔಷಧ) ಅಲರ್ಜಿ ಇದ್ದವರು ತಜ್ಞರಿಂದ ಕ್ಲಿಯರೆನ್ಸ್ ಪಡೆಯಬೇಕು. ವೈದ್ಯರು ನಿಮಗೆ ಸಿಆರ್ಪಿ (ರಿಯಾಕ್ಟಿವ್ ಪ್ರೊಟಿನ್), ಸಿಬಿಸಿ (ಕಂಪ್ಲೀಟ್ ಬ್ಲಡ್ ಕೌಂಟ್) ಅಥವಾ ಇಮ್ಯುನೋಗ್ಲೋಬುಲಿನ್ ಪರೀಕ್ಷೆ ಮಾಡಿಸುವಂತೆ ಸೂಚಿಸುತ್ತಾರೆ.
* ಒಂದು ವೇಳೆ ವೈದ್ಯರು ಲಸಿಕೆ ಮುಂಚೆ ತೆಗೆದುಕೊಳ್ಳುವ ಔಷಧ ಹಾಗೂ ಆಹಾರದ ಬಗ್ಗೆ ಏನಾದರೂ ಸೂಚಿಸಿದ್ದರೆ ಅದನ್ನು ಪಾಲಿಸಬೇಕು.
* ಈ ಲಸಿಕೆ ಪಡೆಯಲು ಬರುವಾಗ ಯಾವುದೇ ಆತಂಕ ಬೇಡ, ರಿಲ್ಯಾಕ್ಸ್ ಆಗಿರಿ ಎಂದು ವೈದ್ಯರು ಹೇಳುತ್ತಾರೆ.
* ಯಾರಿಗೆ ಮಧುಮೇಹ, ರಕ್ತದೊತ್ತಡ ಇದ್ದವರನ್ನು ಗಮನಿಸುತ್ತಾ ಇರಬೇಕು. ಕ್ಯಾನ್ಸರ್ಗೆ ಕೀಮೋ ಪಡೆದುಕೊಂಡವರನ್ನೂ ಕೂಡ ಲಸಿಕೆ ಬಳಿಕ ಗಮನಿಸಬೇಕು.
* ಅಲ್ಲದೆ ಬ್ಲಡ್ ಪ್ಲಾಸ್ಮಾ ಪಡೆದುಕೊಂಡಿದ್ದರೆ ಅಥವಾ ಮೋನೋಕ್ಲೋನಲ್ ಆ್ಯಂಟಿಬಾಡೀಸ್ ತೆಗೆದುಕೊಂಡಿದ್ದರೆ ಅಥವಾ ಒಂದೂವರೆ ತಿಂಗಳಿನ ಒಳಗೆ ಯಾವುದಾದರೂ ಸೋಂಕು ತಗುಲಿದ್ದರೆ ಅಂಥವರು ಈಗಲೇ ಲಸಿಕೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.
ಲಸಿಕೆ ಪಡೆದ ಬಳಿಕ ಏನು ಮಾಡಬೇಕು?
* ಲಸಿಕೆ ಪಡೆದ ತಕ್ಷಣ ಹೋಗುವಂತಿಲ್ಲ, ಸ್ವಲ್ಪ ಹೊತ್ತು ಆಸ್ಪತ್ರೆಯಲ್ಲೇ ರೆಸ್ಟ್ ಮಾಡಿ ಹೋಗಬೇಕು.
ಹೀಗೆ ಮಾಡುವುದರಿಂದ ಒಂದು ವೇಳೆ ಲಸಿಕೆ ಪಪಡೆದ ತಕ್ಷಣವೇ ಏನಾದರೂ ಅಲರ್ಜಿ ಲಕ್ಷಣ ಕಂಡು ಬಂದರೆ ತಕ್ಷಣವೇ ಚಿಕಿತ್ಸೆ ನೀಡಬಹುದು. ಲಸಿಕೆ ಪಡೆದ ಬಳಿಕ ಏನಾದರೂ ಅಲರ್ಜಿ ಕಾಣಿಸಿದರೆ ಕೂಡಲೇ ಲಸಿಕೆ ಪಡೆದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ.
* ಕೆಲವರಿಗೆ ಲಸಿಕೆ ಪಡೆದ ಬಳಿಕ ಜ್ವರ, ಚುಚ್ಚಿದ ಭಾಗದಲ್ಲಿ ನೋವು ಮುಂತಾದ ಲಕ್ಷಣಗಳು ಕಂಡು ಬರಬಹುದು. ಹೀಗೆ ಕಂಡು ಬಂದರೆ ಹೆದರುವ ಅವಶ್ಯಕತೆ ಇಲ್ಲ.
* ತಲೆಸುತ್ತು, ಚಳಿಯಾಗುವುದು ಈ ರೀತಿಯೆಲ್ಲಾ ಕಂಡು ಬಂದರೆ ಒಂದೆರಡು ದಿನದಲ್ಲಿ ಸರಿ ಹೋಗುವುದು, ಆದ್ದರಿಂದ ಆತಂಕ ಬೇಡ.
This News Article Is A Copy Of BOLDSKY
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 12:51 pm
Mangalore Correspondent
Mangalore Muslim Leaders, Dinesh Gundurao: ಕೋ...
01-06-25 12:32 pm
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm