ಬ್ರೇಕಿಂಗ್ ನ್ಯೂಸ್
16-04-21 07:24 pm source: BOLDSKY ಡಾಕ್ಟರ್ಸ್ ನೋಟ್
ಕೆಲವು ಜನರ ದೇಹವು ಕೊಬ್ಬನ್ನು ಹೊಂದಿರದಿದ್ದರೂ, ಹೊಟ್ಟೆಯ ಭಾಗವು ಉಬ್ಬಿರುವುದನ್ನು ನೀವು ಗಮನಿಸಿರಬೇಕು. ಅಂದರೆ ಹೊಟ್ಟೆಯ ಕೆಳಭಾಗವು ಅವರ ದೇಹದ ಉಳಿದ ಭಾಗಗಳಿಗೆ ಹೋಲಿಸಿದರೆ ಹೊರಕ್ಕೆ ಬರುತ್ತದೆ. ವಾಸ್ತವವಾಗಿ, ಇಂದಿನ ಕಾಲದಲ್ಲಿ, ಹೆಚ್ಚಿನ ಜನರು ಇಂತಹ ಸಮಸ್ಯೆಗೆ ಬಲಿಯಾಗುತ್ತಾರೆ. ಈ ಸಂದರ್ಭದಲ್ಲಿ, ಸಮಸ್ಯೆಯನ್ನು ಪರಿಹರಿಸುವ ಮೊದಲು, ಇದು ಯಾವ ಕಾರಣಗಳಿಗಾಗಿ ಸಂಭವಿಸುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಇದರ ನಂತರ ನೀವು ನಿಮ್ಮ ದಿನಚರಿಯನ್ನು ಬದಲಾಯಿಸಬಹುದು ಮತ್ತು ನಿಮ್ಮನ್ನು ಸದೃಢವಾಗಿರಿಸಿಕೊಳ್ಳಬಹುದು.
ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುವ ಸಲಹೆಗಳನ್ನು ಈ ಕೆಳಗೆ ನೀಡಲಾಗಿದೆ:

ಸರಿಯಾದ ನಿದ್ರೆ:
ನೀವು ಮಲಗುವ ಹಾಗೂ ಏಳುವ ಸಮಯಗಳು ಅನಿಯಮಿತವಾಗಿದ್ದರೆ ಅದರ ಬಗ್ಗೆ ಸ್ವಲ್ಪ ಗಮನ ಹರಿಸಬೇಕು. ನಿದ್ರೆ ಬರದ ಕಾರಣ ನಿಮ್ಮ ದೇಹ ಮತ್ತು ಮನಸ್ಸಿನ ಮೇಲೆ ಅದರ ಪರಿಣಾಮವಾಗುತ್ತದೆ. ನಿಮ್ಮ ದಿನಚರಿ ಹದಗೆಡುತ್ತದೆ ಮತ್ತು ನೀವು ಏನನ್ನಾದರೂ ತರಾತುರಿಯಲ್ಲಿ ತಿನ್ನುತ್ತೀರಿ, ಇದರಿಂದಾಗಿ ನಿಮ್ಮ ಹೊಟ್ಟೆಯ ಕೊಬ್ಬು ಉಂಟಾಗುತ್ತದೆ.

ಎಣ್ಣೆ, ಹಿಟ್ಟು ಮತ್ತು ಸಕ್ಕರೆಯನ್ನು ಸೇವಿಸಬೇಡಿ:
ನಿಮ್ಮ ಆಹಾರದಲ್ಲಿ ಎಣ್ಣೆ, ಹಿಟ್ಟು ಮತ್ತು ಸಕ್ಕರೆ ಸೇವನೆಯನ್ನು ಕಡಿಮೆ ಮಾಡಬೇಕು. ವಿಶೇಷವಾಗಿ ರಾತ್ರಿಯ ಸಮಯದಲ್ಲಿ, ನಿಮ್ಮ ದೇಹ ಈ ವಸ್ತುಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲಾಗುವುದಿಲ್ಲ, ಇದರಿಂದಾಗಿ ಹೊಟ್ಟೆಯಲ್ಲಿ ಕೊಬ್ಬು ಶೇಖರಣೆಯಾಗುತ್ತದೆ.

ಏಕಕಾಲದಲ್ಲಿ ಬಹಳಷ್ಟು ಆಹಾರವನ್ನು ಸೇವಿಸಬೇಡಿ:
ಅನೇಕ ಜನರು ದಿನಕ್ಕೆ ಎರಡು ಬಾರಿ ತಿನ್ನುತ್ತಾರೆ. ಇದರಲ್ಲಿ ಅವರು ಹಸಿವುಗಿಂತ ಹೆಚ್ಚಿನ ಪ್ರಮಾಣದ ಆಹಾರವನ್ನು ತಿನ್ನುತ್ತಾರೆ ಅದು ಅವರಿಗೆ ಹಾನಿಕಾರಕವಾಗಿದೆ. ಒಂದೇ ಸಮಯದಲ್ಲಿ ಹೆಚ್ಚು ತಿನ್ನುವ ಬದಲು, ಅವುಗಳನ್ನು ಕಡಿತಗೊಳಿಸಿ, ನಡುನಡುವೆ ಏನಾದರೂ ತಿನ್ನಬಹುದು.

ದಿನವಿಡೀ ನೀರು ಕುಡಿಯಿರಿ:
ನಿಮ್ಮ ಹೊಟ್ಟೆಯ ಕೊಬ್ಬಿಗೆ ಮುಖ್ಯ ಕಾರಣ ಎಂದರೆ ನೀವು ನೀರಿನಿಂದ ದೂರವಿರುವುದು ಅಥವಾ ಹೆಚ್ಚು ನೀರು ಕುಡಿಯದೇ ಇರುವುದು. ಆದ್ದರಿಂದ ನೀವು ಹೊಟ್ಟೆಯ ಕೊಬ್ಬಿನಿಂದ ದೂರವಿರಲು ದಿನವಿಡೀ ನೀರು ಕುಡಿಯುತ್ತಿರಿ.

ಪ್ರತಿದಿನ ಸಣ್ಣ ವ್ಯಾಯಾಮ:
ಕ್ರಂಚ್ ವ್ಯಾಯಾಮವು ಹೊಟ್ಟೆಯನ್ನು ಕರಗಿಸಲು ಸಹಾಯ ಮಾಡುತ್ತದೆ. ಈ ವ್ಯಾಯಾಮದಲ್ಲಿ, ನೇರವಾಗಿ ಮಲಗಿಕೊಳ್ಳಿ ಮತ್ತು ನಂತರ ನಿಮ್ಮ ಎರಡೂ ಕೈಗಳನ್ನು ತಲೆಯ ಕೆಳಗೆ ಇರಿಸಿ, ತಲೆಯನ್ನು ಸ್ವಲ್ಪ ಮೇಲಕ್ಕೆತ್ತಿ. ನಂತರ ಎರಡೂ ಕಾಲುಗಳನ್ನು ಮೊಣಕಾಲುಗಳಿಗೆ ಬಾಗಿಸಿ ನಂತರ ನೇರಗೊಳಿಸಿ. ಈ ವ್ಯಾಯಾಮವನ್ನು ಹೆಚ್ಚಾಗಿ ಮಾಡುವುದರಿಂದ ಹೊಟ್ಟೆಯ ಕೊಬ್ಬನ್ನು ಆದಷ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ನಿಂಬೆ ಮತ್ತು ಕೊತ್ತಂಬರಿ ಸೊಪ್ಪು ಚಹಾ
ಅನೇಕ ಜನರು ಗ್ರೀನ್ ಟೀಯನ್ನು ಹೊಟ್ಟೆಯ ಕೊಬ್ಬನ್ನು ಕರಗಿಸಲು ಸೇವಿಸುತ್ತಾರೆ, ಆದರೆ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ನಿಂಬೆ ಮತ್ತು ಕೊತ್ತಂಬರಿ ಚಹಾ ಹೆಚ್ಚು ಪರಿಣಾಮಕಾರಿಯಾಗಿದೆ. ಆದ್ದರಿಂದ ಇವುಗಳನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿಕೊಳ್ಳಿ.
This News Article Is A Copy Of BOLDSKY
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm