ಬ್ರೇಕಿಂಗ್ ನ್ಯೂಸ್
06-05-21 02:03 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಪಾಸಿಟಿವ್ ಬಂದ್ರೆ ಎಲ್ಲರೂ ಆಸ್ಪತ್ರೆಗೆ ಬರಬೇಕಾಗಿಲ್ಲ, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯಿರಿ ಎಂದು ಆರೋಗ್ಯ ಇಲಾಖೆಯವರು ಹೇಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ಗಳ ಕೊರತೆ ಇರುವುದರಿಂದ ತುಂಬಾ ಗಂಭೀರವಾದ ರೋಗಿಗಳಿಗಷ್ಟೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಉಳಿದವರಿಗೆ ಔಷಧ ನೀಡಿ ಮನೆಗೆ ಕಳುಹಿಸಲಾಗುತ್ತಿದೆ.
ಆದರೆ ಈಗೀನ ಪರಿಸ್ಥಿತಿಯಿಂದಾಗಿ ಜನರಲ್ಲಿ ಒಂದು ರೀತಿಯ ಆತಂಕ ಉಂಟಾಗಿದೆ. ಕೊರೊನಾ ಸಣ್ಣ ಪುಟ್ಟ ಲಕ್ಷಣಗಳಿದ್ದರೂ ಜನರು ಆಸ್ಪತ್ರೆಗೆ ದಾಖಲಾಗಲು ಬಯಸುತ್ತಿದ್ದಾರೆ, ಆದರೆ ಈ ಆತಂಕ ಬೇಡ, ಕೋವಿಡ್ 19 ಲಕ್ಷಣಗಳು ಅಷ್ಟೇನು ಗಂಭೀರವಾಗಿಲ್ಲ ಎಂದಾದರೆ ಯಾವುದೇ ಆತಂಕ ಬೇಡ, ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯಿರಿ. ಮನೆಯಲ್ಲಿಯೇ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವವರು ಯಾವಾಗ ಮತ್ತು ಯಾವ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಗೆ ದಾಖಲಾಗಬೇಕೆಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ ನೋಡಿ:

ಹೋಂ ಐಸೋಲೇಷನ್ ಇರುವವರು ಯಾವ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಗೆ ದಾಖಲಾಗಬೇಕು?
* ಆಕ್ಸಿಜನ್ ಸ್ಯಾಚುರೇಷನ್ 93ಕ್ಕಿಂತ ಕಡಿಮೆ ಬಂದ್ರೆ
* ತುಂಬಾ ಸುಸ್ತು ಹಾಗೂ ತಲೆ ತಿರುಗುವುದು
* ಎದೆಯಲ್ಲಿ ನೋವು ಇಂಥ ಲಕ್ಷಣಗಳು ಕಂಡು ಬಂದ್ರೆ ಆಸ್ಪತ್ರೆಗೆ ದಾಖಲಾಗಬೇಕು.

ಇತರ ಆರೋಗ್ಯ ಸಮಸ್ಯೆಗಳಿದ್ದರೆ
ಒಂದು ವೇಳೆ ಮಧುಮೇಹ, ಕೊಲೆಸ್ಟ್ರಾಲ್, ಒಬೆಸಿಟಿ ಮತ್ತಿತರ ಆರೋಗ್ಯ ಸಮಸ್ಯೆಯಿದ್ದರೆ ಅವರು ತಮ್ಮ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಗೆ ಮಾಹಿತಿ ನೀಡುತ್ತಾ ಇರಬೇಕು. ಒಂದು ವೇಳೆ ಏನಾದರೂ ರೋಗ ಲಕ್ಷಣಗಳು ಅಧಿಕವಾದರೆ ಅಥವಾ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆ ಕಂಡು ಬಂದರೆ ಕೂಡಲೇ ಆಕ್ಸಿಜನ್ ವ್ಯವಸ್ಥೆ ಇರುವ ಆಸ್ಪತ್ರೆಗೆ ದಾಖಲಾಗಬೇಕು. ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ, ಇದರ ಕುರಿತು ಮಾತನಾಡಿರುವ ಏಮ್ಸ್ ನಿರ್ದೇಶಕ ಈ ಸಮಸ್ಯೆ ಬಗೆಹರಿಸಲು ಪ್ರಯತ್ನ ನಡೆಯುತ್ತಿವೆ ಎಂದಿದ್ದಾರೆ.
ಹೋಂ ಐಸೋಲೇಷನ್ನಲ್ಲಿರುವವರು ಏನನ್ನು ಗಮನಿಸಬೇಕು?
ಕೊರೊನಾ ಪಾಸಿಟಿವ್ ಬಂದು ಮನೆಯಲ್ಲಿಯೇ ಇದ್ದು ಚಿಕಿತ್ಸೆ ಇದ್ದರೆ ದೇಹದ ಉಷ್ಣತೆ, ಹಾರ್ಟ್ ರೇಟ್ ಹಾಗೂ ಆಕ್ಸಿಜನ್ ಲೆವಲ್ ಪರೀಕ್ಷಿಸುತ್ತಿರಬೇಕು. ಇದರಲ್ಲಿ ಏನಾದರೂ ವ್ಯತ್ಯಾಸ ಬಂದರೆ ಆಸ್ಪತ್ರೆಗೆ ದಾಖಲಾಗಬೇಕು.

5 ದಿನಕ್ಕಿಂತ ಅಧಿಕ ಜ್ವರವಿದ್ದರೆ ಆಸ್ಪತ್ರೆಗೆ ದಾಖಲಾಗಿ
5 ದಿನವಾದರೂ ಜ್ವರ ಕಡಿಮೆಯಾಗದಿದ್ದರೆ, ತುಂಬಾ ಕೆಮ್ಮು, ಉಸಿರಾಟಕ್ಕೆ ತೊಂದರೆ ಈ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಗೆ ದಾಖಲಾಗಿ. ಈ ಸಮಯದಲ್ಲಿ ಜಾಗ್ರತೆ ಮುಖ್ಯ, ನಿರ್ಲಕ್ಷ್ಯ ಬೇಡ. ಯಾವುದೇ ಕಾರಣಕ್ಕೆ ಆತಂಕಕ್ಕೆ ಒಳಗಾಗಬೇಡಿ. ಕೊರೊನಾ ಸೋಂಕು ಹರಡುವುದನ್ನು ತಡೆಯಲು ಮಾಸ್ಕ್ ಧರಿಸೋಣ, ಕೈಗಳನ್ನು ಆಗಾಗ ಸೋಪು ಹಚ್ಚಿ ತೊಳೆಯೋಣ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm