ಬ್ರೇಕಿಂಗ್ ನ್ಯೂಸ್
07-05-21 11:21 am Shreeraksha, BoldSky Kannada ಡಾಕ್ಟರ್ಸ್ ನೋಟ್
ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ತಾಯಿಯಾದವಳು ತನ್ನ ರಕ್ತವನ್ನೇ ಬಸಿದು ಹಾಲಾಗಿ ಮಾರ್ಪಡಿಸಿ ತನ್ನ ಮಗುವಿಗೆ ನೀಡುತ್ತಾಳೆ. ಇಂತಹ ತಾಯಿ ರೂಪದ ದೇವರಿಗೆ ಕೊರೋನಾ ಉಂಟಾದರೆ, ಆ ಎಳೆ ಕಂದಮ್ಮದ ಗತಿಯೇನು? ಹಾಲುಣಿಸುವ ತಾಯಿಗೆ ಕೊರೋನಾ ಪಾಸಿಟಿವ್ ಆದರೆ ಆಕೆ ತನ್ನ ಮಗುವಿಗೆ ಹಾಲು ನೀಡಬಹುದೇ? ಇಂತಹ ಪ್ರಶ್ನೆ ಹಲವಾರು ತಾಯಂದಿರನ್ನು ಕಾಡುತ್ತಿರಬಹುದು. ಈ ಕುರಿತು ಡಬ್ಲ್ಯೂಎಚ್ಒ ಎನು ಹೇಳುತ್ತೆ ಗೊತ್ತಾ?
ದೇಶದಲ್ಲಿ ಪ್ರತಿ 4 ಜನರಲ್ಲಿ ಒಬ್ಬರು ವೈರಸ್ಗೆ ತುತ್ತಾಗುತ್ತಿರುವುದರಿಂದ ಬಹಳಷ್ಟು ತಾಯಂದಿರು ಕೊರೋನಾ ಪಾಸಿಟಿವ್ ಪಡೆಯುತ್ತಿದ್ದಾರೆ. ಪರಿಸ್ಥಿತಿ ಇಷ್ಟು ಗಂಭೀರವಾಗಿರುವಾಗ, 14 ದಿನಗಳ ಕ್ಯಾರಂಟೈನ್ ಸಮಯದಲ್ಲಿ ತನ್ನ ಮಗುವಿಗೆ ಹಾಲುಣಿಸುವುದು ಸುರಕ್ಷಿತವೇ?
ತಾಯಿಯು ತನ್ನ ಸೋಂಕನ್ನು ಎದೆ ಹಾಲಿನ ಮೂಲಕ ಮಗುವಿಗೆ ವರ್ಗಾಯಿಸಬಹುದು ಎಂಬುದು ನಿಜವಾಗಿದ್ದರೂ ಸಹ, ವಿಶ್ವ ಆರೋಗ್ಯ ಸಂಸ್ಥೆ ಈ ಕುರಿತು ವಿಭಿನ್ನ ಅಭಿಪ್ರಾಯವನ್ನು ನೀಡುತ್ತದೆ. ಮೊದಲನೆಯದಾಗಿ, ಎದೆ ಹಾಲು SARS-CoV-2 ವೈರಸ್ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಆದ್ದರಿಂದ, ನಿಮ್ಮ ಮಗುವಿಗೆ ಆರಾಮವಾಗಿ ಹಾಲುಣಿಸಿ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಎದೆಹಾಲಿನಿಂದ ಸಿಗುವ ಪ್ರಯೋಜನಗಳು ಕೊರೋನಾದ ಅಪಾಯವನ್ನು ಕಡಿಮೆ ಮಾಡುತ್ತವೆ. ತಾಯಿಗೆ ಕೊರೋನಾ ಪಾಸಿಟಿವ್ ಆಗಿದ್ದರೂ ತಮ್ಮ ಮಗುವಿಗೆ ಹಾಲುಣಿಸಬಹುದು. ಏಕೆಂದರೆ ಎದೆ ಹಾಲು ಶಕ್ತಿಯುತವಾಗಿದ್ದು, ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.
ಹೀಗಾಗಿ, ಕೊರೋನಾದಿಂದ ಬಳಲುತ್ತಿರುವ ತಾಯಂದಿರು ತಮ್ಮ ಮಗುವಿಗೆ ಇತರ ಮಹಿಳೆಯಂತೆ ಹಾಲುಣಿಸಬೇಕು.

ಪೌಷ್ಠಿಕಾಂಶದ ಮೂಲ:
ತಾಯಿ ತನ್ನ ಮಗುವಿಗೆ ನೀಡುವ ಅತ್ಯಂತ ಪೌಷ್ಠಿಕ ಆಹಾರವೆಂದರೆ ಎದೆಹಾಲು. ನೀರಿನ ಜೊತೆಗೆ, ಇದು ಕೊಬ್ಬುಗಳು, ಕಾರ್ಬ್ಸ್, ಖನಿಜಗಳು, ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಸೋಡಿಯಂ ಮತ್ತು ವಿಟಮಿನ್ ಎ, ಸಿ ಮತ್ತು ಡಿ ಗಳನ್ನು ಹೊಂದಿದೆ. ನವಜಾತ ಶಿಶುಗಳಿಗೆ ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಎದೆ ಹಾಲು ಅತ್ಯುತ್ತಮ ಮತ್ತು ಏಕೈಕ ಪೋಷಣೆಯ ಮೂಲವಾಗಿದೆ.

ಮಾರಣಾಂತಿಕ ವೈರಲ್ ಸೋಂಕಿನಿಂದ ರಕ್ಷಿಣೆ:
ತಾಯಿಯ ಹಾಲು ಮಗುವಿಗೆ ಮುಖ್ಯವಾಗಿದೆ ಏಕೆಂದರೆ ಇದು ಎಲ್ಲಾ ಪೋಷಕಾಂಶಗಳನ್ನು ಉತ್ತಮ ಪ್ರಮಾಣದಲ್ಲಿ ಹೊಂದಿದ್ದು, ಅದು ಮಗುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಿಂದ ನಿಮ್ಮ ಮಗುವಿಗೆ ಯಾವುದೇ ಸೋಂಕು ಅಪಾಯವನ್ನುಂಟುಮಾಡುವುದಿಲ್ಲ. ತಾಯಿಯೊಬ್ಬಳು ತಮ್ಮ ಮಗುವಿಗೆ ಕನಿಷ್ಠ ಆರು ತಿಂಗಳವರೆಗೆ ಹಾಲುಣಿಸಬೇಕು ಎಂದು ವೈದ್ಯರು ಮತ್ತು ತಜ್ಞರು ಶಿಫಾರಸು ಮಾಡುತ್ತಾರೆ.

ರೋಗ ನಿರೋಧಕ ಶಕ್ತಿಯ ವೃದ್ಧಿ:
ನಿಮ್ಮ ಮಗುವಿನ ರೋಗನಿರೋಧಕ ಶಕ್ತಿಯ ವಿಚಾರಕ್ಕೆ ಬಂದಾಗ ಎದೆಹಾಲು ಅಮೃತದಂತೆ. ಇಮ್ಯುನೊಲಾಜಿಯಲ್ಲಿ ಫ್ರಾಂಟಿಯರ್ಸ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಎದೆ ಹಾಲಿನ ಸಹಜ ಪ್ರತಿರಕ್ಷಣಾ ವ್ಯವಸ್ಥೆಯು ಸೋಂಕುಗಳ ವಿರುದ್ಧದ ಹೋರಾಡುವಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹಾಲು ಕುಡಿದ ಕೆಲವೇ ನಿಮಿಷಗಳಲ್ಲಿ ಸಕ್ರಿಯಗೊಳ್ಳುತ್ತದೆ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm