ಬ್ರೇಕಿಂಗ್ ನ್ಯೂಸ್
07-05-21 11:21 am Shreeraksha, BoldSky Kannada ಡಾಕ್ಟರ್ಸ್ ನೋಟ್
ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ತಾಯಿಯಾದವಳು ತನ್ನ ರಕ್ತವನ್ನೇ ಬಸಿದು ಹಾಲಾಗಿ ಮಾರ್ಪಡಿಸಿ ತನ್ನ ಮಗುವಿಗೆ ನೀಡುತ್ತಾಳೆ. ಇಂತಹ ತಾಯಿ ರೂಪದ ದೇವರಿಗೆ ಕೊರೋನಾ ಉಂಟಾದರೆ, ಆ ಎಳೆ ಕಂದಮ್ಮದ ಗತಿಯೇನು? ಹಾಲುಣಿಸುವ ತಾಯಿಗೆ ಕೊರೋನಾ ಪಾಸಿಟಿವ್ ಆದರೆ ಆಕೆ ತನ್ನ ಮಗುವಿಗೆ ಹಾಲು ನೀಡಬಹುದೇ? ಇಂತಹ ಪ್ರಶ್ನೆ ಹಲವಾರು ತಾಯಂದಿರನ್ನು ಕಾಡುತ್ತಿರಬಹುದು. ಈ ಕುರಿತು ಡಬ್ಲ್ಯೂಎಚ್ಒ ಎನು ಹೇಳುತ್ತೆ ಗೊತ್ತಾ?
ದೇಶದಲ್ಲಿ ಪ್ರತಿ 4 ಜನರಲ್ಲಿ ಒಬ್ಬರು ವೈರಸ್ಗೆ ತುತ್ತಾಗುತ್ತಿರುವುದರಿಂದ ಬಹಳಷ್ಟು ತಾಯಂದಿರು ಕೊರೋನಾ ಪಾಸಿಟಿವ್ ಪಡೆಯುತ್ತಿದ್ದಾರೆ. ಪರಿಸ್ಥಿತಿ ಇಷ್ಟು ಗಂಭೀರವಾಗಿರುವಾಗ, 14 ದಿನಗಳ ಕ್ಯಾರಂಟೈನ್ ಸಮಯದಲ್ಲಿ ತನ್ನ ಮಗುವಿಗೆ ಹಾಲುಣಿಸುವುದು ಸುರಕ್ಷಿತವೇ?
ತಾಯಿಯು ತನ್ನ ಸೋಂಕನ್ನು ಎದೆ ಹಾಲಿನ ಮೂಲಕ ಮಗುವಿಗೆ ವರ್ಗಾಯಿಸಬಹುದು ಎಂಬುದು ನಿಜವಾಗಿದ್ದರೂ ಸಹ, ವಿಶ್ವ ಆರೋಗ್ಯ ಸಂಸ್ಥೆ ಈ ಕುರಿತು ವಿಭಿನ್ನ ಅಭಿಪ್ರಾಯವನ್ನು ನೀಡುತ್ತದೆ. ಮೊದಲನೆಯದಾಗಿ, ಎದೆ ಹಾಲು SARS-CoV-2 ವೈರಸ್ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಆದ್ದರಿಂದ, ನಿಮ್ಮ ಮಗುವಿಗೆ ಆರಾಮವಾಗಿ ಹಾಲುಣಿಸಿ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಎದೆಹಾಲಿನಿಂದ ಸಿಗುವ ಪ್ರಯೋಜನಗಳು ಕೊರೋನಾದ ಅಪಾಯವನ್ನು ಕಡಿಮೆ ಮಾಡುತ್ತವೆ. ತಾಯಿಗೆ ಕೊರೋನಾ ಪಾಸಿಟಿವ್ ಆಗಿದ್ದರೂ ತಮ್ಮ ಮಗುವಿಗೆ ಹಾಲುಣಿಸಬಹುದು. ಏಕೆಂದರೆ ಎದೆ ಹಾಲು ಶಕ್ತಿಯುತವಾಗಿದ್ದು, ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.
ಹೀಗಾಗಿ, ಕೊರೋನಾದಿಂದ ಬಳಲುತ್ತಿರುವ ತಾಯಂದಿರು ತಮ್ಮ ಮಗುವಿಗೆ ಇತರ ಮಹಿಳೆಯಂತೆ ಹಾಲುಣಿಸಬೇಕು.

ಪೌಷ್ಠಿಕಾಂಶದ ಮೂಲ:
ತಾಯಿ ತನ್ನ ಮಗುವಿಗೆ ನೀಡುವ ಅತ್ಯಂತ ಪೌಷ್ಠಿಕ ಆಹಾರವೆಂದರೆ ಎದೆಹಾಲು. ನೀರಿನ ಜೊತೆಗೆ, ಇದು ಕೊಬ್ಬುಗಳು, ಕಾರ್ಬ್ಸ್, ಖನಿಜಗಳು, ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಸೋಡಿಯಂ ಮತ್ತು ವಿಟಮಿನ್ ಎ, ಸಿ ಮತ್ತು ಡಿ ಗಳನ್ನು ಹೊಂದಿದೆ. ನವಜಾತ ಶಿಶುಗಳಿಗೆ ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಎದೆ ಹಾಲು ಅತ್ಯುತ್ತಮ ಮತ್ತು ಏಕೈಕ ಪೋಷಣೆಯ ಮೂಲವಾಗಿದೆ.

ಮಾರಣಾಂತಿಕ ವೈರಲ್ ಸೋಂಕಿನಿಂದ ರಕ್ಷಿಣೆ:
ತಾಯಿಯ ಹಾಲು ಮಗುವಿಗೆ ಮುಖ್ಯವಾಗಿದೆ ಏಕೆಂದರೆ ಇದು ಎಲ್ಲಾ ಪೋಷಕಾಂಶಗಳನ್ನು ಉತ್ತಮ ಪ್ರಮಾಣದಲ್ಲಿ ಹೊಂದಿದ್ದು, ಅದು ಮಗುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಿಂದ ನಿಮ್ಮ ಮಗುವಿಗೆ ಯಾವುದೇ ಸೋಂಕು ಅಪಾಯವನ್ನುಂಟುಮಾಡುವುದಿಲ್ಲ. ತಾಯಿಯೊಬ್ಬಳು ತಮ್ಮ ಮಗುವಿಗೆ ಕನಿಷ್ಠ ಆರು ತಿಂಗಳವರೆಗೆ ಹಾಲುಣಿಸಬೇಕು ಎಂದು ವೈದ್ಯರು ಮತ್ತು ತಜ್ಞರು ಶಿಫಾರಸು ಮಾಡುತ್ತಾರೆ.

ರೋಗ ನಿರೋಧಕ ಶಕ್ತಿಯ ವೃದ್ಧಿ:
ನಿಮ್ಮ ಮಗುವಿನ ರೋಗನಿರೋಧಕ ಶಕ್ತಿಯ ವಿಚಾರಕ್ಕೆ ಬಂದಾಗ ಎದೆಹಾಲು ಅಮೃತದಂತೆ. ಇಮ್ಯುನೊಲಾಜಿಯಲ್ಲಿ ಫ್ರಾಂಟಿಯರ್ಸ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಎದೆ ಹಾಲಿನ ಸಹಜ ಪ್ರತಿರಕ್ಷಣಾ ವ್ಯವಸ್ಥೆಯು ಸೋಂಕುಗಳ ವಿರುದ್ಧದ ಹೋರಾಡುವಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹಾಲು ಕುಡಿದ ಕೆಲವೇ ನಿಮಿಷಗಳಲ್ಲಿ ಸಕ್ರಿಯಗೊಳ್ಳುತ್ತದೆ.
(Kannada Copy of Boldsky Kannada)
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 06:20 pm
HK News Staffer
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm