ಬ್ರೇಕಿಂಗ್ ನ್ಯೂಸ್
07-05-21 11:30 am Reena TK, BoldSky Kannada ಡಾಕ್ಟರ್ಸ್ ನೋಟ್
18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಲಭ್ಯವಾಗಿರುವುದರಿಂದ ದೇಶದ ಶೇ. 70 ರಷ್ಟು ಜನರಿಗೆ ವ್ಯಾಕ್ಸಿನ್ ಲಭಿಸುವಂತಾಗುವುದು. ಈ ಲಸಿಕೆ ಅರ್ಹರಾಗಿರುವ ಪ್ರತಿಯೊಬ್ಬರು ತೆಗೆದುಕೊಂಡರೆ ಈಗ ಕೊರೊನಾ ಆರ್ಭಟಿಸುತ್ತಿದ್ದರೂ ಕೆಲವೇ ದಿನದಲ್ಲಿ ಸೋಂಕು ಕಡಿಮೆಯಾಗುವ ಎಲ್ಲಾ ಸಾದ್ಯತೆ ಇದೆ.
ಕೊರೊನಾ ವ್ಯಾಕ್ಸಿನ್ ಅನ್ನು ಎರಡು ಡೋಸ್ ಆಗಿ ತೆಗೆಯಬೇಕು. ಒಂದು ಡೋಸ್ ಪಡೆದ ಬಳಿಕ 4 ವಾರಗಳ ನಂತರ ಮತ್ತೊಂದು ಡೋಸ್ ತೆಗೆದುಕೊಳ್ಳಬೇಕು. ಕೋವಿಶೀಲ್ಡ್ ತೆಗೆದುಕೊಂಡಿದ್ದರೆ ಮೊದಲ ಡೋಸ್ ತೆಗೆದುಕೊಂಡ 6-8 ವಾರಗಳಲ್ಲಿ ಎರಡನೇ ಡೋಸ್ ತೆಗೆದುಕೊಳ್ಳಬೇಕು. ಕೊರೊನಾವೈರಸ್ 2ನೇ ಅಲೆ ತುಂಬಾ ವೇಗವಾಗಿ ಹರಡುತ್ತಿರುವುದರಿಂದ ಮೊದಲ ಡೋಸ್ ಪಡೆದ ಕೆಲವರಲ್ಲಿಯೂ ಸೋಂಕು ಕಂಡು ಬರುತ್ತಿದೆ. ಕೊವಾಕ್ಸಿನ್ ಹಾಗೂ ಕೋವಿಶೀಲ್ಡ್ ಕೊರೊನಾವ ವಿರುದ್ಧ ಸಮರ್ಥವಾಗಿ ಹೋರಾಡುವ ಲಸಿಕೆಗಳು ಆಗಿದ್ದರೂ, ಈ ಲಸಿಕೆ ಪಡೆದುಕೊಂಡರೆ ಸೋಂಕು ಬರುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿಲ್ಲ.

ಕೊರೊನಾ ಲಸಿಕೆ ಪಡೆದ ಬಳಿಕ ಕೊರೊನಾ ಬಂದ್ರೆ?
ಕೊರೊನಾ ಲಸಿಕೆ ಎರಡು ಡೋಸ್ ಪಡೆದವರಲ್ಲಿ ಶೇ.4ರಷ್ಟು ಜನರಲ್ಲಿ ಸೋಂಕು ಬಂದಿದೆ. ಆದರೆ ಕೋವಿಡ್ 19 ಲಸಿಕೆ ಪಡೆದವರಲ್ಲಿ ಹಾಗೂ ಪಡೆಯದವರಲ್ಲಿ ಇರುವ ವ್ಯತ್ಯಾಸವೇನೆಂದರೆ ಈ ಲಸಿಕೆ ಪಡೆದುಕೊಂಡವರಲ್ಲಿ ರೋಗ ಲಕ್ಷಣಗಳು ಗಂಭೀರವಾಗುವುದಿಲ್ಲ, ಅಲ್ಲದೆ ಬೇಗನೆ ಚೇತರಿಸಿಕೊಳ್ಳುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು.

ಕೋವಿಡ್ 19 ಪಾಸಿಟಿವ್ ಬಂದವರು ಲಸಿಕೆ ಪಡೆಯಬಹುದೇ?
ಕೋವಿಡ್ 19 ಪಾಸಿಟಿವ್ ಬಂದಾಗ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವಂತಿಲ್ಲ. ಕೊರೊನಾದಿಂದ ಚೇತರಿಸಿದ 4-8 ವಾರಗಳ ಬಳಿಕ ತಿನ್ನಬೇಕು.

ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಲಸಿಕೆ ತೆಗೆದುಕೊಂಡರೆ?
ಕೆಲವರಿಗೆ ಕೋವಿಡ್ 19 ಬಂದರೂ ಯಾವುದೇ ಲಕ್ಷಣಗಳಿರುವುದಿಲ್ಲ, ಹಾಗಾಗಿ ಅವರಿಗೆ ಸೋಂಕು ಬಂದಿರುವುದು ಗೊತ್ತಿರುವುದಿಲ್ಲ , ಅಂತ ಸಮಯದಲ್ಲಿ ಕೋವಿಡ್ 19 ಲಸಿಕೆ ತೆಗೆದುಕೊಂಡರೆ ಭಯ ಪಡಬೇಕಾಗಿಲ್ಲ, ಲಸಿಕೆಯೂ ನಿಮ್ಮ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ.

ಕೋವಿಡ್ 19 ಬಂದಾಗ ಎರಡನೇ ಡೋಸ್ ಯಾವಾಗ ಪಡೆಯಬೇಕು?
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಾಗ ಎರಡನೇ ಡೋಸ್ ಯಾವಾಗ ಪಡೆಯಬೇಕು? ಎಂಬ ಪ್ರಶ್ನೆ ಹಲವರಲ್ಲಿ ಇರುತ್ತದೆ. ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿರುವುದರಿಂದ ಕೊರೊನಾ ಸೋಂಕಿನಿಂದ ಬೇಗನೆ ಚೇತರಿಸಿಕೊಳ್ಳಬಹುದು. ಕೊರೊನಾದಿಂದ ಚೇತರಿಸಿದ ಬಳಿಕ 4 ವಾರಗಳನ್ನು ಕಳೆದ ಮೇಲೆ ಲಸಿಕೆ ಪಡೆಯಿರಿ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm