ಬ್ರೇಕಿಂಗ್ ನ್ಯೂಸ್
14-05-21 02:36 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಲಸಿಕೆ ಬಂದಾಗ ಲಸಿಕೆ ಹಾಕಿಕೊಳ್ಳಿ ಎಂದು ಸರ್ಕಾರ ಹೇಳಿದಾಗ ಹಿಂದೇಟು ಹಾಕಿದ್ದ ಜನರು ಇದೀಗ ಕೊರೊನಾ 2ನೇ ಅಲೆಯಲ್ಲಿ ಲಸಿಕೆಯ ಮಹತ್ವ ಅರಿತು ಲಸಿಕೆ ಪಡೆಯಲು ಮುಗಿ ಬೀಳುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲಿದರೂ ರೋಗ ಲಕ್ಷಣಗಳು ಗಂಭೀರವಾಗದೆ ಬೇಗನೆ ಚೇತರಿಸಿಕೊಳ್ಳುತ್ತಿರುವುದರಿಂದ ಜನರಿಗೆ ಲಸಿಕೆ ಮೇಲೆ ವಿಶ್ವಾಸ ಮೂಡಿ ಲಸಿಕೆ ಪಡೆಯಲು ಉತ್ಸಾಹ ತೋರಿಸುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರೆ 6 ತಿಂಗಳ ಬಳಿಕ ಲಸಿಕೆ ಪಡೆಯಬೇಕು, ಏಕೆ?
ಕೊರೊನಾ ಪಾಸಿಟಿವ್ ಬಂದ ಚೇರಿಸಿಕೊಂಡವರು 6 ತಿಂಗಳವರೆಗೆ ಲಸಿಕೆ ಪಡೆಯಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಒಮ್ಮೆ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿದ ಬಳಿಕ 6 ತಿಂಗಳ ಒಳಗೆ ಲಸಿಕೆ ಪಡೆದರೆ ಆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿರುವುದಿಲ್ಲ. ಅದೇ ಆರು ತಿಂಗಳ ಬಳಿಕ ಲಸಿಕೆ ಪಡೆದರೆ ಆ ಲಸಿಕೆ ತುಂಬಾ ಉತ್ತಮ ಪ್ರಭಾವ ಬೀರುವುದಾಗಿ ಸಂಶೋಧನೆಯಿಂದ ದೃಢಪಟ್ಟಿದೆ.
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಿದ್ದರೆ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಬಂದಿದ್ದರೆ ಅಂಥವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ 8 ವಾರಗಳ ಬಳಿಕ ಎರಡನೇ ಡೋಸ್ ಪಡೆಯಬಹುದಾಗಿದೆ.

ಕೋವಿಶೀಲ್ಡ್ ಮೊದಲನೇ ಹಾಗೂ 2ನೇ ಡೋಸ್ ನಡುವೆ ಅಂತರ ಹೆಚ್ಚಾಗಿದೆ
ಕೋವಿಶೀಲ್ಡ್ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಅಂತರವನ್ನು 12-16 ವಾರಕ್ಕೆ ಏರಿಸಬೇಕೆಂದೂ ಕೂಡ ಹೇಳಿದ್ದಾರೆ. ಈಗ ಕೋವಿಶೀಲ್ಡ್ ಲಸಿಕೆಯನ್ನು 4-8 ವಾರಗಳ ಅಂತರದಲ್ಲಿ ನೀಡಲಾಗುತ್ತಿತ್ತು. ಕೊವಾಕ್ಸಿನ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಕಡಿಮೆ ಅಂತರಕ್ಕಿಂತ ಅದಕ್ಕೆ ಅಂತರವಿದ್ದರೆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗುವುದು
ಕೋವಿಡ್ 19 ಲಸಿಕೆ ಮೊದಲ ಡೋಸ್ ಪಡೆದು 3 ತಿಂಗಳ ಬಳಿಕ ಎರಡನೇ ಡೋಸ್ ಪಡೆಯುವುದರಿಂದ ಕೊರೊನಾ ಲಸಿಕೆ ಹೆಚ್ಚು ಪ್ರಯೋಜಕಾರಿಯಾಗುವುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚು ಸಮಯ ಉಳಿಯುತ್ತದೆ.

ಗರ್ಭೀಣಿಯರು ಲಸಿಕೆ ಪಡೆಯಬಹುದೇ?
NTAGI (The National Technical Advisory Group on Immunisation) ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದೆಂದು ಸಲಹೆ ನೀಡಿದೆ. ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್ನಲ್ಲಿ ಯಾವ ಲಸಿಕೆಯನ್ನಾದರೂ ಎರಡು ಡೋಸ್ನಂತೆ ತೆಗೆದುಕೊಳ್ಳಬಹುದಾಗಿದೆ. ಅಲ್ಲದೆ ಎದೆಹಾಲುಣಿಸುವ ತಾಯಂದಿರು ಕೂಡ ಲಸಿಕೆ ಪಡೆಯಬಹುದು ಎಂದು ಸೂಚಿಸಿದೆ.
(Kannada Copy of Boldsky Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am