ಬ್ರೇಕಿಂಗ್ ನ್ಯೂಸ್
17-05-21 05:53 pm Reena TK, BoldSky Kannada ಡಾಕ್ಟರ್ಸ್ ನೋಟ್
ಒಂದು ಕಡೆ ಕೊರೊನಾ 2 ಅಲೆಯ ಆರ್ಭಟ, ಮತ್ತೊಂದೆಡೆ ಕೊರೊನಾ ಲಸಿಕೆಯ ಕೊರತೆ ಜನರನ್ನು ಆತಂಕಕ್ಕೆ ದೂಡಿದೆ. ತಜ್ಞರೇ ಹೇಳಿರುವಂತೆ ಕೊರೊನಾ ಗೆಲ್ಲಲು ಎಲ್ಲರು ಕೊರೊನಾ ಲಸಿಕೆ ಪಡೆದುಕೊಳ್ಳುವಂತಾಗಬಹುದು. ಸರ್ಕಾರವು 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ.
ಆದರೆ ಲಸಿಕೆಗಾಗಿ ಬಂದವರಿಗೆ ಕೊರೊನಾ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ, ಇದು ಸರ್ಕಾರದ ಮೇಲೆ ಒತ್ತಡ ಬೀರಿದರೆ ಜನರಲ್ಲಿ ಎಲ್ಲರಿಗೆ ಸಿಗುವಂತೆ ಕೊರೊನಾ ಲಸಿಕೆ ಯಾವಾಗ ಲಭ್ಯವಾಗುವುದು ಎಂಬ ಪ್ರಶ್ನೆ ಮೂಡಿತ್ತು. ಈಗ ಅದಕ್ಕೆ ಉತ್ತರವಾಗಿ ಅಹ್ಮದಾಬಾದ್ನ ಜೈಡಸ್ ಕ್ಯಾಡಿಲಾ ಕಂಪನಿ ಭರವಸೆಯನ್ನು ಮೂಡಿಸಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಉತ್ಯಾದನೆಯಲ್ಲಿ 2ನೇ ದೊಡ್ಡ ಕಂಪನಿ
ನೋವೆಲ್ ಕೊರೊನಾ ವೈರಸ್ ವಿರುದ್ಧ ಲಸಿಕೆ ಉತ್ಪಾದನೆಯಲ್ಲಿ ಕೊವಾಕ್ಸಿನ್ ಉತ್ಪಾದನೆಯ ಭಾರತ್ ಬಯೋಟೆಕ್ ಮೊದಲ ಸ್ಥಾನದಲ್ಲಿದ್ದರೆ ಜೈಕೋವಿ-ಡಿ ಲಸಿಕೆ ಉತ್ಪಾದನೆ ಜೈಡಸ್ ಕ್ಯಾಡಿಲಾ 2ನೇ ಸ್ಥಾನದಲ್ಲಿದೆ.

ಜೈಕೋವಿ-ಡಿ 3 ಡೋಸ್ನ ಲಸಿಕೆಯಾಗಿದೆ
ಕೊವಾಕ್ಸಿನ್ , ಕೋವಿಶೀಲ್ಡ್ ಎರಡು ಡೋಸ್ನ ಲಸಿಕೆಯಾದರೆ ಜೈಕೋವಿ-ಡಿ ಮೂರು ಡೋಸ್ನ ಲಸಿಕೆಯಾಗಿದೆ. ಈ ಲಸಿಕೆಯ ಟ್ರಯಲ್ನಲ್ಲಿ 12-17ವರ್ಷ ಒಳಗಿನ ಮಕ್ಕಳನ್ನು ಸಹ ಒಳಪಡಿಸಿದೆ.

ವರ್ಷದಲ್ಲಿ 24 ಕೋಟಿ ಲಸಿಕೆ ಉತ್ಪಾದಿಸಲಿರುವ ಜೈಕೋವಿ-ಡಿ
ಈ ಲಸಿಕೆ ನೀಡಲು ಅನುಮತಿ ದೊರೆತ ಕೂಡಲೇ ಜೂನ್ನಲ್ಲಿ ಲಭ್ಯವಾಗಲಿದ್ದು ಈ ವರ್ಷ 240 ಮಿಲಿಯನ್ ಅಂದ್ರೆ 24 ಕೋಟಿ ಲಸಿಕೆ ಉತ್ಪಾದನೆಯ ಗುರಿಯನ್ನು ಹೊಂದಿದೆ. ಈ ಲಸಿಕೆಯನ್ನು ಇದುವರೆಗೆ ಸ್ವಯಂಪ್ರೇರೀತರಾಗಿ ಬಂದಿರುವ 28,000 ಜನರ ಮೇಲೆ ಪ್ರಯೋಗಿಸಲಾಗಿದೆ. ಆದ್ದರಿಂದ ಈ ಲಸಿಕೆಯ ಟ್ರಯಲ್ ನಲ್ಲಿ ಒಳಪಟ್ಟವರ ಸಂಖ್ಯೆ ಇತರ ವ್ಯಾಕ್ಸಿನ್ ಟ್ರಯಲ್ ಸಂಖ್ಯೆಗಿಂತ ಅಧಿಕವಿದೆ.

ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
ZyCoV-D ಒಂದು DNA ವ್ಯಾಕ್ಸಿನ್ ಆಗಿದ್ದು, ಇದು ಕೊರೊನಾವೈರಸ್ ದೇಹ ಒಳ ಪ್ರವೇಶಿಸಲು ಕಾರಣವಾಗುವ ವೈರಲ್ ಮೆಂಬರೇನ್ ಪ್ರೋಟೀನ್ ವಿರುದ್ಧ ಹೋರಾಡುತ್ತದೆ. ಇದು ಪ್ಲಾಸ್ಮಿಡ್ ಡಿಎನ್ಎ ಆಧಾರಿತ ಲಸಿಕೆಯಾಗಿದ್ದು ಇದರಲ್ಲಿ ಸರ್ಕ್ಯೂಲರ್ ಮತ್ತು ಎಕ್ಸ್ಟ್ರಾಕ್ರೋಮೋಸೋಮಲ್ ಬ್ಯಾಕ್ಟಿರಿಯಾ ಡಿಎನ್ಎ ಬಳಸಿ ತಯಾರಿಸಲಾಗಿದೆ.
(Kannada Copy of Boldsky Kannada)
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm