ಬ್ರೇಕಿಂಗ್ ನ್ಯೂಸ್
18-05-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ಕೋವಿಡ್ 19 ನಿಯಂತ್ರಣಕ್ಕೆ ಯಾವ ಔಷಧ ಒಳ್ಳೆಯದು ಎಂಬುವುದರ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಈಗಾಗಲೇ ಭಾರತದಲ್ಲಿ ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊವಾಕ್ಸಿನ್ ಹಾಗೂ ಕೊವಿಶೀಲ್ಡ್ ಎಂಬ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ.
ಇದರ ಜೊತೆಗೆ DRDO (Drugs Controller General of India) ಕೂಡ ಕೊರೊನಾಗೆ 2-DG( 2-deoxy-D-glucose) ಎಂಬ ಔಷಧವನ್ನು ಕಂಡು ಹಿಡಿದಿದೆ. ಮೇ. 15ಕ್ಕೆ ಈ ಔಷಧಿಯನ್ನು ಕೊರೊನಾ ಸೋಂಕಿತರಿಗೆ ನೀಡಲು ಅನುಮತಿ ಸಿಕ್ಕಿದೆ. ಇದೀಗ ಈ ಔಷಧಿ ತುಂಬಾನೇ ಸದ್ದು ಮಾಡುತ್ತಿದೆ.
2 ಡಿಯೋಕ್ಸಿ ಡಿ ಗ್ಲುಕೋಸ್ (2-DG) ಔಷಧ ಬಳಸುವುದು ಹೇಗೆ?
ಇದು ಪೌಡರ್ ರೂಪದ ಔಷಧವಾಗಿದ್ದು ಸ್ಯಾಚೆಟ್ನಲ್ಲಿ ದೊರೆಯುತ್ತದೆ. ಇದನ್ನು ನೀರಿನಲ್ಲಿ ಕಲೆಸಿ ಕುಡಿಯಬೇಕು. ಇದು ಸೋಂಕಾಣುಗಳು ಜೀವ ಕಣಗಳಿಗೆ ಹಾನಿ ಮಾಡುವುದನ್ನು ತಡೆಗಟ್ಟುತ್ತದೆ, ವೈರಸ್ ಬೆಳವಣಿಗೆ ತಡೆಗಟ್ಟಿ, ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಈ ಔಷಧ ಬಳಸುವುದರಿಂದ ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಬಹುದು ಎಂಬ ಸರ್ಕಾರದ ಭರವಸೆಯಾಗಿದೆ. ಇದು ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತೆ.

ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
2-DGಯನ್ನು ಸೋಂಕಿತರಿಗೆ ನೀಡಿದಾಗ ಅವರು ಬೇಗನೆ ಚೇತರಿಸಿಕೊಂಡು ವರದಿ ನೆಗೆಟಿವ್ ಬರುತ್ತಿರುವುದು ಸಾಬೀತಾಗಿದೆ. ಈ ಔಷಧ ದೇಹದಲ್ಲಿ ಶಕ್ತಿ ಕಣಗಳನ್ನು ಉತ್ಪಾದಿಸಿ, ವೈರಸ್ ಬೆಳವಣಿಗೆಯನ್ನು ತಡೆಗಟ್ಟುತ್ತದೆ.

ಈ ಔಷಧ ಎಷ್ಟು ಪರಿಣಾಮಕಾರಿ
ಕೊರೊನಾ 2ನೇ ಅಲೆಯಲ್ಲಿ ಸಾಕಷ್ಟು ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಈ ಔಷಧ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಕೂಡ ಸಹಾಯ ಮಾಡುತ್ತೆ. ಆಕ್ಸಿಜನ್ ಸಿಲೆಂಡರ್ನಿಂದ ಉಸಿರಾಡುತ್ತಿರುವವರು ಸ್ವಾಭಾವಿಕವಾಗಿ ಉಸಿರಾಡುವಂತಾಗಲು ಈ ಔಷಧ ಸಹಕಾರಿ ಎಂಬುವುದು ಅಧ್ಯಯನದಿಂದ ಸಾಬೀತಾಗಿದೆ.

ಇದರ ಬೆಲೆ ಎಷ್ಟು
ನ್ಯೂಸ್ 18 ವರದಿ ಪ್ರಕಾರ ಇದರ ಬೆಲೆಯನ್ನು ಇನ್ನೂ ನಿಗದಿ ಪಡಿಸಿಲ್ಲ, ಅಂದಾಜು ರೂ 500-600 ಇರಬಹುದು ಎಂದು ಹೇಳಲಾಗುತ್ತಿದೆ. ಡಾ, ರೆಡ್ಡಿ ಲ್ಯಾಬ್ ಹಾಗೂ DRDO ಜೊತೆಯಾಗಿ ಈ ಔಷಧ ತಯಾರಿಸಿದ್ದು ದೇಶದಲ್ಲಿ ಎಲ್ಲಾ ಕಡೆ ಇದು ಸುಲಭವಾಗಿ ಸಿಗುವಂತಾಗುವುದು.
(Kannada Copy of Boldsky Kannada)
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am