ಬ್ರೇಕಿಂಗ್ ನ್ಯೂಸ್
18-05-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ಕೋವಿಡ್ 19 ನಿಯಂತ್ರಣಕ್ಕೆ ಯಾವ ಔಷಧ ಒಳ್ಳೆಯದು ಎಂಬುವುದರ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಈಗಾಗಲೇ ಭಾರತದಲ್ಲಿ ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊವಾಕ್ಸಿನ್ ಹಾಗೂ ಕೊವಿಶೀಲ್ಡ್ ಎಂಬ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ.
ಇದರ ಜೊತೆಗೆ DRDO (Drugs Controller General of India) ಕೂಡ ಕೊರೊನಾಗೆ 2-DG( 2-deoxy-D-glucose) ಎಂಬ ಔಷಧವನ್ನು ಕಂಡು ಹಿಡಿದಿದೆ. ಮೇ. 15ಕ್ಕೆ ಈ ಔಷಧಿಯನ್ನು ಕೊರೊನಾ ಸೋಂಕಿತರಿಗೆ ನೀಡಲು ಅನುಮತಿ ಸಿಕ್ಕಿದೆ. ಇದೀಗ ಈ ಔಷಧಿ ತುಂಬಾನೇ ಸದ್ದು ಮಾಡುತ್ತಿದೆ.
2 ಡಿಯೋಕ್ಸಿ ಡಿ ಗ್ಲುಕೋಸ್ (2-DG) ಔಷಧ ಬಳಸುವುದು ಹೇಗೆ?
ಇದು ಪೌಡರ್ ರೂಪದ ಔಷಧವಾಗಿದ್ದು ಸ್ಯಾಚೆಟ್ನಲ್ಲಿ ದೊರೆಯುತ್ತದೆ. ಇದನ್ನು ನೀರಿನಲ್ಲಿ ಕಲೆಸಿ ಕುಡಿಯಬೇಕು. ಇದು ಸೋಂಕಾಣುಗಳು ಜೀವ ಕಣಗಳಿಗೆ ಹಾನಿ ಮಾಡುವುದನ್ನು ತಡೆಗಟ್ಟುತ್ತದೆ, ವೈರಸ್ ಬೆಳವಣಿಗೆ ತಡೆಗಟ್ಟಿ, ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಈ ಔಷಧ ಬಳಸುವುದರಿಂದ ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಬಹುದು ಎಂಬ ಸರ್ಕಾರದ ಭರವಸೆಯಾಗಿದೆ. ಇದು ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತೆ.

ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
2-DGಯನ್ನು ಸೋಂಕಿತರಿಗೆ ನೀಡಿದಾಗ ಅವರು ಬೇಗನೆ ಚೇತರಿಸಿಕೊಂಡು ವರದಿ ನೆಗೆಟಿವ್ ಬರುತ್ತಿರುವುದು ಸಾಬೀತಾಗಿದೆ. ಈ ಔಷಧ ದೇಹದಲ್ಲಿ ಶಕ್ತಿ ಕಣಗಳನ್ನು ಉತ್ಪಾದಿಸಿ, ವೈರಸ್ ಬೆಳವಣಿಗೆಯನ್ನು ತಡೆಗಟ್ಟುತ್ತದೆ.

ಈ ಔಷಧ ಎಷ್ಟು ಪರಿಣಾಮಕಾರಿ
ಕೊರೊನಾ 2ನೇ ಅಲೆಯಲ್ಲಿ ಸಾಕಷ್ಟು ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಈ ಔಷಧ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಕೂಡ ಸಹಾಯ ಮಾಡುತ್ತೆ. ಆಕ್ಸಿಜನ್ ಸಿಲೆಂಡರ್ನಿಂದ ಉಸಿರಾಡುತ್ತಿರುವವರು ಸ್ವಾಭಾವಿಕವಾಗಿ ಉಸಿರಾಡುವಂತಾಗಲು ಈ ಔಷಧ ಸಹಕಾರಿ ಎಂಬುವುದು ಅಧ್ಯಯನದಿಂದ ಸಾಬೀತಾಗಿದೆ.

ಇದರ ಬೆಲೆ ಎಷ್ಟು
ನ್ಯೂಸ್ 18 ವರದಿ ಪ್ರಕಾರ ಇದರ ಬೆಲೆಯನ್ನು ಇನ್ನೂ ನಿಗದಿ ಪಡಿಸಿಲ್ಲ, ಅಂದಾಜು ರೂ 500-600 ಇರಬಹುದು ಎಂದು ಹೇಳಲಾಗುತ್ತಿದೆ. ಡಾ, ರೆಡ್ಡಿ ಲ್ಯಾಬ್ ಹಾಗೂ DRDO ಜೊತೆಯಾಗಿ ಈ ಔಷಧ ತಯಾರಿಸಿದ್ದು ದೇಶದಲ್ಲಿ ಎಲ್ಲಾ ಕಡೆ ಇದು ಸುಲಭವಾಗಿ ಸಿಗುವಂತಾಗುವುದು.
(Kannada Copy of Boldsky Kannada)
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm