ಬ್ರೇಕಿಂಗ್ ನ್ಯೂಸ್
18-05-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ಕೋವಿಡ್ 19 ನಿಯಂತ್ರಣಕ್ಕೆ ಯಾವ ಔಷಧ ಒಳ್ಳೆಯದು ಎಂಬುವುದರ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಈಗಾಗಲೇ ಭಾರತದಲ್ಲಿ ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊವಾಕ್ಸಿನ್ ಹಾಗೂ ಕೊವಿಶೀಲ್ಡ್ ಎಂಬ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ.
ಇದರ ಜೊತೆಗೆ DRDO (Drugs Controller General of India) ಕೂಡ ಕೊರೊನಾಗೆ 2-DG( 2-deoxy-D-glucose) ಎಂಬ ಔಷಧವನ್ನು ಕಂಡು ಹಿಡಿದಿದೆ. ಮೇ. 15ಕ್ಕೆ ಈ ಔಷಧಿಯನ್ನು ಕೊರೊನಾ ಸೋಂಕಿತರಿಗೆ ನೀಡಲು ಅನುಮತಿ ಸಿಕ್ಕಿದೆ. ಇದೀಗ ಈ ಔಷಧಿ ತುಂಬಾನೇ ಸದ್ದು ಮಾಡುತ್ತಿದೆ.
2 ಡಿಯೋಕ್ಸಿ ಡಿ ಗ್ಲುಕೋಸ್ (2-DG) ಔಷಧ ಬಳಸುವುದು ಹೇಗೆ?
ಇದು ಪೌಡರ್ ರೂಪದ ಔಷಧವಾಗಿದ್ದು ಸ್ಯಾಚೆಟ್ನಲ್ಲಿ ದೊರೆಯುತ್ತದೆ. ಇದನ್ನು ನೀರಿನಲ್ಲಿ ಕಲೆಸಿ ಕುಡಿಯಬೇಕು. ಇದು ಸೋಂಕಾಣುಗಳು ಜೀವ ಕಣಗಳಿಗೆ ಹಾನಿ ಮಾಡುವುದನ್ನು ತಡೆಗಟ್ಟುತ್ತದೆ, ವೈರಸ್ ಬೆಳವಣಿಗೆ ತಡೆಗಟ್ಟಿ, ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಈ ಔಷಧ ಬಳಸುವುದರಿಂದ ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಬಹುದು ಎಂಬ ಸರ್ಕಾರದ ಭರವಸೆಯಾಗಿದೆ. ಇದು ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತೆ.

ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
2-DGಯನ್ನು ಸೋಂಕಿತರಿಗೆ ನೀಡಿದಾಗ ಅವರು ಬೇಗನೆ ಚೇತರಿಸಿಕೊಂಡು ವರದಿ ನೆಗೆಟಿವ್ ಬರುತ್ತಿರುವುದು ಸಾಬೀತಾಗಿದೆ. ಈ ಔಷಧ ದೇಹದಲ್ಲಿ ಶಕ್ತಿ ಕಣಗಳನ್ನು ಉತ್ಪಾದಿಸಿ, ವೈರಸ್ ಬೆಳವಣಿಗೆಯನ್ನು ತಡೆಗಟ್ಟುತ್ತದೆ.

ಈ ಔಷಧ ಎಷ್ಟು ಪರಿಣಾಮಕಾರಿ
ಕೊರೊನಾ 2ನೇ ಅಲೆಯಲ್ಲಿ ಸಾಕಷ್ಟು ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಈ ಔಷಧ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಕೂಡ ಸಹಾಯ ಮಾಡುತ್ತೆ. ಆಕ್ಸಿಜನ್ ಸಿಲೆಂಡರ್ನಿಂದ ಉಸಿರಾಡುತ್ತಿರುವವರು ಸ್ವಾಭಾವಿಕವಾಗಿ ಉಸಿರಾಡುವಂತಾಗಲು ಈ ಔಷಧ ಸಹಕಾರಿ ಎಂಬುವುದು ಅಧ್ಯಯನದಿಂದ ಸಾಬೀತಾಗಿದೆ.

ಇದರ ಬೆಲೆ ಎಷ್ಟು
ನ್ಯೂಸ್ 18 ವರದಿ ಪ್ರಕಾರ ಇದರ ಬೆಲೆಯನ್ನು ಇನ್ನೂ ನಿಗದಿ ಪಡಿಸಿಲ್ಲ, ಅಂದಾಜು ರೂ 500-600 ಇರಬಹುದು ಎಂದು ಹೇಳಲಾಗುತ್ತಿದೆ. ಡಾ, ರೆಡ್ಡಿ ಲ್ಯಾಬ್ ಹಾಗೂ DRDO ಜೊತೆಯಾಗಿ ಈ ಔಷಧ ತಯಾರಿಸಿದ್ದು ದೇಶದಲ್ಲಿ ಎಲ್ಲಾ ಕಡೆ ಇದು ಸುಲಭವಾಗಿ ಸಿಗುವಂತಾಗುವುದು.
(Kannada Copy of Boldsky Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am