ಬ್ರೇಕಿಂಗ್ ನ್ಯೂಸ್
19-05-21 02:53 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ 3ನೇ ಅಲೆ ಎಂದು ಕೇಳಿದ ತಕ್ಷಣ ಚಿಕ್ಕ ಮಕ್ಕಳಿರುವ ಪೋಷಕರಲ್ಲಿ ಆತಂಕ ಹೆಚ್ಚಾಗುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಲಭ್ಯವಿದೆ, ಲಸಿಕೆ ಪಡೆದವರು ಕೊರೊನಾಕ್ಕೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಬಹುದು ಎಂಬುವುದು ಸಾಬೀತಾಗಿದೆ. ಮಕ್ಕಳಿಗೆ ಲಸಿಕೆ ಇನ್ನೂ ಬಂದಿಲ್ಲ, ಇದು ಪೋಷರ ಆತಂಕಕ್ಕೆ ಪ್ರಮುಖ ಕಾರಣವಾಗಿದೆ.
3ನೇ ಅಲೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಮದು ಈಗಾಗಲೇ ತಜ್ಷರು ಎಚ್ಚರಿಸಿದ್ದಾರೆ. ಮಕ್ಕಳನ್ನು ಕೊರೊನಾದಿಂದ ರಕ್ಷಿಸಲು ಏನು ಮಾಡಬೇಕು ಎಂಬುವುದರ ಬಗ್ಗೆ ತಜ್ಞರು ಸಲಹೆ ನೀಡುತ್ತಿದ್ದಾರೆ.
ಬೆಂಗಳೂರಿನ ನಿಮಾನ್ಸ್ನ ಪ್ರಸಿದ್ಧ ವೈರಲಾಜಿಸ್ಟ್ ಡಾ. ರವಿ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ. ಮಹರಾಷ್ಟ್ರದಲ್ಲಿ ಈ ಅಲೆಯನ್ನು ನಿಯಂತ್ರಿಸಲು ಸರ್ಕಾರ ಈಗಾಗಲೇ ಟಾಸ್ಕ್ ಫೋರ್ಸ್ ರಚಿಸಲಾಗಿದೆ..

ಕೊರೊನಾ 3ನೇ ಅಲೆ ಮಕ್ಕಳಿಗೇ ಏಕೆ ಅಪಾಯಕಾರಿ?
ಕೊರೊನಾ ಮೊದಲನೇ ಅಲೆ ವಯಸ್ಸಾದವರಿಗೆ ಹಾಗೂ ಈಗಾಗಲೇ ಕಾಯಿಲೆಯಿಂದ ಬಳಲುತ್ತಿರುವವರಿಗೆ ಹೆಚ್ಚು ಅಪಾಯಕಾರಿಯಾಗಿತ್ತು. ದೇಶದಲ್ಲಿ 2ನೇ ಹಂತದಲ್ಲಿ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿತ್ತು, ಎರಡನೇ ಅಲೆಯಲ್ಲಿ ಯುವಕ-ಯುವತಿಯರೂ ಬಲಿಯಾಗಿದ್ದಾರೆ. ಕುಟುಂಬದಲ್ಲಿ ದುಡಿದು ತರುತ್ತಿದ್ದ ಕೈಗಳನ್ನೇ ಕೊರೊನಾ ಕಿತ್ತುಕೊಂಡಿದೆ. ದೇಶದಲ್ಲಿ ಇದೀಗ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತಿರುವುದರಿಂದ ಅವರು ಸುರಕ್ಷಿತವಾಗಬಹುದು. ಈಗ ಲಸಿಕೆ ಸಿಗದೇ ಇರುವುದು 18 ವರ್ಷ ಕೆಳಗಿನವರಿಗೆ. ಆದ್ದರಿಂದ 3ನೇ ಅಲೆ ಅವರಿಗೆ ಅಪಾಯಕಾರಿಯಾಗಬಹುದೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

3ನೇ ಅಲೆಯ ಬಗ್ಗೆ ತಜ್ಞರು ಹೇಳುವುದು ಏನು?
ಭಾರತದಲ್ಲಿ 12 ವರ್ಷಕ್ಕಿಂತ ಚಿಕಕ್ವರು 165 ಮಿಲಿಯನ್ ಇದ್ದಾರೆ. ಶೇ.20ರಷ್ಟು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದರೂ ಅದರಲ್ಲಿ ಸೇ. 5ರಷ್ಟು ಮಕ್ಕಳಿಗೆ ಐಸಿಯು ಬೇಕಾಗುತ್ತದೆ. ಹಾಗೆ ನೋಡಿದರೆ ಪೀಡಿಯಾಟ್ರಿಕ್ ಐಸಿಯು 1.65 ಲಕ್ಷ ಬೇಕಾಗುವುದು. ಈಗೀನ ಪರಿಸ್ಥಿತಿಯಲ್ಲಿ 90,000 ಐಸಿಯು ಬೆಡ್ ಅನ್ನು ದೊಡ್ಡವರಿಗೆ ಒದಗಿಸಲು ಸರ್ಕಾರ ಹರಸಾಹಸ ಪಡುತ್ತಿದೆ.

ಮಕ್ಕಳ ರಕ್ಷಣೆಗಾಗಿ ಪೋಷಕರಿಗೆ ಮೊದಲು ಲಸಿಕೆ ನೀಡ ಬೇಕಾಗಿದೆ
ಮಕ್ಕಳನ್ನು ಹೊರಗಡೆ ಹೋಗದಂತೆ ನೋಡಿಕೊಳ್ಳಬಹುದು, ಅದೇ ಮನೆಯವರಿಂದಲೇ ಕೊರೊನಾ ಬರುವ ಸಾಧ್ಯತೆ ಇರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಪೋಷಕರಿಗೆ ಮೊದಲಿಗೆ ಲಸಿಕೆ ದೊರೆಯುವಂತಾಗಬೇಕು ಎಂದು ನಾರಾಯಣ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಂಸ್ಥಾಪಕ, ಪ್ರಸಿದ್ಧ ಹೃದಯ ಶಸ್ತ್ರಚಿಕಿತ್ಸಕ ಡಾ. ದೇವಿ ಶೆಟ್ಟಿ ಸರ್ಕಾರಕ್ಕೆ ಸೂಚಿಸಿದ್ದಾರೆ.
(Kannada Copy of Boldsky Kannada)
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm