ಬ್ರೇಕಿಂಗ್ ನ್ಯೂಸ್
29-05-21 03:36 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಸೌಂದರ್ಯ ಪ್ರಜ್ಞೆಯುಳ್ಳವರು ಸಾಮಾನ್ಯವಾಗಿ ಹೆಚ್ಚು ಬಳಸುವ ಒಂದು ವಸ್ತು ಅಂದ್ರೆ ಅದು ಮುಲ್ತಾನಿ ಮಿಟ್ಟಿ. ಅನೇಕ ಗುಣಗಳನ್ನು ಹೊಂದಿರುವ ಈ ಮಣ್ಣು ಚರ್ಮವನ್ನು ಶುದ್ಧೀಕರಿಸುವುದಲ್ಲದೆ, ಚರ್ಮವನ್ನು ಹೊಳೆಯುವಂತೆ ಮಾಡಲು, ಕಪ್ಪು ಕಲೆಗಳನ್ನು ತೆಗೆದುಹಾಕಲು ಮತ್ತು ತ್ವಚೆಯ ಟೋನ್ ಸುಧಾರಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ತ್ವಚೆಯಿಂದ ಎಣ್ಣೆ, ಧೂಳು ಮತ್ತು ಕೊಳೆಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

1. ಮೃದು ಚರ್ಮಕ್ಕಾಗಿ ಹಸಿ ಹಾಲು ಮತ್ತು ಬಾದಾಮಿ ಜೊತೆ:
ನೀವು ಮಗುವಿನ ಮೃದು ಚರ್ಮವನ್ನು ಬಯಸಿದರೆ, ಈ ಫೇಸ್ ಪ್ಯಾಕ್ ನಿಮಗಾಗಿ. ಮುಲ್ತಾನಿ ಮಿಟ್ಟಿ ಮುಖವನ್ನು ಚೆನ್ನಾಗಿ ಸ್ವಚ್ಛಗೊಳಿಸುತ್ತದೆ. ಅದೇ ಸಮಯದಲ್ಲಿ, ಬಾದಾಮಿ ಮತ್ತು ಹಸಿ ಹಾಲನ್ನು ಬೆರೆಸಿವುದರಿಂದ ಮೃದುವಾದ ತ್ವಚೆಯನ್ನು ಪಡೆಯಲು ಸಹಾಯ ಆಗುತ್ತದೆ. ಹಚ್ಚಾ ಹಾಲು ನಮ್ಮ ಮುಖದ ಮೇಲೆ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ.
ಫೇಸ್ ಪ್ಯಾಕ್ ತಯಾರಿಸುವುದು ಹೇಗೆ?:
ಮುಲ್ತಾನಿ ಮಿಟ್ಟಿಯನ್ನು ನೀರಿನಲ್ಲಿ ನೆನೆಸಿ. ಬಾದಾಮಿ ನೆನೆಸಿ ಸಿಪ್ಪೆ ತೆಗೆದು ಹಾಲಿನೊಂದಿಗೆ ಪುಡಿಮಾಡಿ, ಮುಲ್ತಾನಿ ಮಿಟ್ಟಿಗೆ ಸೇರಿಸಿ, ಪೇಸ್ಟ್ ತಯಾರಿಸಿ. ಇದನ್ನು ಮುಖ ತೊಳೆದ ನಂತರ ಮುಖಕ್ಕೆ ಹಚ್ಚಿ. ಪೇಸ್ಟ್ ಅನ್ನು 15 ನಿಮಿಷಗಳ ಕಾಲ ಅಥವಾ ಒಣಗುವವರೆಗೆ ಮುಖದ ಮೇಲೆ ಬಿಡಿ. ತಣ್ಣೀರು ಮತ್ತು ಸ್ಪಂಜಿನಿಂದ ಉಜ್ಜುವ ಮೂಲಕ ತೆಗೆಯಿರಿ.
ಗಮನಿಸಿ - ಮೃದುವಾದ ಚರ್ಮವನ್ನು ಪಡೆಯಲು ನೀವು ವಾರಕ್ಕೆ ಎರಡು ಬಾರಿ ಈ ಫೇಸ್ ಪ್ಯಾಕ್ ಅನ್ನು ಹಾಕಬಹುದು.

2. ಮೊಡವೆಗಳಿಗೆ ಬೇವಿನ ಪುಡಿ ಜೊತೆ:
ಮುಲ್ತಾನಿ ಮಿಟ್ಟಿ ಚರ್ಮದ ಕಿರುಚೀಲಗಳ ಗಾತ್ರವನ್ನು ಕಡಿಮೆ ಮಾಡಲು, ಬ್ಲ್ಯಾಕ್ಹೆಡ್ಗಳು ಮತ್ತು ವೈಟ್ಹೆಡ್ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಬೇವು ಉರಿಯೂತದ, ಉತ್ಕರ್ಷಣ ನಿರೋಧಕ ಮತ್ತು ನಂಜುನಿರೋಧಕ ಗುಣಗಳನ್ನು ಹೊಂದಿದೆ. ಈ ಪದಾರ್ಥ ಚರ್ಮದಿಂದ ಗುಳ್ಳೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿ.
ಪೇಸ್ ಪ್ಯಾಕ್ ತಯಾರಿಸುವುದು ಹೇಗೆ?:
2 ಚಮಚ ಮುಲ್ತಾನಿ ಮಿಟ್ಟಿ ಮತ್ತು ಒಂದು ಚಮಚ ಬೇವಿನ ಪುಡಿಯನ್ನು ಮಿಶ್ರಣ ಮಾಡಿ. ಇದಕ್ಕೆ ಒಂದು ಚಮಚ ರೋಸ್ ವಾಟರ್ ಹಾಗೂ ಅರ್ಧ ಚಮಚ ನಿಂಬೆ ರಸ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ, ಪೇಸ್ಟ್ ತಯಾರಿಸಿ. ಶದ್ಧ ನೀರಿನಿಂದ ತೊಳೆದ ಮುಖ ನಂತರ ಮುಖಕ್ಕೆ ಹಚ್ಚಿ. ಪೇಸ್ಟ್ ಅನ್ನು ಮುಖದ ಮೇಲೆ 20 ನಿಮಿಷಗಳ ಕಾಲ ಅಥವಾ ಒಣಗುವವರೆಗೆ ಬಿಡಿ. ತಣ್ಣೀರಿನಿಂದ ತೊಳೆಯಿರಿ.
ಗಮನಿಸಿ- ಮೊಡವೆ ಮುಕ್ತ ತ್ವಚೆ ಪಡೆಯಲು ನೀವು ವಾರಕ್ಕೆ ಎರಡು ಬಾರಿ ಈ ಫೇಸ್ ಪ್ಯಾಕ್ ಅನ್ನು ಅನ್ವಯಿಸಬಹುದು.

3. ಕಲೆಮುಕ್ತ ತ್ವಚೆಗಾಗಿ ಟೊಮಾಟೋ ಜ್ಯಾಸ್ ನೊಂದಿಗೆ :
ಟೊಮೆಟೊ ರಸ ಡೆಡ್ ಸೆಲ್ ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಇದರ ಜೊತೆಗೆ, ಟೊಮೆಟೊದಲ್ಲಿ ಇರುವ ಉತ್ಕರ್ಷಣ ನಿರೋಧಕ ಗುಣಗಳು ಮುಖವನ್ನು ಬೆಳಗಿಸಲು ಕೆಲಸ ಮಾಡುತ್ತದೆ. ಇದನ್ನು ಮುಲ್ತಾನಿ ಮಿಟ್ಟಿಯೊಂದಿಗೆ ಬೆರೆಸಿದರೆ, ಚರ್ಮಕ್ಕೆ ಹೊಳಪು ತರುವ ಜೊತೆಗೆ ಚರ್ಮದ ಕಲೆಗಳನ್ನು ತೆಗೆದುಹಾಕಲು ಇದು ಸಹಾಯ ಮಾಡುತ್ತದೆ.
ಪೇಸ್ ಪ್ಯಾಕ್ ತಯಾರಿಸುವುದು ಹೇಗೆ?:
2 ಚಮಚ ಟೊಮೆಟೊ ರಸ, 2 ಚಮಚ ಮುಲ್ತಾನಿ ಮಣ್ಣು, 1 ಚಮಚ ಶ್ರೀಗಂಧದ ಪುಡಿ, 1 ಚಮಚ ಅರಿಶಿನ ಪುಡಿಯನ್ನು ನೀರು ಸೇರಿಸಿ ಮಿಶ್ರಣ ಮಾಡಿ, ಸ್ವಲ್ಪ ಸಮಯದ ಬಳಿಕ, ತೊಳೆದ ಮುಖಕ್ಕೆ ಪೇಸ್ಟ್ ಹಚ್ಚಿ. 15 ನಿಮಿಷಗಳ ಕಾಲ ಬಿಡಿ. ನಂತರ ನೀರಿನಿಂದ ತೊಳೆಯಿರಿ. ಇದನ್ನು ವಾರಕ್ಕೆ ಎರಡು ಬಾರಿ ಅನ್ವಯಿಸಬಹುದು.
ಗಮನಿಸಿ - ಟೊಮೆಟೊ ರಸ ಎಲ್ಲರಿಗೂ ಸರಿಹೊಂದುವುದಿಲ್ಲ. ಆದ್ದರಿಂದ ಈ ಫೇಸ್ ಪ್ಯಾಕ್ ಅನ್ನು ಅನ್ವಯಿಸುವ ಮೊದಲು, ಪ್ಯಾಚ್ ಪರೀಕ್ಷೆಯನ್ನು ಮಾಡಿ.

4. ಎಣ್ಣೆ ಮುಕ್ತ ತ್ವಚೆಗಾಗಿ ಶ್ರೀಗಂಧದ ಜೊತೆ:
ನೀವು ತೈಲ ಮುಕ್ತ ತ್ವಚೆಯನ್ನ ಬಯಸಿದರೆ, ಈ ಫೇಸ್ ಪ್ಯಾಕ್ ಅನ್ನು ಬಳಸಬಹುದು. ಈ ಫೇಸ್ ಪ್ಯಾಕ್ ನಿಂದ ಚರ್ಮದಿಂದ ಬಿಡುಗಡೆಯಾಗುವ ಹೆಚ್ಚುವರಿ ಎಣ್ಣೆಯನ್ನು ನಿಯಂತ್ರಿಸಬಹುದು.
ಫೇಸ್ ಪ್ಯಾಕ್ ತಯಾರಿಸುವುದು ಹೇಗೆ?:
1 ಚಮಚ ಮುಲ್ತಾನಿ ಮಿಟ್ಟಿ, 1 ಚಮಚ ಶ್ರೀಗಂಧದ ಪುಡಿ, 2 ಚಮಚ ಹಸಿ ಹಾಲಿಗೆ ನೀರನ್ನು ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ, ಪೇಸ್ಟ್ ತಯಾರಿಸಿ. ಮುಖ ತೊಳೆದ ನಂತರ ಈ ಮಿಶ್ರಣ ಮುಖಕ್ಕೆ ಹಚ್ಚಿ, 20 ನಿಮಿಷಗಳ ಕಾಲ ಬಿಡಿ. ಒಣಗಿದ ನಂತರ, ತಣ್ಣೀರಿನಿಂದ ಮುಖವನ್ನು ತೊಳೆಯಿರಿ.
ಗಮನಿಸಿ- ತೈಲ ಮುಕ್ತ ಚರ್ಮವನ್ನು ಪಡೆಯಲು ನೀವು ವಾರಕ್ಕೆ ಎರಡು ಬಾರಿ ಈ ಫೇಸ್ ಪ್ಯಾಕ್ ಅನ್ನು ಅನ್ವಯಿಸಬಹುದು.
(Kannada Copy of Boldsky Kannada)
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 10:35 pm
Mangalore Correspondent
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm