ಬ್ರೇಕಿಂಗ್ ನ್ಯೂಸ್
01-06-21 12:00 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಬಂದಾಗ ಒಂದು ಸಂಕಟ ಎದುರಾದರೆ ಅದರಿಂದ ಗುಣಮುಖರಾಗಿ ನಿಟ್ಟುಸಿರು ಬಿಡುವಾಗ ಬೇರೆ-ಬೇರೆ ಕಾಯಿಲೆಗಳು ಎದುರಾಗುತ್ತಿರುವುದರಿಂದ ಜನರಲ್ಲಿ ಭಯ, ತೊಂದರೆ ಕೊರೊನಾದಿಂದ ಗುಣಮುಖರಾದ ಮೇಲೂ ಮುಂದುವರೆಯುತ್ತಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಬ್ಲ್ಯಾಕ್ ಫಂಗಸ್ ರೀತಿಯ ಸಮಸ್ಯೆ ಕಂಡು ಬಂದಿತ್ತು. ಇದೀಗ ಕೋವಿಡ್ 19 ಬಳಿಕ ಹೃದಯಾಘಾತ, ಪಾರ್ಶ್ವವಾಯು ಉಂಟಾಗುವ ಅಪಾಯವು ಇದೆ ಎಂದು ತಿಳಿದು ಬಂದಿದೆ.

ಗುಣಮುಖರಾದವರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಮಸ್ಯೆ
ಮುಂಬಯಿಯ ಕಮೋಥೆ ನಿವಾಸಿ 36 ವರ್ಷದ ಚಂದ್ರ ಶೇಖರ ರೆಡ್ಡಿಗೆ ಮೊದಲಿಗೆ ಕೊರೊನಾ ಬಂತು, ರೋಗ ಲಕ್ಷಣಗಳೇನು ತೀವ್ರವಾಗಿರಲಿಲ್ಲ, ಕೋವಿಡ್ 19ನಿಂದ ಬೇಗನೆ ಗುಣಮುಖರಾದರು. ಅದಾದ ಬಳಿಕ ಅವರಿಗೆ ಸ್ಟ್ರೋಕ್ ಉಂಟಾಗಿ ಈಗ ಕಾಲುಗಳು ಸ್ವಾದೀನ ಕಳೆದುಕೊಂಡಿದೆ. ಅವರು ಕೂರಲು ತಿಂಗಳು ಹಿಡಿಯಿತು, ಸಂಪೂರ್ಣ ಗುಣಮುಖರಾಗಲು 6 ತಿಂಗಳು ಬೇಕಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ವೈದ್ಯರು ಇಂಥ ಪ್ರಕರಣಗಳು ಕಂಡು ಬರುತ್ತಿರುವುದಾಗಿ ಹೇಳುತ್ತಿದ್ದಾರೆ. ಕೆಲವರು ಕೋವಿಡ್ 19ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಹೋಗಿ 2 ತಿಂಗಳು ಆದ ಬಳಿಕ ಹೃದಯಾಘಾತ, ಪಾರ್ಶ್ವವಾಯು ಈ ರೀತಿಯ ಸಮಸ್ಯೆ ಕಂಡು ಬರುತ್ತಿದೆ.

ವೈದ್ಯರ ಅಭಿಪ್ರಾಯವೇನು?
ರೆಡ್ಡಿಯವರಿಗೆ ಚಿಕಿತ್ಸೆ ನೀಡಿದ ಮೆದುಳು ಹಾಗೂ ಬೆನ್ನು ಮೂಳೆಯ ಸರ್ಜನ್ ಆಗಿರುವ ಡಾ. ವಿಶ್ವನಾಥ್ ಅಯ್ಯರ್ ಈ ಏಪ್ರಿಲ್ ತಿಂಗಳಿನಲ್ಲಿ ಇಂಥ 4 ಕೇಸ್ಗಳು ಬಂದಿದ್ದೆವು ಅಂದಿದ್ದಾರೆ. ರೋಗಿಯಲ್ಲಿ ಉರಿಯೂತ ಉಂಟಾಗಿ ರಕ್ತ ಹೆಪ್ಪುಗಟ್ಟುವುದರಿಂದ ಸ್ಟ್ರೋಕ್ ಉಂಟಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
KEM ಆಸ್ಪತ್ರೆಯ ನ್ಯೂರೋಲಾಜಿಸ್ಟ್ ಡಾ. ನಿತಿನ್ ಡಾಂಗೆ ಕೋವಿಡ್ 19 ಗುಣಮುಖರಾದವರಲ್ಲಿ 20ಕ್ಕೂ ಹೆಚ್ಚು ಜನರು ಪಾರ್ಶ್ವವಾಯು, ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ. ತುಂಬಾ ಚಿಕ್ಕ ಪ್ರಾಯದವರಲ್ಲೂ ಈ ರೀತಿಯ ಸಮಸ್ಯೆ ಕಂಡು ಬರುತ್ತಿದೆ.
ಥಾಣೆಯ ಜ್ಯುಪಿಟರ್ ಆಸ್ಪತ್ರೆಯ ಡಾ. ಆಶಿಷ್ ನಬರ್ ಅವರು ತಮ್ಮ ಕುಟುಂಬದಲ್ಲಿ ಈ ರೀತಿ ಒಬ್ಬರನ್ನು ಕಳೆದುಕೊಂಡಿದ್ದಾರೆ. ಅವರ 50 ವರ್ಷ ಪ್ರಾಯದ ಸಂಬಂಧಿ ಕೋವಿಡ್ 19 ನಿಂದ ಗುಣಮುಖರಾಗಿ 5-6 ದಿನಗಳ ಬಳಿಕ ಪಾರ್ಶ್ವವಾಯು ಉಂಟಾಯಿತು. ಅವರ ಅಪಧಮಿನಿಯಲ್ಲಿ ರಕ್ತ ಹೆಪ್ಪುಗಟ್ಟಿರುವುದು ಎಂಆರ್ಐ ಸ್ಕ್ಯಾನಿಂಗ್ನಲ್ಲಿ ತಿಳಿದು ಬಂತು. ಸರ್ಜರಿ ಮಾಡಲಾಯಿತು, ಆದರೆ ಅವರನ್ನು ವೆಂಟಿಲೇಟರ್ನಲ್ಲಿ ಹಾಕಬೇಕಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಕೋವಿಡ್ 19ನಿದ ಚೇತರಿಸಿ ಬಳಿಕವೂ ಆರೋಗ್ಯ ಜೋಪಾನ
ಕೊರೊನಾದಿಂದ ಗುಣಮುಖರಾದೆವು ಎಂದು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬೇಡಿ. ವೈದ್ಯರು ಸೂಚಿಸಿದ ವ್ಯಾಯಾಮ ಮಾಡಿ. ಉಸಿರಾಟದ ವ್ಯಾಯಾಮವನ್ನು ಕನಿಷ್ಠ ಆರು ತಿಂಗಳು ಕಡ್ಡಾಯವಾಗಿ ಮಾಡಿ, ನಂತರವೂ ಮಾಡಿದರೆ ಮತ್ತಷ್ಟು ಒಳ್ಳೆಯದು. ಆರೋಗ್ಯಕರ ಆಹಾರ ಸೇವಿಸಿ, ಮಾನಸಿಕ ಒತ್ತಡ ಕಡಿಮೆ ಮಾಡಿ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm