ಬ್ರೇಕಿಂಗ್ ನ್ಯೂಸ್
01-06-21 12:00 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಬಂದಾಗ ಒಂದು ಸಂಕಟ ಎದುರಾದರೆ ಅದರಿಂದ ಗುಣಮುಖರಾಗಿ ನಿಟ್ಟುಸಿರು ಬಿಡುವಾಗ ಬೇರೆ-ಬೇರೆ ಕಾಯಿಲೆಗಳು ಎದುರಾಗುತ್ತಿರುವುದರಿಂದ ಜನರಲ್ಲಿ ಭಯ, ತೊಂದರೆ ಕೊರೊನಾದಿಂದ ಗುಣಮುಖರಾದ ಮೇಲೂ ಮುಂದುವರೆಯುತ್ತಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಬ್ಲ್ಯಾಕ್ ಫಂಗಸ್ ರೀತಿಯ ಸಮಸ್ಯೆ ಕಂಡು ಬಂದಿತ್ತು. ಇದೀಗ ಕೋವಿಡ್ 19 ಬಳಿಕ ಹೃದಯಾಘಾತ, ಪಾರ್ಶ್ವವಾಯು ಉಂಟಾಗುವ ಅಪಾಯವು ಇದೆ ಎಂದು ತಿಳಿದು ಬಂದಿದೆ.
ಗುಣಮುಖರಾದವರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಮಸ್ಯೆ
ಮುಂಬಯಿಯ ಕಮೋಥೆ ನಿವಾಸಿ 36 ವರ್ಷದ ಚಂದ್ರ ಶೇಖರ ರೆಡ್ಡಿಗೆ ಮೊದಲಿಗೆ ಕೊರೊನಾ ಬಂತು, ರೋಗ ಲಕ್ಷಣಗಳೇನು ತೀವ್ರವಾಗಿರಲಿಲ್ಲ, ಕೋವಿಡ್ 19ನಿಂದ ಬೇಗನೆ ಗುಣಮುಖರಾದರು. ಅದಾದ ಬಳಿಕ ಅವರಿಗೆ ಸ್ಟ್ರೋಕ್ ಉಂಟಾಗಿ ಈಗ ಕಾಲುಗಳು ಸ್ವಾದೀನ ಕಳೆದುಕೊಂಡಿದೆ. ಅವರು ಕೂರಲು ತಿಂಗಳು ಹಿಡಿಯಿತು, ಸಂಪೂರ್ಣ ಗುಣಮುಖರಾಗಲು 6 ತಿಂಗಳು ಬೇಕಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ವೈದ್ಯರು ಇಂಥ ಪ್ರಕರಣಗಳು ಕಂಡು ಬರುತ್ತಿರುವುದಾಗಿ ಹೇಳುತ್ತಿದ್ದಾರೆ. ಕೆಲವರು ಕೋವಿಡ್ 19ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಹೋಗಿ 2 ತಿಂಗಳು ಆದ ಬಳಿಕ ಹೃದಯಾಘಾತ, ಪಾರ್ಶ್ವವಾಯು ಈ ರೀತಿಯ ಸಮಸ್ಯೆ ಕಂಡು ಬರುತ್ತಿದೆ.
ವೈದ್ಯರ ಅಭಿಪ್ರಾಯವೇನು?
ರೆಡ್ಡಿಯವರಿಗೆ ಚಿಕಿತ್ಸೆ ನೀಡಿದ ಮೆದುಳು ಹಾಗೂ ಬೆನ್ನು ಮೂಳೆಯ ಸರ್ಜನ್ ಆಗಿರುವ ಡಾ. ವಿಶ್ವನಾಥ್ ಅಯ್ಯರ್ ಈ ಏಪ್ರಿಲ್ ತಿಂಗಳಿನಲ್ಲಿ ಇಂಥ 4 ಕೇಸ್ಗಳು ಬಂದಿದ್ದೆವು ಅಂದಿದ್ದಾರೆ. ರೋಗಿಯಲ್ಲಿ ಉರಿಯೂತ ಉಂಟಾಗಿ ರಕ್ತ ಹೆಪ್ಪುಗಟ್ಟುವುದರಿಂದ ಸ್ಟ್ರೋಕ್ ಉಂಟಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
KEM ಆಸ್ಪತ್ರೆಯ ನ್ಯೂರೋಲಾಜಿಸ್ಟ್ ಡಾ. ನಿತಿನ್ ಡಾಂಗೆ ಕೋವಿಡ್ 19 ಗುಣಮುಖರಾದವರಲ್ಲಿ 20ಕ್ಕೂ ಹೆಚ್ಚು ಜನರು ಪಾರ್ಶ್ವವಾಯು, ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ. ತುಂಬಾ ಚಿಕ್ಕ ಪ್ರಾಯದವರಲ್ಲೂ ಈ ರೀತಿಯ ಸಮಸ್ಯೆ ಕಂಡು ಬರುತ್ತಿದೆ.
ಥಾಣೆಯ ಜ್ಯುಪಿಟರ್ ಆಸ್ಪತ್ರೆಯ ಡಾ. ಆಶಿಷ್ ನಬರ್ ಅವರು ತಮ್ಮ ಕುಟುಂಬದಲ್ಲಿ ಈ ರೀತಿ ಒಬ್ಬರನ್ನು ಕಳೆದುಕೊಂಡಿದ್ದಾರೆ. ಅವರ 50 ವರ್ಷ ಪ್ರಾಯದ ಸಂಬಂಧಿ ಕೋವಿಡ್ 19 ನಿಂದ ಗುಣಮುಖರಾಗಿ 5-6 ದಿನಗಳ ಬಳಿಕ ಪಾರ್ಶ್ವವಾಯು ಉಂಟಾಯಿತು. ಅವರ ಅಪಧಮಿನಿಯಲ್ಲಿ ರಕ್ತ ಹೆಪ್ಪುಗಟ್ಟಿರುವುದು ಎಂಆರ್ಐ ಸ್ಕ್ಯಾನಿಂಗ್ನಲ್ಲಿ ತಿಳಿದು ಬಂತು. ಸರ್ಜರಿ ಮಾಡಲಾಯಿತು, ಆದರೆ ಅವರನ್ನು ವೆಂಟಿಲೇಟರ್ನಲ್ಲಿ ಹಾಕಬೇಕಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.
ಕೋವಿಡ್ 19ನಿದ ಚೇತರಿಸಿ ಬಳಿಕವೂ ಆರೋಗ್ಯ ಜೋಪಾನ
ಕೊರೊನಾದಿಂದ ಗುಣಮುಖರಾದೆವು ಎಂದು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬೇಡಿ. ವೈದ್ಯರು ಸೂಚಿಸಿದ ವ್ಯಾಯಾಮ ಮಾಡಿ. ಉಸಿರಾಟದ ವ್ಯಾಯಾಮವನ್ನು ಕನಿಷ್ಠ ಆರು ತಿಂಗಳು ಕಡ್ಡಾಯವಾಗಿ ಮಾಡಿ, ನಂತರವೂ ಮಾಡಿದರೆ ಮತ್ತಷ್ಟು ಒಳ್ಳೆಯದು. ಆರೋಗ್ಯಕರ ಆಹಾರ ಸೇವಿಸಿ, ಮಾನಸಿಕ ಒತ್ತಡ ಕಡಿಮೆ ಮಾಡಿ.
(Kannada Copy of Boldsky Kannada)
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm