ಬ್ರೇಕಿಂಗ್ ನ್ಯೂಸ್
05-06-21 12:16 pm Reena TK, BoldSky Kannada ಡಾಕ್ಟರ್ಸ್ ನೋಟ್
ಮೇ. 5 ವಿಶ್ವ ಪರಿಸರ ದಿನ. ಎಲ್ಲಾ ಬಗೆಯ ಮಾಲಿನ್ಯದಿಂದ ಪರಿಸರವನ್ನು ರಕ್ಷಿಸುವುದು ಇಂದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಆಶಯದೊಂದಿಗೆ ಪ್ರತೀ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡುವುದರ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುವುದು.
ಈಗ ನಮ್ಮ ಪರಿಸರ ಹೇಗಿದೆ, ಇದನ್ನು ರಕ್ಷಣೆ ಮಾಡದಿದ್ದರೆ ಮುಂದೇನು ಆಗುವುದು ಎಂಬ ಕಟು ವಾಸ್ತವ ಎಲ್ಲರಿಗೂ ಗೊತ್ತು. ಆದರೂ ಅಭಿವೃದ್ಧಿಯ ಹೆಸರಿನಲ್ಲಿ ಜಾಣ ಕುರುಡರಾಗಿ ವರ್ತಿಸುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಎಷ್ಟೋ ಮರ ಗಿಡಗಳನ್ನು ಕಡೆಯಲಾಗಿದೆ, ನದಿ ನೀರುಗಳ ಕಲುಷಿತಗೊಂಡಿವೆ, ವಾಹನಗಳು, ಕೈಗಾರಿಕೆಗಳಿಂದಾಗಿ ಗಾಳಿ ಕಲುಷಿತಗೊಂಡಿದೆ.
ಪರಿಸರ ಕಲುಷಿತವಾದರೆ ಏನೆಲ್ಲಾ ಸಮಸ್ಯೆ ಎದುರಿಸಬೇಕಾದಿತು ಈಗಾಗಲೇ ಎಲ್ಲರ ಅನುಭವಕ್ಕೆ ಬರಲಾರಂಭಿಸಿದೆ. ಮರಗಳು ಕೊಡುವ ಶುದ್ಧ ಆಮ್ಲಜನಕದ ಕೊರತೆಯಾದರೆ ಉಳಿಗಾಲವಿಲ್ಲ ಎಂಬುವುದರ ಅರಿವೂ ಆಗಿದೆ, ಆದ್ದರಿಂದ ಪರಿಸರದ ಬಗ್ಗೆ ಈ ಹಿಂದೆಗಿಂತಲೂ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ.
ಇತಿಹಾಸ
ಪರಿಸರದ ಬಗ್ಗೆ ಜಾಗೃತಿ ಮೂಡಿಸಲು 1974ರಲ್ಲಿ ಅಮೆರಿಕದ ಸ್ಲೋಕಾನೆ ನಗರದಲ್ಲಿ ಈ ದಿನವನ್ನು ಮೊದಲಿಗೆ ಆಚರಿಸಲಾಯಿತು. ಅಲ್ಲಿಂದ ಪ್ರತೀವರ್ಷ ಜೂನ್ 5ನ್ನು ವಿಶ್ವ ಪರಿಸರ ದಿನವೆಂದು ಆಚರಿಸಲಾಗುತ್ತಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಒಂದು ಜಾಗತಿಕ ವೇದಿಕೆಯೂ ಆಗಿದೆ. ಪ್ರತೀ ವರ್ಷ 143ಕ್ಕೂ ಅಧಿಕ ದೇಶಗಳು ಇದರಲ್ಲಿ ಭಾಗವಹಿಸುವುದು. "ನಮಗೆ ಇರುವುದೊಂದೇ ಭೂಮಿ, ಅದರ ರಕ್ಷಣೆಯು ನಮ್ಮೆಲ್ಲರ ಹೊಣೆಗಾರಿಕೆ" ಎಂಬುವುದು ಇದರ ಇದರ ಆಶಯವಾಗಿದೆ.
2021ರ ಥೀಮ್
ಪ್ರತೀ ವರ್ಷ ಒಂದೊಂದು ಥೀಮ್ನಲ್ಲಿ ಈ ದಿನವನ್ನು ಆಚರಿಸಲಾಗುವುದು. ಈ ವರ್ಷದ ವಿಷಯವೆಂದರೆ 'ಪರಿಸರ ವ್ಯವಸ್ಥೆ ಪುನಃಸ್ಥಾಪನೆ" ಎಂಬುವುದಾಗಿದೆ.
ಈ ದಿನದ ಮಹತ್ವ
ಸಕಲ ಜೀವರಾಶಿಯ ದೃಷ್ಟಿಯಿಂದ ಪರಿಸರ ರಕ್ಷಣೆ ಆದ್ಯ ಕರ್ತವ್ಯವಾಗಿದೆ. ಪರಿಸರಕ್ಕೆ ಮುಖ್ಯವಾಗಿ ಹಾನಿಯಾಗುತ್ತಿರುವುದೇ ಮನುಷ್ಯರಿಂದ, ಮನುಷ್ಯ ಆ ತಪ್ಪನ್ನು ತಿದ್ದಿಕೊಳ್ಳಬೇಕಾಗಿದೆ. ಪರಿಸರ ರಕ್ಷಣೆಗೆ ಮನುಷ್ಯ ತುಂಬಾ ಶ್ರಮಿಸಬೇಕಾಗಿಲ್ಲ, ಅನಗ್ಯತವಾಗಿ ಅದನ್ನು ಹಾಳು ಮಾಡದಿರುವುದು ಹಾಗೂ ಪ್ರತೀಯೊಬ್ಬರು ಒಂದೊಂದು ಗಿಡ ನೆಟ್ಟು ಬೆಳೆಸಿದರೆ ಸಾಕು ಪರಿಸರ ಸಮೃದ್ಧಿಯಾಗಿರುತ್ತದೆ.
ಅನೇಕ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಭೂಮಿಯನ್ನು ಸೇರುತ್ತಿವೆ, ಇವೆಲ್ಲಾ ಭೂಮಿಗೆ ಮಾರಕವಾಗಿದೆ, ಈ ಬಗ್ಗೆ ಪರಿಣಾಮಕಾರಿಯಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕಾಗಿದೆ, ಅನಗ್ಯತ ತ್ಯಾಜ್ಯ ನದಿಗಳಿಗೆ ಸೇರದಂತೆ ಎಚ್ಚರವಹಿಸಬೇಕಾಗಿದೆ, ಆದಷ್ಟು ವಾಯು ಮಾಲಿನ್ಯ ಕಡಿಮೆ ಮಾಡಬೇಕು. ಗಿಡ ಮರಗಳು ಹೆಚ್ಚಾದರೆ ವಾಯು ಶುದ್ಧವಾಗುವುದು.
ಕೋವಿಡ್ 19ನಿಂದ ಹೆಚ್ಚಾಗಿರುವ ಪ್ಲಾಸ್ಟಿಕ್ ಬಳಕೆ
2018ರಲ್ಲಿ ಪ್ಲಾಸ್ಟಿಕ್ ಮಾಲಿನ್ಯ ನಿವಾರಿಸಿ ಎಂಬ ಧ್ಯೇಯವನ್ನು ಹೊಂದಿತ್ತು... ಜನರು ಕೂಡ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿದ್ದರು.. ತರಕಾರಿ ತರಲು, ಸಾಮಾನುಗಳನ್ನು ತರಲು ಕೈ ಚೀಲ ಹಿಡಿದು ಹೋಗುತ್ತಿದ್ದರು. ಇದೀಗ ಕೋವಿಡ್ 19 ಬಂದಾಗಿನಿಂದ ಅಗ್ಯತವಾಗಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದೆ. ಪ್ಲಾಸ್ಟಿಕ್ ಫೇಸ್ ಶೀಲ್ಡ್ ಬಳಸುವುದು, ಅಲ್ಲದೆ ಮಾಸ್ಕ್, ಗ್ಲೌಸ್ ಅಂಥ ತ್ಯಾಜ್ಯ ಕೂಡ ಹೆಚ್ಚಾಗಿದೆ ಸೂಕ್ತವಾದ ಪರ್ಯಾಯ ಮಾರ್ಗಗಳನ್ನು ಕಂಡು ಕೊಳ್ಳುವ ಮೂಲಕ ಈ ಭೂಮಿಯನ್ನು ರಕ್ಷಣೆ ಮಾಡಬೇಕಾಗಿದೆ. ಪ್ರತಿಯೊಬ್ಬರು ನಮ್ಮ ಸುತ್ತ-ಮುತ್ತ ಗಿಡ ನೆಟ್ಟು ಬೆಳೆಸೋಣ... ಆಗ ಇಡೀ ನಾಡೇ ಹಸಿರಾಗಿ ಇರುವುದು.
(Kannada Copy of Boldsky Kannada)
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm