ಬ್ರೇಕಿಂಗ್ ನ್ಯೂಸ್
29-06-21 11:24 am Shreeraksha, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜೂನ್ 29: ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡುವ ಸಂಬಂಧ ಆರೋಗ್ಯ ಸಚಿವಾಲಯ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಗರ್ಭಿಣಿಯರಿಗೆ ಕೊರೊನಾ ಲಸಿಕೆಗಳನ್ನು ನೀಡಬಹುದು. ಅವರ ಆರೋಗ್ಯ ದೃಷ್ಟಿಯಿಂದ ಲಸಿಕೆ ನೀಡುವುದು ಅವಶ್ಯಕ ಕೂಡ ಎಂದು ಎರಡು ದಿನಗಳ ಹಿಂದೆ ಸಚಿವಾಲಯ ಸ್ಪಷ್ಟನೆ ನೀಡಿತ್ತು.
ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಗರ್ಭಿಣಿಯರು ಕೋವಿನ್ ಪೋರ್ಟಲ್ ಮೂಲಕ ಹೆಸರು ನೋಂದಾಯಿಸಬಹುದು ಅಥವಾ ನೇರ ಕೊರೊನಾ ಲಸಿಕೆ ಕೇಂದ್ರಗಳಿಗೆ ಹೋಗಿ ಅಲ್ಲಿ ಹೆಸರು ನೋಂದಾಯಿಸಿ ಲಸಿಕೆ ಪಡೆಯಬಹುದು ಎಂದು ಹೇಳಿದೆ. ಮಾರ್ಗಸೂಚಿಯಲ್ಲಿ ಇನ್ನಷ್ಟು ಅಂಶಗಳ ಕುರಿತು ವಿವರಗಳನ್ನು ಹಂಚಿಕೊಂಡಿದೆ. ಮಾರ್ಗಸೂಚಿಯಲ್ಲೇನಿದೆ? ಮುಂದೆ ಓದಿ...

ಮುನ್ನೆಚ್ಚರಿಕೆಯಿಂದ ಗರ್ಭಿಣಿಯರು ಲಸಿಕೆ ಪಡೆಯಬೇಕು
ಬಹುಪಾಲು ಗರ್ಭಿಣಿಯರಿಗೆ ಲಕ್ಷಣರಹಿತ ಸೋಂಕು ಕಾಣಿಸಿಕೊಳ್ಳಬಹುದು ಅಥವಾ ಸಣ್ಣ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು ಗೋಚರಿಸಬಹುದು. ನಿರ್ಲಕ್ಷಿಸಿದರೆ ಮಗುವಿನ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ಮುನ್ನೆಚ್ಚರಿಕೆ ವಹಿಸಿ ಲಸಿಕೆ ಪಡೆದುಕೊಳ್ಳುವುದು ಅವಶ್ಯಕ.

80% ಗರ್ಭಿಣಿಯರು ಗುಣಮುಖರಾಗಿದ್ದಾರೆ
ಇದುವರೆಗಿನ ಪ್ರಕರಣಗಳನ್ನು ಗಮನಿಸಿದಾಗ, ಸೋಂಕಿಗೆ ತುತ್ತಾದ ಗರ್ಭಿಣಿಯರಲ್ಲಿ 80% ಮಹಿಳೆಯರಿಗೆ ತೀವ್ರತರ ಸಮಸ್ಯೆಗಳು ಕಂಡುಬಂದಿಲ್ಲ. ಆಸ್ಪತ್ರೆಗೆ ದಾಖಲಾಗದೇ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ಕೆಲವು ಪ್ರಕರಣಗಳು ಗಂಭೀರ ಮಟ್ಟ ತಲುಪಿವೆ. ಹೀಗಾಗಿ ಆರೋಗ್ಯದಲ್ಲಿ ಅಲ್ಪ ಏರುಪೇರು ಕಂಡರೂ ಆಸ್ಪತ್ರೆಗೆ ದಾಖಲಾಗುವುದು ಅವಶ್ಯಕವಾಗುತ್ತದೆ. ಅಧಿಕ ರಕ್ತದೊತ್ತಡ, ಮಧುಮೇಹ, 35 ವರ್ಷ ಮೇಲ್ಪಟ್ಟವರು ಜಾಗೃತವಾಗಿರಬೇಕು.

ಮಕ್ಕಳು ಆರೋಗ್ಯಕರವಾಗಿ
ಜನಿಸುತ್ತವೆ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಜನಿಸಿದ ಶೇ 96ಕ್ಕಿಂತ ಹೆಚ್ಚು ಮಕ್ಕಳು ಆರೋಗ್ಯಕರವಾಗಿವೆ. ಕೆಲವೇ ಕೆಲವು ಪ್ರಕರಣಗಳಲ್ಲಿ ಅವಧಿಗೆ ಮುನ್ನ ಮಗು ಜನಿಸಿದ ವರದಿಯಾಗಿದೆ. ಮಗು ಸಾವನ್ನಪ್ಪಿರುವ ಪ್ರಮಾಣ ತೀರ ಕಡಿಮೆಯಿದೆ.
ಯಾರು ಹೆಚ್ಚು ಜಾಗ್ರತೆಯಿಂದರಬೇಕು?
35 ವರ್ಷ ಮೇಲ್ಪಟ್ಟ ಗರ್ಭಿಣಿಯರು, ಗರ್ಭ ಧರಿಸುವ ಮುನ್ನ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತ ಹೆಪ್ಪುಗಟ್ಟುವ ಸಮಸ್ಯೆ ಇತ್ಯಾದಿಯಿಂದ ಬಳಲುತ್ತಿದ್ದವರಿಗೆ ಕೊರೊನಾ ಸೋಂಕಿನ ಸಾಧ್ಯತೆ ಇರುತ್ತದೆ.

ಲಸಿಕೆ ಪಡೆದ ನಂತರ ಅನಾರೋಗ್ಯ ಸಹಜ
ಕೊರೊನಾ ಲಸಿಕೆ ಪಡೆದುಕೊಂಡ ನಂತರ ಗರ್ಭಿಣಿಯರಿಗೆ ಮೂರು ದಿನಗಳ ಕಾಲ ಅನಾರೋಗ್ಯ ಉಂಟಾಗಬಹುದು. ಜ್ವರ, ನೋವು, ಸುಸ್ತು ಕಾಣಿಸಬಹುದು. ಆದರೆ ಕೊರೊನಾ ಲಸಿಕೆ ಮಗುವಿನ ಮೇಲೆ ಅಡ್ಡ ಪರಿಣಾಮ ಬೀರುತ್ತದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ.
ಲಸಿಕೆ ಪಡೆದ ನಂತರವೂ ಎಚ್ಚರಿಕೆ ತಪ್ಪಬಾರದು
ಲಸಿಕೆ ಪಡೆದ ನಂತರ ಗರ್ಭಿಣಿಯರು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಎರಡು ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆಯುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಹೆಚ್ಚು ಜನರಿದ್ದಲ್ಲಿ ಹೋಗದೇ ಇರುವುದು ಅತ್ಯವಶ್ಯಕವಾಗಿದೆ. ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm