ಬ್ರೇಕಿಂಗ್ ನ್ಯೂಸ್
01-07-21 02:22 pm Sumalatha N, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ ಲಸಿಕಾ ಅಭಿವೃದ್ಧಿ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಸೋಮವಾರ ಕೇಂದ್ರ ಔಷಧ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು.

ಆದರೆ ಸದ್ಯಕ್ಕೆ ಈ ಲಸಿಕೆಗೆ ಬೇರೆ ಯಾವುದೇ ದೇಶದಲ್ಲಿ ಅನುಮೋದನೆ ನೀಡಲಾಗಿಲ್ಲ. ಹೀಗಾಗಿ ಮಕ್ಕಳ ಮೇಲೆ ಪ್ರಯೋಗ ಸಲ್ಲದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರು ಹೇಳಿದ್ದಾರೆ.
ಮಕ್ಕಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪರಿಗಣಿಸಲು ಕಂಪನಿಯು ವಯಸ್ಕರಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗದ ಕೋವೊವ್ಯಾಕ್ಸ್ ಸುರಕ್ಷತೆ ಹಾಗೂ ಲಸಿಕೆ ಪರಿಣಾಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಸಂಸ್ಥೆಗೆ ಶಿಫಾರಸ್ಸು ಮಾಡಿದೆ. ತಜ್ಞರ ಸಮಿತಿಯ ಈ ಶಿಫಾರಸ್ಸುಗಳನ್ನು ಡಿಸಿಜಿಐ ಅನುಮೋದಿಸಿರುವುದಾಗಿ ತಿಳಿದುಬಂದಿದೆ.

ಅಮೆರಿಕ ಮೂಲದ ಲಸಿಕೆ ತಯಾರಕ ನೋವಾವ್ಯಾಕ್ಸ್ ಇಂಕ್, ಕಡಿಮೆ, ಮಧ್ಯಮ ಆದಾಯದ ದೇಶಗಳಲ್ಲಿ ಹಾಗೂ ಭಾರತದಲ್ಲಿ NVX-CoV2373 ಅಭಿವೃದ್ಧಿ ಹಾಗೂ ವಾಣಿಜ್ಯೀಕರಣಕ್ಕಾಗಿ ಸೆರಂ ಇನ್ಸ್ಟಿಟ್ಯೂಟ್ ಜೊತೆ ಪರವಾನಗಿ ಒಪ್ಪಂದ ಮಾಡಿಕೊಂಡಿತ್ತು.
ಕೋವೊವ್ಯಾಕ್ಸ್ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಮಾರ್ಚ್ನಲ್ಲಿ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ವೇಳೆಗೆ ವಯಸ್ಕರಿಗೆ ಈ ಲಸಿಕೆಯನ್ನು ಬಿಡುಗಡೆ ಮಾಡಲು ಸೆರಂ ಸಂಸ್ಥೆ ಯೋಜನೆ ರೂಪಿಸಿದೆ.
(Kannada Copy of One India Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm