ಬ್ರೇಕಿಂಗ್ ನ್ಯೂಸ್
01-07-21 02:22 pm Sumalatha N, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ ಲಸಿಕಾ ಅಭಿವೃದ್ಧಿ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಸೋಮವಾರ ಕೇಂದ್ರ ಔಷಧ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು.

ಆದರೆ ಸದ್ಯಕ್ಕೆ ಈ ಲಸಿಕೆಗೆ ಬೇರೆ ಯಾವುದೇ ದೇಶದಲ್ಲಿ ಅನುಮೋದನೆ ನೀಡಲಾಗಿಲ್ಲ. ಹೀಗಾಗಿ ಮಕ್ಕಳ ಮೇಲೆ ಪ್ರಯೋಗ ಸಲ್ಲದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರು ಹೇಳಿದ್ದಾರೆ.
ಮಕ್ಕಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪರಿಗಣಿಸಲು ಕಂಪನಿಯು ವಯಸ್ಕರಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗದ ಕೋವೊವ್ಯಾಕ್ಸ್ ಸುರಕ್ಷತೆ ಹಾಗೂ ಲಸಿಕೆ ಪರಿಣಾಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಸಂಸ್ಥೆಗೆ ಶಿಫಾರಸ್ಸು ಮಾಡಿದೆ. ತಜ್ಞರ ಸಮಿತಿಯ ಈ ಶಿಫಾರಸ್ಸುಗಳನ್ನು ಡಿಸಿಜಿಐ ಅನುಮೋದಿಸಿರುವುದಾಗಿ ತಿಳಿದುಬಂದಿದೆ.

ಅಮೆರಿಕ ಮೂಲದ ಲಸಿಕೆ ತಯಾರಕ ನೋವಾವ್ಯಾಕ್ಸ್ ಇಂಕ್, ಕಡಿಮೆ, ಮಧ್ಯಮ ಆದಾಯದ ದೇಶಗಳಲ್ಲಿ ಹಾಗೂ ಭಾರತದಲ್ಲಿ NVX-CoV2373 ಅಭಿವೃದ್ಧಿ ಹಾಗೂ ವಾಣಿಜ್ಯೀಕರಣಕ್ಕಾಗಿ ಸೆರಂ ಇನ್ಸ್ಟಿಟ್ಯೂಟ್ ಜೊತೆ ಪರವಾನಗಿ ಒಪ್ಪಂದ ಮಾಡಿಕೊಂಡಿತ್ತು.
ಕೋವೊವ್ಯಾಕ್ಸ್ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಮಾರ್ಚ್ನಲ್ಲಿ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ವೇಳೆಗೆ ವಯಸ್ಕರಿಗೆ ಈ ಲಸಿಕೆಯನ್ನು ಬಿಡುಗಡೆ ಮಾಡಲು ಸೆರಂ ಸಂಸ್ಥೆ ಯೋಜನೆ ರೂಪಿಸಿದೆ.
(Kannada Copy of One India Kannada)
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm