ಬ್ರೇಕಿಂಗ್ ನ್ಯೂಸ್
01-07-21 02:22 pm Sumalatha N, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ ಲಸಿಕಾ ಅಭಿವೃದ್ಧಿ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಸೋಮವಾರ ಕೇಂದ್ರ ಔಷಧ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು.

ಆದರೆ ಸದ್ಯಕ್ಕೆ ಈ ಲಸಿಕೆಗೆ ಬೇರೆ ಯಾವುದೇ ದೇಶದಲ್ಲಿ ಅನುಮೋದನೆ ನೀಡಲಾಗಿಲ್ಲ. ಹೀಗಾಗಿ ಮಕ್ಕಳ ಮೇಲೆ ಪ್ರಯೋಗ ಸಲ್ಲದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರು ಹೇಳಿದ್ದಾರೆ.
ಮಕ್ಕಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪರಿಗಣಿಸಲು ಕಂಪನಿಯು ವಯಸ್ಕರಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗದ ಕೋವೊವ್ಯಾಕ್ಸ್ ಸುರಕ್ಷತೆ ಹಾಗೂ ಲಸಿಕೆ ಪರಿಣಾಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಸಂಸ್ಥೆಗೆ ಶಿಫಾರಸ್ಸು ಮಾಡಿದೆ. ತಜ್ಞರ ಸಮಿತಿಯ ಈ ಶಿಫಾರಸ್ಸುಗಳನ್ನು ಡಿಸಿಜಿಐ ಅನುಮೋದಿಸಿರುವುದಾಗಿ ತಿಳಿದುಬಂದಿದೆ.

ಅಮೆರಿಕ ಮೂಲದ ಲಸಿಕೆ ತಯಾರಕ ನೋವಾವ್ಯಾಕ್ಸ್ ಇಂಕ್, ಕಡಿಮೆ, ಮಧ್ಯಮ ಆದಾಯದ ದೇಶಗಳಲ್ಲಿ ಹಾಗೂ ಭಾರತದಲ್ಲಿ NVX-CoV2373 ಅಭಿವೃದ್ಧಿ ಹಾಗೂ ವಾಣಿಜ್ಯೀಕರಣಕ್ಕಾಗಿ ಸೆರಂ ಇನ್ಸ್ಟಿಟ್ಯೂಟ್ ಜೊತೆ ಪರವಾನಗಿ ಒಪ್ಪಂದ ಮಾಡಿಕೊಂಡಿತ್ತು.
ಕೋವೊವ್ಯಾಕ್ಸ್ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಮಾರ್ಚ್ನಲ್ಲಿ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ವೇಳೆಗೆ ವಯಸ್ಕರಿಗೆ ಈ ಲಸಿಕೆಯನ್ನು ಬಿಡುಗಡೆ ಮಾಡಲು ಸೆರಂ ಸಂಸ್ಥೆ ಯೋಜನೆ ರೂಪಿಸಿದೆ.
(Kannada Copy of One India Kannada)
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm