ಬ್ರೇಕಿಂಗ್ ನ್ಯೂಸ್
02-07-21 02:23 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಬೇಸಿಗೆಯ ದಿನಗಳಲ್ಲಿ ಅತಿಯಾದ ಬಾಯಾರಿಕೆ ಆಗುವುದು ಸಾಮಾನ್ಯ. ಆದರೆ ಬೇರೆ ಋತುಮಾನದಲ್ಲೂ ಹೇಳಿಕೊಳ್ಳಲಾಗದಷ್ಟು ಬಾಯಾರಿಕೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ಇದು ನೀವು ಯಾವುದೋ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದೀರಾ ಎಂದು ಸೂಚಿಸುವ ಲಕ್ಷಣವಾಗಿದೆ. ಇಂತಹ ಸಮಸ್ಯೆಗಳಿಗೆ ಚಿಕಿತ್ಸೆ ನೀಡದಿದ್ದರೆ ಮುಂದೆ ಅದು ಅಪಾಯದ ಮಟ್ಟಕ್ಕೆ ತಲುಪಬಹುದು. ಆದ್ದರಿಂದ ಇಲ್ಲಿ ನಾವು ಅತಿಯಾಗಿ ಬಾಯಾರಿಕೆ ಆಗುವುದು ಯಾವ ಆರೋಗ್ಯ ಸಮಸ್ಯೆಗಳೆಂಬುದನ್ನು ಹೇಳಿದ್ದೇವೆ.

ಮಧುಮೇಹ:
ನಿಮ್ಮ ದೇಹದ ಜೀವಕೋಶಗಳಲ್ಲಿ ಇನ್ಸುಲಿನ್ ಕಡಿಎಯಾದಾಗ, ರಕ್ತದಿಂದ ಹೆಚ್ಚುವರಿ ಸಕ್ಕರೆಯನ್ನು ತೆಗೆದುಹಾಕಲು ಮೂತ್ರಪಿಂಡವು ಹೆಚ್ಚು ಶ್ರಮಿಸಬೇಕು. ಇದರ ಪರಿಣಾಮವೇ ಪದೇ ಪದೇ ಮೂತ್ರ ವಿಸರ್ಜನೆ ಆಗುವುದು. ಇದು ಹೆಚ್ಚು ನೀರು ಕುಡಿಯಲು ಪ್ರೇರೆಪಿಸುತ್ತದೆ. ಆದ್ದರಿಂದ ಮೊದಲಿಗಿಂತ ಹೆಚ್ಚು ನೀರನ್ನು ಕುಡಿಯಲು ಬಯಸುತ್ತೀರಿ. ಆಗಾಗ್ಗೆ ಮೂತ್ರ ವಿಸರ್ಜನೆ ಮತ್ತು ಅತಿಯಾದ ಬಾಯಾರಿಕೆ ಮಧುಮೇಹದ ಎರಡು ಆರಂಭಿಕ ಚಿಹ್ನೆಗಳಾಗಿವೆ.
ರಕ್ತಹೀನತೆ:
ರಕ್ತಹೀನತೆ ಎಂದರೆ ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗುವುದು. ಅಸಮರ್ಪಕ ಆಹಾರ ಅಥವಾ ಹೆಚ್ಚು ರಕ್ತಸ್ರಾವದಂತಹ ಹಲವಾರು ಕಾರಣಗಳಿಂದ ಇದು ಉಂಟಾಗುತ್ತದೆ. ನಿರ್ಜಲೀಕರಣವು ರಕ್ತಹೀನತೆಯ ಸಾಮಾನ್ಯ ಸಂಕೇತವಾಗಿದ್ದು, ನೀವು ತೀವ್ರವಾದ ರಕ್ತಹೀನತೆಯನ್ನು ಹೊಂದಿದಾಗ ಅತಿಯಾಗಿ ಬಾಯಾರಿಕೆ ಆಗಲು ಆರಂಭವಾಗುತ್ತದೆ. ತಲೆತಿರುಗುವಿಕೆ, ಆಯಾಸ, ಬೆವರುವುದು ಈ ಸ್ಥಿತಿಯ ಇತರ ಲಕ್ಷಣಗಳಾಗಿವೆ.

ಹೈಪರ್ಕಾಲ್ಸೆಮಿಯಾ:
ಹೈಪರ್ಕಾಲ್ಸೆಮಿಯಾ ಎನ್ನುವುದು ದೇಹದಲ್ಲಿರುವ ಕ್ಯಾಲ್ಸಿಯಂ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ಹೆಚ್ಚಾಗುವ ಸ್ಥಿತಿಯಾಗಿದೆ. ಅತಿಯಾದ ಪ್ಯಾರಾಥೈರಾಯ್ಡ್ ಗ್ರಂಥಿಗಳು, ಕ್ಷಯ ಮತ್ತು ಕ್ಯಾನ್ಸರ್ ನಿಂದಲೂ ಇದು ಸಂಭವಿಸಬಹುದು. ಬಾಯಾರಿಕೆಯ ಭಾವನೆ ಹೈಪರ್ಕಾಲ್ಸೆಮಿಯಾದ ಮೊದಲ ಲಕ್ಷಣವಾಗಿದೆ. ರಕ್ತದಲ್ಲಿನ ಕ್ಯಾಲ್ಸಿಯಂ ಹೆಚ್ಚಾದಾಗ ಮೂಳೆಗಳು ದುರ್ಬಲಗೊಳ್ಳಬಹುದು ಜೊತೆಗೆ ಮೂತ್ರಪಿಂಡದಲ್ಲಿ ಕಲ್ಲುಗಳು ಉಂಟಾಗಬಹುದು.
ಬಾಯಿ ಒಣಗುವುದು:
ಲಾಲಾರಸ ಗ್ರಂಥಿಗಳು ಸಾಕಷ್ಟು ಲಾಲಾರಸವನ್ನು ಬಿಡುಗಡೆ ಮಾಡದಿದ್ದಾಗ, ಅದು ನಿಮಗೆ ಅತಿಯಾದ ಬಾಯಾರಿಕೆಯನ್ನು ಉಂಟುಮಾಡಬಹುದು. ಕೆಲವು ಔಷಧಿಗಳು, ಕ್ಯಾನ್ಸರ್ ಅಥವಾ ತಂಬಾಕು ಬಳಕೆಯಂತಹ ಅಭ್ಯಾಸಗಳಿಂದ ಇದು ಸಂಭವಿಸಬಹುದು. ಇದರ ಇತರ ಲಕ್ಷಣಗಳೆಂದರೆ ಬಾಯಿಯ ದುರ್ವಾಸನೆ, ರುಚಿಯಲ್ಲಿ ಬದಲಾವಣೆ, ಒಸಡಿನಲ್ಲಿ ಸಮಸ್ಯೆ ಮತ್ತು ಅಗಿಯುವುದರಲ್ಲಿ ತೊಂದರೆ ಉಂಟಾಗಬಹುದು.

ಗರ್ಭಧಾರಣೆ:
ಗರ್ಭಧಾರಣೆಯ ಹಲವಾರು ಲಕ್ಷಣಗಳಲ್ಲಿ ಅತಿಯಾದ ಬಾಯಾರಿಕೆ ಕೂಡ ಒಂದು. ಇದು ಸಮಸ್ಯೆಯಲ್ಲ, ಎಚ್ಚರಿಕೆಯ ಚಿಹ್ನೆ ಅಷ್ಟೇ. ಮೊದಲ ತ್ರೈಮಾಸಿಕದಲ್ಲಿ, ರಕ್ತದ ಪ್ರಮಾಣವು ಹೆಚ್ಚಾಗುತ್ತದೆ, ಇದರಿಂದ ಮೂತ್ರವೂ ಹೆಚ್ಚಾಗುವುದು. ಆಗ ನಿಮ್ಮ ದೇಹದಲ್ಲಾಗುವ ನೀರಿನ ನಷ್ಟದಿಂದ ಬಾಯಾರಿಕೆ ಉಂಟಾಗುತ್ತದೆ. ಇದು ನೀರಿನ ನಷ್ಟದ ಪ್ರಮಾಣವನ್ನು ನೀವು ಪುನಃ ತುಂಬಿಸಬೇಕೆನ್ನುವ ಸೂಚನೆಯಾಗಿದೆ.
(Kannada Copy of Boldsky Kannada)
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm