ಬ್ರೇಕಿಂಗ್ ನ್ಯೂಸ್
24-07-21 12:04 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಆರೋಗ್ಯಪೂರ್ಣ ಬದುಕಿಗೆ ಯೋಗ ಮುದ್ರೆಗಳನ್ನು ಅಭ್ಯಾಸ ಮಾಡುವುದು ಉತ್ತಮ. ಇವುಗಳು ನಮ್ಮ ಆರೋಗ್ಯವನ್ನು ಚೆನ್ನಾಗಿಡುವುದಲ್ಲದೇ, ನಮ್ಮ ಮನಸ್ಥಿತಿಯನ್ನು ಹತೋಟಿಯಲ್ಲಿಟ್ಟು, ನಕಾರಾತ್ಮಕ ಶಕ್ತಿಗಳಿಂದ ದೂರವಿರುವಂತೆ ಮಾಡುತ್ತವೆ. ಅಂತಹ ಮುದ್ರೆಗಳಲ್ಲಿ ಅಪಾನ ಮುದ್ರೆಯೂ ಒಂದು. ಈ ಯೋಗ ಮುದ್ರೆ ನಮ್ಮ ದೇಹದಿಂದ ವಿಷವನ್ನು ಹೊರಹಾಕುವ ಮುಖಾಂತರ ನಮ್ಮನ್ನು ಆರೋಗ್ಯವಾಗಿಡುತ್ತದೆ. ಈ ಕುರಿತ ಮತ್ತಷ್ಟು ಮಾಹಿತಿ ನಿಮಗಾಗಿ.
ಈ ಯೋಗ ಮುದ್ರೆಯ ಮಹತ್ವ:
ಅಪಾನ ಮುದ್ರೆ ಎಂಬುದು ಪವಿತ್ರವಾದ ಕೈ ಮುದ್ರೆ ಅಥವಾ ಲಾಕ್ ಆಗಿದ್ದು, ಇದು ದೇಹವನ್ನು ಹಾಗೂ ಮನಸ್ಸನ್ನು ಶುದ್ಧಿಕರಣ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಮನಸ್ಸು ಹಾಗೂ ದೇಹದಿಂದ ನಕಾರಾತ್ಮಕ ಶಕ್ತಿ ಅಥವಾ ಅಭ್ಯಾಸಗಳನ್ನು ದೂರಮಾಡಲು ಈ ಮುದ್ರೆ ಸಹಾಯ ಮಾಡುತ್ತದೆ. ಅದಕ್ಕಾಗಿ ದಿನಕ್ಕೆ ಒಮ್ಮೆಯಾದರೂ, ನೀವು ಧ್ಯಾನ ಮತ್ತು ಯೋಗದ ಮೂಲಕ ನಿರ್ವಿಶೀಕರಣ ಚಿಕಿತ್ಸೆಯಲ್ಲಿ ಭಾಗವಹಿಸಬೇಕು.

ಹೇಗೆ ಪ್ರಯೋಜನಕಾರಿ:
ನಿರ್ವಿಶೀಕರಣ ಮುದ್ರಾ ದೇಹವನ್ನು ಕಲ್ಮಶಗಳಿಂದ ದೂರವಿರಿಸಲು ಮತ್ತು ಕೆಟ್ಟ ಶಕ್ತಿಯನ್ನು ಹೋಗಲಾಡಿಸಲು ಮನಸ್ಸನ್ನು ಪ್ರೋತ್ಸಾಹಿಸುತ್ತದೆ. ನಿಮ್ಮ ಜೀವನದಿಂದ ನೀವು ತೆಗೆದುಹಾಕಲು ಬಯಸುವ ಆಲೋಚನೆಗಳು, ಭಾವನೆಗಳು ಅಥವಾ ಘಟನೆಗಳನ್ನು ದೂರ ಮಾಡಲು ಈ ಮುದ್ರೆಯು ನಿಮಗೆ ಸಹಾಯ ಮಾಡುತ್ತದೆ, ಜೊತೆಗೆ ನಿಮ್ಮನ್ನು ಪೇಚಾಟಕ್ಕೆ ಸಿಲುಕಿಸುವ ನಿಮ್ಮ ಕೆಲವೊಂದು ಹಾನಿಕಾರಕ ನಡವಳಿಕೆಗಳನ್ನು ಸಹ ಕಡಿಮೆ ಮಾಡುತ್ತದೆ. ಈ ಮುದ್ರಾವನ್ನು ಮೂತ್ರದ ಸಮಸ್ಯೆ, ಮಲಬದ್ಧತೆ, ಉಬ್ಬುವಿಕೆ, ಮೂಲವ್ಯಾಧಿ, ವಾಂತಿ ಮತ್ತು ಚಡಪಡಿಕೆಗೆ ಚಿಕಿತ್ಸೆ ನೀಡಲು ಬಳಸಬಹುದು ಎಂದು ಸಂಶೋಧನೆಯು ಸಾಬೀತುಪಡಿಸುತ್ತದೆ. ಇದು ಮುಟ್ಟಿನ ನೋವು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಯಲ್ಲಿ, ಪಿತ್ತಜನಕಾಂಗದ ಕಾರ್ಯಚಟುವಟಿಕೆಯನ್ನು ನಿಯಂತ್ರಿಸಲು ಈ ಮುದ್ರೆ ಸಹಾಯ ಮಾಡುತ್ತದೆ. ಈ ಅಪಾನ ಮುದ್ರಾ ಯಾವುದೇ ರೀತಿಯ ನಿರ್ವಿಶೀಕರಣ ಅಥವಾ ಶುದ್ಧೀಕರಣ ಪ್ರಕ್ರಿಯೆಯಲ್ಲಿ ಬಹಳ ಪರಿಣಾಮಕಾರಿಯಾಗಿದೆ. ಇದನ್ನು ಟಿವಿ ನೋಡುವಾಗ, ಪುಸ್ತಕ ಓದುವಾಗ ಅಥವಾ ಹಾಸಿಗೆಯ ಮೇಲೆ ಮಲಗಿರುವಾಗ ದಿನದ ಯಾವುದೇ ಸಮಯದಲ್ಲಿ ಅಭ್ಯಾಸ ಮಾಡಬಹುದು. ನಿಮ್ಮ ದೇಹದೊಳಗಿನ ಅಶುದ್ಧವಾಗಿರುವ ಎಲ್ಲವನ್ನೂ ತೆಗೆದುಹಾಕಲು ಸಾಕಷ್ಟು ವಿಶ್ರಾಂತಿ ಪಡೆಯುವುದು ಮತ್ತು ಸಾಕಷ್ಟು ನೀರು ಕುಡಿಯುವುದು ಬಹಳ ಮುಖ್ಯ.

ಅಪಾನ ಮುದ್ರೆ ಮಾಡುವ ವಿಧಾನ:
ಶಾಂತಿಯುತ ಸ್ಥಳವನ್ನು ಹುಡುಕಿ. ಸುರಕ್ಷಿತ ಮತ್ತು ಆಧಾರವಾಗಿರುವ ಸ್ಥಾನದಲ್ಲಿ, ಮಲಗು, ಕುಳಿತುಕೊಳ್ಳಿ ಅಥವಾ ನಿಂತುಕೊಳ್ಳಿ. ಉಂಗುರದ ಬೆರಳು ಮತ್ತು ಮಧ್ಯದ ಬೆರಳ ತುದಿಗಳನ್ನು ಹೆಬ್ಬೆರಳ ತುದಿಗೆ ಸಂಧಿಸಿದಾಗ ಅಪಾನ ಮುದ್ರೆಯಾಗಿ ರೂಪಗೊಳ್ಳುವುದು. ನಿಧಾನ, ಆಳವಾದ ಉಸಿರನ್ನು ತೆಗೆದುಕೊಳ್ಳುವಲ್ಲಿ ಗಮನಹರಿಸಿ.
(Kannada Copy of Boldsky Kannada)
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm