ಬ್ರೇಕಿಂಗ್ ನ್ಯೂಸ್
14-08-21 02:54 pm Shreeraksha, Boldsky ಡಾಕ್ಟರ್ಸ್ ನೋಟ್
ಕಡಿಮೆ ಕ್ಯಾಲೋರಿ ಮತ್ತು ಫೈಬರ್ ತುಂಬಿರುವ ಆರೋಗ್ಯಕರವಾದ ಹಣ್ಣಿನಲ್ಲಿ ಪೇರಳೆ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಪೇರಳೆ ಹಣ್ಣು ಮಾತ್ರವಲ್ಲ, ಅದರ ಎಲೆಯೂ ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆಹಾರದಲ್ಲಿ ಪೇರಳೆ ಎಲೆಯ ರಸವನ್ನು ಸೇರಿಸುವುದರಿಂದ ನಿಮ್ಮ ಹೃದಯದ ಆರೋಗ್ಯ, ಜೀರ್ಣಕ್ರಿಯೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆ ಸುಧಾರಣೆಯಾಗುವುದು. ಆದರೆ ಈ ಹಣ್ಣಿನಲ್ಲಿರುವ ಇರುವ ಕೆಲವು ಸಂಯುಕ್ತಗಳಿದ, ಪೇರಳೆಯು ಎಲ್ಲರಿಗೂ ಉತ್ತಮವಲ್ಲ. ಹಾಗಾದರೆ, ಪೇರಳೆ ಹಣ್ಣನ್ನು ಯಾರು ತಿನ್ನಬಾರದು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
ಪೇರಳೆಯಲ್ಲಿರುವ ಪೋಷಕಾಂಶಗಳು:
ಪೇರಳೆಯಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. 1 ಹಣ್ಣಿನಲ್ಲಿ ಕೇವಲ 112 ಕ್ಯಾಲೋರಿಗಳು ಮತ್ತು 23 ಗ್ರಾಂ ನಷ್ಟು ಕಾರ್ಬೋಹೈಡ್ರೇಟ್ ಇರುತ್ತದೆ. ನಾರಿನ ಅಂಶವು ಸುಮಾರು 9 ಗ್ರಾಂಗಳಾಗಿದ್ದು, ಪೇರಳೆಯಲ್ಲಿ ಯಾವುದೇ ಪಿಷ್ಟವಿಲ್ಲ. ಅಧ್ಯಯನಗಲ ಪ್ರಕಾರ, ಈ ಹಣ್ಣು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವುದರಿಂದ ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿ.. ಇದರ ಜೊತೆಯಲ್ಲಿ, ಫೋಲೇಟ್ ಮತ್ತು ಬೀಟಾ ಕ್ಯಾರೋಟಿನ್ ಈ ಹಣ್ಣಿನಲ್ಲಿ ಹೇರಳವಾಗಿ ಕಂಡುಬರುವ ಇತರ ಕೆಲವು ಪೋಷಕಾಂಶಗಳಾಗಿವೆ.
ಉಬ್ಬುವಿಕೆಯಿಂದ ಬಳಲುತ್ತಿರುವವರು:
ಪೇರಳೆಯಲ್ಲಿ ವಿಟಮಿನ್ ಸಿ ಮತ್ತು ಫ್ರಕ್ಟೋಸ್ ಸಮೃದ್ಧವಾಗಿದ್ದು, ಇವುಗಳಲ್ಲಿ ಯಾವುದೇ ಒಂದರ ಹೆಚ್ಚಿನ ಪ್ರಮಾಣವು ನಿಮಗೆ ಉಬ್ಬಿದ ಅನುಭವವನ್ನು ಉಂಟುಮಾಡಬಹುದು. ಇದು ನೀರಿನಲ್ಲಿ ಕರಗುವ ವಿಟಮಿನ್ ಆಗಿರುವುದರಿಂದ ನಮ್ಮ ದೇಹವು ಹೆಚ್ಚು ವಿಟಮಿನ್ ಸಿ ಯನ್ನು ಹೀರಿಕೊಳ್ಳಲು ಕಷ್ಟವಾಗುತ್ತದೆ, ಆದ್ದರಿಂದ ಉಬ್ಬುವಿಕೆ ಉಂಟಾಗುತ್ತದೆ. ಅಷ್ಟೇ ಅಲ್ಲ, ಸುಮಾರು 40 ಪ್ರತಿಶತ ಜನರು ಫ್ರಕ್ಟೋಸ್ ಮಾಲಾಬ್ಸರ್ಪ್ಶನ್ ಎಂಬ ಸ್ಥಿತಿಯಿಂದ ಬಳಲುತ್ತಿದ್ದಾರೆ. ಇದರಲ್ಲಿ, ನೈಸರ್ಗಿಕ ಸಕ್ಕರೆಯು ದೇಹದಿಂದ ಹೀರಲ್ಪಡುವುದಿಲ್ಲ, ಬದಲಾಗಿ ಅದು ನಮ್ಮ ಹೊಟ್ಟೆಯಲ್ಲಿ ಕುಳಿತು ಉಬ್ಬುವುದಕ್ಕೆ ಕಾರಣವಾಗುತ್ತದೆ. ಪೇರಳೆ ತಿಂದು ತಕ್ಷಣ ನಿದ್ರಿಸುವುದು ಕೂಡ ಹೊಟ್ಟೆ ಉಬ್ಬುವಿಕೆಗೆ ಕಾರಣವಾಗಬಹುದು.
ಕರುಳಿನ ಸಿಂಡ್ರೋಮ್ನಿಂದ ಬಳಲುತ್ತಿರುವವರು:
ಪೇರಳೆಯಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ಮಲಬದ್ಧತೆಯನ್ನು ನಿವಾರಿಸಲು ಮತ್ತು ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಆದರೆ ಅತಿಯಾದ ಸೇವನೆಯು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಗೊಂದಲಕ್ಕೀಡು ಮಾಡುತ್ತದೆ, ವಿಶೇಷವಾಗಿ ನೀವು ಕಿರಿಕಿರಿಯುಂಟುಮಾಡುವ ಕರುಳಿನ ಸಿಂಡ್ರೋಮ್ನಿಂದ ಬಳಲುತ್ತಿದ್ದರೆ. ಆದ್ದರಿಂದ, ಸೀಮಿತ ರೀತಿಯಲ್ಲಿ ತಿನ್ನಲು ಮುಖ್ಯವಾಗಿದೆ.
ಮಧುಮೇಹದಿಂದ ಬಳಲುತ್ತಿರುವವರು:
ಕಡಿಮೆ ಗ್ಲೈಸೆಮಿಕ್ ಸೂಚ್ಯಂಕದಿಂದಾಗಿ ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಪೇರಳೆ ಪ್ರಮುಖ ಹಣ್ಣುಗಳಲ್ಲಿ ಒಂದಾಗಿದೆ. ಆದರೆ, ನೀವು ಈ ಹಣ್ಣು ಸೇವಿಸಿದ ನಂತರ ನಿಮ್ಮ ರಕ್ತದಲ್ಲಿನ ಸಕ್ಕರೆಯ ಪ್ರಮಾಣವಾಗಿ ನಿಯಮಿತವಾಗಿ ಪತ್ತೆ ಹಚ್ಚಿ. 100 ಗ್ರಾಂ ಕತ್ತರಿಸಿದ ಪೇರಳೆಯು 9 ಗ್ರಾಂ ನೈಸರ್ಗಿಕ ಸಕ್ಕರೆಯನ್ನು ಹೊಂದಿರುತ್ತದೆ. ಆದ್ದರಿಂದ, ಅತಿಯಾಗಿ ತಿನ್ನುವುದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸಬಹುದು. ಮಿತವಾಗಿ ತಿನ್ನುವುದು ಅತ್ಯುತ್ತಮ ಆಯ್ಕೆಯಾಗಿದೆ.
ಪೇರಳೆ ತಿನ್ನಲು ಸುರಕ್ಷಿತ ಮಿತಿ ಮತ್ತು ಸರಿಯಾದ ಸಮಯ:
ದಿನಕ್ಕೆ ಒಂದು ಬಾರಿ ಪೇರಳೆ ಸೇವನೆ ಸುರಕ್ಷಿತವಾಗಿದೆ. ಅದಕ್ಕಿಂತ ಹೆಚ್ಚು ಸೇವಿಸುವುದು ಒಳ್ಳೆಯದಲ್ಲ. ನೀವು ವ್ಯಾಯಾಮ ಆದ ನಂತರ ಅಥವಾ ಊಟವಾದ ಒಮದೆರಡು ಗಂಟೆಗಳ ಬಳಿಕ ಸೇವಿಸುವುದು ಉತ್ತಮ ದಾರಿ. ರಾತ್ರಿ ಈ ಹಣ್ಣುಗಳನ್ನು ಸೇವಿಸಬೇಡಿ ಏಕೆಂದರೆ ಅದು ಶೀತ ಮತ್ತು ಕೆಮ್ಮಿಗೆ ಕಾರಣವಾಗಬಹುದು. ಪೇರಳೆ ಎಲೆಗಳ ಸಾರಗಳ ಬಳಕೆ ಮತ್ತು ಪ್ರಯೋಜನಗಳ ಮೇಲೆ ಸೀಮಿತ ಪುರಾವೆಗಳು ಲಭ್ಯವಿದೆ. ಆದರೆ ಯಾವುದೇ ತೀರ್ಮಾನಕ್ಕೆ ಬರಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ. ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ.
(Kannada Copy of Boldsky Kannada)
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm