ಬ್ರೇಕಿಂಗ್ ನ್ಯೂಸ್
25-08-21 11:39 am Reena TK, Boldsky ಡಾಕ್ಟರ್ಸ್ ನೋಟ್
ಕೋವಿಡ್ 19 ಬಗ್ಗೆ ಪೋಷರಲ್ಲಿ ಆತಂಕ ಇದ್ದೇ ಇದೆ, ಅದರಲ್ಲೂ ಮತ್ತೆ ಶಾಲೆ ಪ್ರಾರಂಭವಾಗಿದೆ, ಕೊರೊನಾ ರೂಪಾಂತರ ವೈರಸ್ ಮಕ್ಕಳ ಮೇಲೆ ಪರಿಣಾಮ ಬೀರಬಹುದೇ ಎಂಬ ಆತಂಕ ಪೋಷಕರಲ್ಲಿ ಇದ್ದೇ ಇದೆ, ಆದ್ದರಿಂದ ಮಕ್ಕಳಿಗೂ ವ್ಯಾಕ್ಸಿನ್ ಬಂದ್ರೆ ಸ್ವಲ್ಪ ಸಮಧಾನವಾಗುತ್ತಿತ್ತು ಎಂದು ಪ್ರತಿಯೊಬ್ಬ ಪೋಷಕರು ಬಯಸುತ್ತಿದ್ದಾರೆ. ಮಕ್ಕಳಿಗೆ ಯಾವಾಗ ಲಸಿಕೆ ಸಿಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಮೊದಲಿಗೆ ಇತರ ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ನೀಡಲಾಗುವುದು
ಮಕ್ಕಳಿಗೆ ನೀಡುವ ಲಸಿಕೆಯನ್ನು ಕೂಡ ಅಗ್ಯತತೆ ಅನುಗುಣವಾಗಿ ನೀಡಲಾಗುವುದು ಅಂದ್ರೆ ಇತರ ಆರೋಗ್ಯ ಸಮಸ್ಯೆ ಹೊಂದಿರುವ ಮಕ್ಕಳಿಗೆ ಆದ್ಯತೆ ಮೇರೆಗೆ ಮೊದಲಿಗೆ ನೀಡಲಾಗುವುದು, ನಂತರ ಆರೋಗ್ಯವಂತ ಮಕ್ಕಳಿಗೆ ನೀಡಲಾಗುವುದು. ಅಕ್ಟೋಬರ್ 2021ರಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಒಂದು ಡೋಸ್ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕಳೆದ ವಾರ ತುರ್ತು ಸಂದರ್ಭದಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮೊದಲ ಡೋಸ್ ನೀಡುವುದಾಗಿ ಸರ್ಕಾರ ಹೇಳಿದೆ.


ಮಕ್ಕಳಿಗೆ ನೀಡಲು ಎಷ್ಟು ಲಸಿಕೆ ಬೇಕಾಗುವುದು?
ಭಾರತದಲ್ಲಿ 12-17 ವರ್ಷದ ಸುಮಾರು 12 ಕೋಟಿ ಮಕ್ಕಳಿದ್ದಾರೆ, ಅವರಲ್ಲಿ ಶೇ. 1ರಷ್ಟು ಮಕ್ಕಳಲ್ಲಿ ಇತರ ಆರೋಗ್ಯ ಸಮಸ್ಯೆ ಇದೆ. 2 ವರ್ಷದ ಮೇಲ್ಪಟ್ಟ ಮಕ್ಕಳು ಸುಮಾರು 44 ಕೋಟಿ ಇದ್ದಾರೆ. ಭಾರತದ ಎಲ್ಲಾ ಮಕ್ಕಳಿಗೆ 2022ರಲ್ಲಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ಇತರ ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಈ ಅಕ್ಟೋಬರ್ನಿಂದ ಲಸಿಕೆ ಸಿಗುವ ಸಾಧ್ಯತೆ ಇದೆ.


ಮಕ್ಕಳ ಆರೋಗ್ಯದ ಬಗ್ಗೆ ಪೋಷಕರೇ ಎಚ್ಚರ!
ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಹೆಚ್ಚು ಎಚ್ಚರ ವಹಿಸಬೇಕು. ಸಭೆ-ಸಮಾರಂಭಗಳಿಗೆ ಕರೆದುಕೊಂಡು ಹೋಗುವುದು ಕಡಿಮೆ ಮಾಡಿ, ಮನೆಯಲ್ಲಿ ಯಾರಿಗಾದರೂ ಅನಾರೋಗ್ಯ ಉಂಟಾದರೆ ಮಕ್ಕಳ ಸಂಪರ್ಕಕ್ಕೆ ಬರಬೇಡಿ. ಇನ್ನು ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ಕೂಡಲೇ ಮಕ್ಕಳ ವೈದ್ಯರಿಗೆ ತೋರಿಸಿ. ಶಾಲೆಗೆ ಹೋಗುವ ಮಕ್ಕಳಿಗೆ ಮಾಸ್ಕ್ ಧರಿಸುವಂತೆ ಸೂಚಿಸಿ, ಕೈಗಳಿಗೆ ಆಗಾಗ ಸ್ಯಾನಿಟೈಸರ್ ಹಾಕಲು ಹೇಳಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿಸಿ. ಮಕ್ಕಳಿಗೆ ಇವೆಲ್ಲಾ ಸ್ವಲ್ಪ ಕಷ್ಟವೇ ಆದರೂ ಈಗ ಇವುಗಳನ್ನು ಪಾಲಿಸದೇ ಬೇರೆ ದಾರಿಯಿಲ್ಲ, ಇದರ ಕುರಿತು ಪೋಷಕರು ಮಕ್ಕಳಿಗೆ ಮನವರಿಕೆ ಮಾಡಬೇಕು.
(Kannada Copy of Bold Sky Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am